Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿ ಕ್ಷೇತ್ರದಲ್ಲಿ ಏಕಲವ್ಯ ಶಾಲೆ ಸ್ಥಾಪಿಸಲು ತಳವಾರ ಸಮಾಜ ಆಗ್ರಹ
(ರಾಜ್ಯ ) ಜಿಲ್ಲೆ

ಇಂಡಿ ಕ್ಷೇತ್ರದಲ್ಲಿ ಏಕಲವ್ಯ ಶಾಲೆ ಸ್ಥಾಪಿಸಲು ತಳವಾರ ಸಮಾಜ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕ್ಷೇತ್ರದಲ್ಲಿ ಏಕಲವ್ಯ ಶಾಲೆ ಸ್ಥಾಪಿಸುವ ಮೂಲಕ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ವಸತಿಯುತ ಶಿಕ್ಷಣ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡಬೇಕೆಂದು ತಾಲ್ಲೂಕಿನ ನಾದ ಗ್ರಾಮದ ತಾ.ಪಂ ಸದಸ್ಯ ಸಿದ್ದಪ್ಪ ತಳವಾರ ಭಾನುವಾರ ಮಾತನಾಡಿದರು.
ಇಂಡಿ ನಗರದಲ್ಲಿ ತಳವಾರ ಸೇವಾ ಸಮಿತಿ (ಟಿಎಸ್ಎಸ್) ಹಾಗೂ ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿ ಜಂಟಿಯಾಗಿ ನಡೆಸಿರುವ ಜಾಗೃತಿ ಸಭೆಯಲ್ಲಿ ಹೇಳಿದರು.
ತೆನಹಳ್ಳಿ ತಾ.ಪಂ ಸದಸ್ಯ ಸಿದ್ದಪ್ಪ ನಾಟೀಕಾರ ಮಾತನಾಡಿ, ಯಾವುದೇ ಒಂದು ಸಮಾಜ ಮುಖ್ಯ ಭೂಮಿಕೆಯಲ್ಲಿ ಬರಬೇಕಾದರೆ ಶಿಕ್ಷಣ ಅವಶ್ಯಕ. ಆದರೆ ಇಂಡಿ ವಿಧಾನ ಸಭಾ ಮತಕ್ಷೇತ್ರದಲ್ಲಿ ಸುಮಾರು ಒಟ್ಟು 35 ಸಾವಿರ ಕ್ಕಿಂತಲೂ ಹೆಚ್ಚಿರುವ ತಳವಾರ, ಹರಿಣಶಿಕಾರಿ,ಬೇಡ,ಬೇಡರ, ವಾಲ್ಮೀಕಿ ಸಮಾಜದ, ಪರಿಶಿಷ್ಟ ಪಂಗಡದ ಜನರ ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಶಾಲೆ ಇಲ್ಲವಾದರೆ ಅವರ ಪರಿಸ್ಥಿತಿ ಏನಾಗಬಾರದು ಹೇಳಿ. ಅದಕ್ಕಾಗಿ ಈ ಎಲ್ಲಾ ಸಮುದಾಯದ ಜನರ ಪರವಾಗಿ ಒಕ್ಕೂರಲಿನಿಂದ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಏಕಲವ್ಯ ಶಾಲೆಯನ್ನು ಸ್ಥಾಪಿಸಲು ಮನವಿ ಮಾಡುತ್ತೆನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಳವಾರ ಸಮಾಜದ ಹಿರಿಯ ಮುಖಂಡ,ನಿವೃತ್ತ ಮುಖ್ಯ ಉಪಾಧ್ಯಾಯ ಬಿಎಸ್ ತಳವಾರ ಮಾತನಾಡಿದ ಅವರು, ಎಲ್ಲಾ ಮಕ್ಕಳಿಗೆ ಸಿಗುವ ಶಿಕ್ಷಣ ನಮ್ಮ ಮಕ್ಕಳಿಗೂ ಸಿಗಬೇಕು. ಹಾಗಾಗಿ ನಮ್ಮ ತಾಲ್ಲೂಕಿನಲ್ಲಿ ಕೇಂದ್ರೀಯ ಏಕಲವ್ಯ ಮಾದರಿ ವಸತಿ ಶಾಲೆಗಳ ಸ್ಥಾಪನೆ ಅಗತ್ಯವಿದೆ. ವಿಶೇಷವಾಗಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ವಸತಿ ಮತ್ತು ಕ್ರೀಡಾ ಸೌಲಭ್ಯಗಳನ್ನು ಒದಗಿಸಿ, ಅವರ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಇದು ಸಹಕಾರಿ. ಈ ಶಾಲೆಗಳು ನಮ್ಮ ಮಕ್ಕಳ ಶಿಕ್ಷಣದ ಹಂತವನ್ನು ಸುಧಾರಿಸಲು ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಸ್ಥಳೀಯ ಅಗತ್ಯತೆಗಳಿಗೆ ಅನುಗುಣವಾಗಿ ಇವುಗಳ ಸ್ಥಾಪನೆ ಆಗಬೇಕು ಎಂದು ಹೇಳಿದರು.
ಟಿಎಸ್ಎಸ್ ಜಿಲ್ಲಾ ಅಧ್ಯಕ್ಷ ಸೋಮು ಜಮಾದಾರ ಮಾತನಾಡಿ, ನಮ್ಮ ತಳವಾರ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದ ಜನ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿದೆ. ಆದರೆ ಕೇವಲ ರಾಜಕೀಯ ನಾಯಕರ ಮತಬ್ಯಾಂಕ್ ಗೆ ಮೀಸಲು ಇಟ್ಟಂತೆ ಆಗಿದೆ. ಇಲ್ಲಿಯವರೆಗೆ ನಮ್ಮ ಜನರಿಗೆ ಒಂದೇ ಒಂದು ಯೋಗ್ಯವಾದ ಸ್ಥಳ, ಸಾಂಸ್ಕೃತಿಕ ಭವನ ಜೊತೆಯಲ್ಲಿ ಶಿಕ್ಷಣ ಕಲಿಯಲು ವಿಶೇಷ ಶಾಲೆಯಿಲ್ಲ ಎಂದರೆ ನಮ್ಮ ಬದುಕಿನ ಬಗ್ಗೆ ನಾವೇ ಅವಲೋಕನ ಮಾಡಿಕೊಳ್ಳಬೇಕು. ಹಾಗಾಗಿ ಇಂಡಿ‌ ನಗರದಲ್ಲಿ ಅತೀ ತುರ್ತಾಗಿ ಏಕಲವ್ಯ ವಸತಿ ಶಾಲೆಗೆ ಶಾಸಕರು ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದರೆ ಬರುವ ಭವಿಷ್ಯದ ದಿನಗಳು ಕಠಣವಾಗುವ ಸಾಧ್ಯತೆ ಹೆಚ್ಚಾಗುತ್ತದೆ ಎಂದು ಹೇಳಿದರು.
ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ತಾಲ್ಲೂಕು ಅಧ್ಯಕ್ಷ ರೇವಣ್ಣ ಹತ್ತಳ್ಳಿ‌ ಮಾತನಾಡಿದರು.
ಈ ಸಂದರ್ಭದಲ್ಲಿ ತಳವಾರ ಸಮಾಜದ ಹಿರಿಯ ಮುಖಂಡ ಮಲ್ಲಪ್ಪ‌ ನಾಟೀಕಾರ, ಭೀಮರಾಯ ಬಿಲ್ಕಾರ, ಪರಶುರಾಮ ನಾಟೀಕಾರ, ರವಿ ರಾಯಜಿ, ಶಿವರಾಜ ವಾಲಿಕಾರ, ಸಿದ್ದರಾಮ ನಾಟೀಕಾರ, ಚಂದ್ರಾಮ ತಳವಾರ, ಎಚ್ ಕೆ ಅಳ್ಳಗಿ, ಈರಣ್ಣ ತಳವಾರ, ಸುರೇಶ ಡೊಂಗ್ರೊಜ್, ಅಮೋಘಿ ತಳವಾರ, ಪ್ರಕಾಶ ಬೈರೋಡಗಿ, ರಾವುತರಾಯ ಕಾಮನಕೇರಿ, ಈಶ್ವರಪ್ಪ‌ ಮಣಿಗಿರಿ, ಅನೀಲ ಕೋಳಿ,ಸುಧಾಕರ ಆಳೂರ, ಶ್ರೀಧರ ನಾಟೀಕಾರ, ಶ್ರೀಕಾಂತ ಅಳ್ಳಗಿ, ಸಿದ್ದು ತಳವಾರ, ಮಲ್ಲಿಕಾರ್ಜುನ ಕುಮಸಿಗಿ ಇನ್ನೂ ಅನೇಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.