ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಥಣಿ ತಾಲೂಕಿನ ಕೊಕಟನೂರದಲ್ಲಿ ನಡೆಯಲಿರುವ ಶ್ರೀ ಯಲ್ಲಮ್ಮದೇವಿ ಜಾತ್ರೆ ಅಂಗವಾಗಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಜಯಪುರ ವಿಭಾಗದಿಂದ ಡಿಸೆಂಬರ್ ೧೫ ರಿಂದ ಡಿಸೆಂಬರ್ ೨೧ರವರೆಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ಕೊಕಟನೂರಕ್ಕೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿವೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಘಟಕ ವ್ಯವಸ್ಥಾಪಕರ ಸಂಖ್ಯೆ ವಿಜಯಪುರ-೧: ೭೭೬೦೯೯೨೨೬೩, ವಿಜಯಪುರ-೨: ೭೭೬೦೯೯೨೨೬೪, ಇಂಡಿ- ೭೭೬೦೯೯೨೨೬೫, ಸಿಂದಗಿ- ೭೭೬೦೯೯೨೨೬೬, ಮುದ್ದೇಬಿಹಾಳ- ೭೭೬೦೯೯೨೨೬೭, ತಾಳಿಕೋಟ- ೭೭೬೦೯೯೨೨೬೮, ಬಸವನ ಬಾಗೇವಾಡಿ- ೭೭೬೦೯೯೨೨೬೯, ಕೇಂದ್ರ ಬಸ್ ನಿಲ್ದಾಣ ವಿಜಯಪುರ ದೂರವಾಣಿ ಸಂಖ್ಯೆ ೦೮೩೫೨-೨೫೧೩೪೪ ಹಾಗೂ ಮೊಬೈಲ್ ಸಂಖ್ಯೆ – ೭೭೬೦೯೯೨೨೫೮ ಸಂಪರ್ಕಿಸಬಹುದಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಯ ಪ್ರಕಟಣೆ ತಿಳಿಸಿದೆ.
