Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಣ್ಣು ವಿಜ್ಞಾನದ ಜ್ಞಾನ ದಾಸೋಹ ನಿರಂತರವಾಗಿರಲಿ :ಶರಣಗೌಡ
(ರಾಜ್ಯ ) ಜಿಲ್ಲೆ

ಮಣ್ಣು ವಿಜ್ಞಾನದ ಜ್ಞಾನ ದಾಸೋಹ ನಿರಂತರವಾಗಿರಲಿ :ಶರಣಗೌಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದೇಬಿಹಾಳ: ಕೃಷಿ ಪರಿಸರದ ಮೂಲ ಸೆಲೆ ಎಂತಿರುವ ಹಾಗೂ ಭೌತಿಕ, ರಾಸಾಯನಿಕ, ಜೈವಿಕ ಗುಣಧರ್ಮಗಳಿಂದ ರಚಿತವಾದ ಮಣ್ಣು ವಿಜ್ಞಾನದ ವಿಸ್ಮಯವನ್ನು ಸಾರುವ ಜ್ಞಾನ ದಾಸೋಹ ನಿರಂತರವಾಗಿರಲಿ ಎಂದು ಕೃಷಿ ಉಪನಿರ್ದೇಶಕ ಶರಣಗೌಡರು ಹೇಳಿದರು.
ಇಲ್ಲಿನ ಆದಿತ್ಯ ಫ್ಲಾಜಾ ಸಭಾಂಗಣದಲ್ಲಿ ಅಮೃತ ರೈತ ಉತ್ಪಾದಕ ಸಂಸ್ಥೆಗಳ ಯೋಜನೆಯಡಿ ಸ್ಥಾಪಿಸಲಾದ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿ, ಬೆಂಗಳೂರಿನ ಸಿ-ಕ್ಯಾಂಪ್ ಹಾಗೂ ಕೃಷಿತಂತ್ರ ಸಂಸ್ಥೆಗಳ ನೆರವಿನೊಂದಿಗೆ ಮಣ್ಣು ನೀರು ಮತ್ತು ಸಸ್ಯ ಅಂಗಾಂಶ ಪರೀಕ್ಷಿಸಲು ಸ್ಥಾಪಿಸಲಾದ ದಾಸೋಹಿ ಕೃಷಿ ವಿಶ್ಲೇಷಣಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಣ್ಣಿನ ಮೇಲೆ ನಡೆಯುತಿರುವ ಅಸ್ವಾಭಾವಿಕ ದಬ್ಬಾಳಿಕೆ, ಅವೈಜ್ಞಾನಿಕ ನಿರ್ವಹಣೆ ಮತ್ತು ಹವಾಮಾನ ಬದಲಾವಣೆ ದುಷ್ಪರಿಣಾಮಗಳಿಂದ ಮಣ್ಣು ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಕೊನೆ ಹಂತ ತಲುಪಿರುವುದನ್ನು ಗಂಭಿರವಾಗಿ ಪರಿಗಣಿಸಿ ಮಣ್ಣು ಉಳಿಸುವ ಅಭಿಯಾನದೊಂದಿಗೆ ಸುಸ್ಥಿರ ಕೃಷಿಯ ತಳಮಟ್ಟವನ್ನು ಬಲಪಡಿಸುವ ಉದ್ದೇಶದಿಂದ ಅತ್ಯಾಧುನಿಕ ಮತ್ತು ನಿಖರ ತಾಂತ್ರಿಕತೆಗಳನ್ನು ಬಳಸಿಕೊಂಡು ದಾಸೋಹಿ ಕೃಷಿ ವಿಶ್ಲೇಷಣಾ ಕೇಂದ್ರ ಸ್ಥಾಪಿಸಿರುವುದು ರೈತರಿಗೆ ವರವಾಗಲಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಸನಗೌಡ ಪಾಟೀಲ ಮಾತನಾಡಿ ಮಣ್ಣಿನ ರಚನೆ, ವರ್ಗೀಕರಣ ಮತ್ತು ಫಲವತ್ತತೆ ಆಧಾರದ ಮೇಲೆ ನಿರ್ವಹಣಾ ಕ್ರಮಗಳನ್ನು ಅಳವಡಸಿಕೊಳ್ಳುವುದರಿಂದ ಕೃಷಿಯನ್ನು ಸುಸ್ಥಿರ ಕಕ್ಷೆಯಲ್ಲಿರಿಸಿ ಭವಿಷ್ಯದ ಆಹಾರ ಭದ್ರತೆಗೆ ಭದ್ರ ಅಡಿಪಾಯ ಹಾಕಲು ಸಾಧ್ಯ ಎಂಬುದನ್ನು ರೈತರೆಲ್ಲ ತಿಳಿದು ಮಣ್ಣು ಪರೀಕ್ಷೆಯನ್ನು ಕೃಷಿ ಹಂಗಾಮು ಆರಂಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಪ್ರಾಶಸ್ತ್ಯದ ನಡೆ ಎಂದು ರೈತರು ಪ್ರತಿಜ್ಞೆಗೈದು ಮುನ್ನೆಡೆದಾಗ ಮಾತ್ರ ಭವಿಸ್ಯವನ್ನು ಹಸಿವು ಮುಕ್ತವಾಗಿರಿಸಲು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ, ಚಿಂತಕ ಅರವಿಂದ ಕೊಪ್ಪ ಮಾತನಾಡಿ ಮಣ್ಣಿನ ಫಲವತ್ತತೆಯನ್ನು ಸುಧಾರಿಸಿ ಬೆಳೆಗಳಿಗೆ ಸಮತೋಲಿತ ಪೋಷಣೆ ನೀಡಿ, ಏಕರೂಪದ ಹೆಚ್ಚಿನ ಇಳುವರಿ ಮತ್ತು ಉತ್ತಮ ಗುಣಮಟ್ಟದ ಹೊಂದಲು ಪ್ರತಿಯೊಬ್ಬ ರೈತರು ಪ್ರತಿ ಹಂಗಾಮು ಪೂರ್ವದಲ್ಲಿ ಕೆ.ವೈ.ಎಸ್ (ನಿಮ್ಮ ಮಣ್ಣು ತಿಳಿಯಿರಿ) ಮಾಡಿಸಿಕೊಳ್ಳಲು ಮುಂದಾಗಬೇಕೆಂದ ಅವರು ಆ ಕಾರಣಕ್ಕಾಗಿ ನಿಖರ ತಂತ್ರಜ್ಞಾನ ಬಳಸಿ ಸ್ಥಾಪಿಸಲಾದ ಕೃಷಿ ವಿಶ್ಲೇಷಣಾ ಪ್ರಯೋಗಾಲಯದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಸಿ-ಕ್ಯಾಂಪ್ ಯೋಜನೆಯ ಕ್ಷೇತ್ರಾಧಿಕಾರಿ ಕಾರ್ತಿಕ, ಕೃಷಿತಂತ್ರ ಸಂಸ್ಥೆಯ ಮಾರುಕಟ್ಟೆ ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ, ಮಹಾರಾಷ್ಟçದ ಕಬ್ಬು ವಿಜ್ಞಾನಿ ವಿಜಯ ಮಾಳೆ, ಜೈನ ಕಂಪನಿಯ ನೀರಾವರಿ ತಜ್ಞ ಮಹೇಂದ್ರ ಬಿರಾದಾರ ಮಾತನಾಡಿದರು. ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ (ತಾಂತ್ರಿಕ) ರಾಘವೇಂದ್ರ ದೇಶಪಾಂಡೆ, ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಯ ನಿರ್ದೇಶಕ ಆರ್.ಬಿ ಸಜ್ಜನ, ಸೋಮನಗೌಡ ಬಿರಾದಾರ(ಮಡಿಕೇಶ್ವರ), ಪರಸಪ್ಪ ಮೇಟಿ(ಜಟ್ಟಗಿ), ಬಸವರಾಜ ಕುಂಟೋಜಿ, ಭೀಮಣ್ಣ ಮಳಗೌಡರ, ಪ್ರಭುಸ್ವಾಮಿ ಹಿರೇಮಠ ಮತ್ತಿತರರು ಭಾಗವಹಿಸಿದ್ದರು.
ಗುಂಡಪ್ಪ ಬಿರಾದಾರ ಸ್ವಾಗತಿಸಿದರು. ನ್ಯಾಯವಾದಿ ರಶ್ಮಿ ಕೊಪ್ಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಿದ್ದಣ್ಣ ಹೊಳಿ ಕಾರ್ಯಕ್ರಮ ನಿರೂಪಿಸಿದರು. ಆರತಿ ರಾಯಚೂರಕರ ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.