Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಾದಿ ಪ್ರಮಥರ ವಚನಗಳು ನಮಗೆ ದಾರಿದೀಪ :ರೆಬಿನಾಳ
(ರಾಜ್ಯ ) ಜಿಲ್ಲೆ

ಬಸವಾದಿ ಪ್ರಮಥರ ವಚನಗಳು ನಮಗೆ ದಾರಿದೀಪ :ರೆಬಿನಾಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಸವಾದಿ ಪ್ರಮಥರ ವಚನಗಳು ನಮ್ಮೆಲ್ಲರ ಬದುಕಿಗೆ ದಾರಿದೀಪಗಳಾಗಿವೆ, ಬಸವ ಧರ್ಮ ವಿಶ್ವ ಧರ್ಮವಾಗಬೇಕು ಎಂದು
ಶ್ರೀ ಶಾಂತವೀರ ಪದವಿ ಪೂರ್ವ ಮಹಾವಿದ್ಯಾಲಯದ
ಪ್ರಾಚಾರ್ಯ ಪ್ರೊ.ಎಮ್.ಬಿ.ರೆಬಿನಾಳ ಕರೆ ನೀಡಿದರು.
ನಗರದ ಬಿ. ಎಲ್.ಡಿ.ಇ.ಸಂಸ್ಥೆಯ, ಜೆ.ಎಸ್. ಎಸ್.ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿ. ಧರೆಪ್ಪ ಮತ್ತು ಬಸಮ್ಮ ಐಹೊಳ್ಳಿ ದಂಪತಿಗಳ ಸ್ಮಾರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ ಜರುಗಿತು. ಉಪನ್ಯಾಸ ನೀಡಿ ಮಾತನಾಡಿದ ಅವರು
ಸಾಂಸ್ಕೃತಿಕ ನಾಯಕ ಬಸವಣ್ಣನವರು ಎಂದೆಂದಿಗೂ ಪ್ರಸ್ತುತ. ದಾನ, ದಾಸೋಹ, ಧರ್ಮ, ಪೂಜೆ ಇವೆಲ್ಲ ತೋರಿಕೆ ಮತ್ತು ಡಾಂಬಿಕತೆಯಿಂದ ಕೂಡಿರಬಾರದು, ಅವರು ಕಾಯಕ-ದಾಸೋಹ-ಭಕ್ತಿ -ಸಹಕಾರ-ಸಮಾನತೆ-ಐಕ್ಯತೆ ಗಳ ಮಹತ್ವವನ್ನು ವಚನಸಾಹಿತ್ಯದ ಹಿನ್ನೆಲೆಯಲ್ಲಿ ತಿಳಿಸಿಕೊಟ್ಟರು. ನಾನು ಸಹ ಇದೇ ಮಹಾವಿದ್ಯಾಲಯದ ಹೆಮ್ಮೆಯ ವಿದ್ಯಾರ್ಥಿ ಎಂದು ಹೇಳಿಕೊಂಡರು .
ದತ್ತಿ ದಾಸೋಹಿಗಳಾದ ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರ
ಸಂಯೋಜನಾಧಿಕಾರಿಗಳಾದ ಡಾ.ವಿ.ಡಿ. ಐಹೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಹಿರಿಯರ ಸ್ಮರಣಾರ್ಥ ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವುದು ಸಾರ್ಥಕ ವಾದ ಸಂಗತಿಯೆಂದು ತಿಳಿಸಿದರು. ಫ.ಗು.ಹಳಕಟ್ಟಿಯವರ ಮುಖ್ಯ ಆಶಯದಂತೆ ಪ್ರತಿಯೊಂದು ಕಾರ್ಯಕ್ರಮದ ಆರಂಭದಲ್ಲಿ ವಚನಗಾಯನ ಮಾಡಲು ತಿಳಿಸಿದರು.
ಕಾರ್ಯಕ್ರಮ ದಲ್ಲಿ ಡಾ.ವಿ.ಡಿ.ಐಹೊಳ್ಳಿ, ಪಟವರ್ಧನ ದಂಪತಿಗಳು ಮತ್ತು ಪ್ರೊ.ಎಮ್.ಬಿ.ರೆಭಿನಾಳ ಅವರಿಗೆ ಸನ್ಮಾನಿಸಲಾಯಿತು.
ಪಟವರ್ಧನ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ನಾನು ಇದೇ ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿದ್ದು, ಜೆ. ಎಸ್. ಎಸ್. ಶಿಕ್ಷಣ ಮಹಾವಿದ್ಯಾಲಯದ ಸಂಸ್ಕಾರದಿಂದಲೇ ನಾನು ಹಲವಾರು ಸಾಮಾಜಿಕ ಸೇವೆಗಳನ್ನು ಮಾಡಲು ಸಾಧ್ಯವಾಯಿತು ಎಂದು ಹೇಳುತ್ತಾ ತಮ್ಮ ವಿದ್ಯಾರ್ಥಿ ಜೀವನವನ್ನು ಸ್ಮರಿಸಿಕೊಂಡರು.
ಕಾರ್ಯಕ್ರಮದ ಇನ್ನೋರ್ವ ಅತಿಥಿಗಳಾದ ಬಿ.ಎಲ್.ಡಿ.ಇ. ಸಂಸ್ಥೆ, ಎಸ್. ಎಸ್. ಆವರಣದ ಆಡಳಿತ ಅಧಿಕಾರಿಗಳಾದ ಪ್ರೊ.ಐ.ಎಸ್. ಕಾಳಪ್ಪನವರ ಅವರು ಮಾತನಾಡಿ ಹಿರಿಯರ ಮೌಲ್ಯಗಳ ಸ್ಮರಣೆಗಾಗಿ ನಡೆಸಿದ ಈ ದತ್ತಿ ಉಪನ್ಯಾಸ ಕಾರ್ಯಕ್ರಮವು ಬಹಳಷ್ಟು ಅರ್ಥಪೂರ್ಣವಾಗಿದೆ. ಈ ಮಹಾ ವಿದ್ಯಾಲಯದ ಪ್ರಾಚಾರ್ಯರಾದ ಡಾ. ಭಾರತಿ. ವಾಯ್. ಖಾಸನೀಸ ಮೇಡಮ್ಮವರೇ ದಾನ, ಧರ್ಮಕ್ಕೆ ಮಾದರಿಯಾಗಿದ್ದಾರೆ. ಇವರು ಎಸ್. ಎಸ್. ಆವರಣದ ವಿವಿಧ ಶಾಲೆಗಳಿಗೆ ದಾನ-ದತ್ತಿಗಳನ್ನು ನೀಡಿದ್ದಾರೆ, ಮಹಾವಿದ್ಯಾಲಯದ ಆವರಣದಲ್ಲಿ 60,000 ರೂ. ವೆಚ್ಚದಲ್ಲಿ ಸರಸ್ವತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ, ಸಂಸ್ಥೆಯ ಸಮನ್ವಯ ಶಾಲೆಗೆ ಒಂದು ಲಕ್ಷ ರೂಪಾಯಿ ವೆಚ್ಚದ ಪೆನಲ್ ಬೋರ್ಡ್ ನ್ನು ಕಾಣಿಕೆಯಾಗಿ ನೀಡಿದ್ದಾರೆ, ಇನ್ನೂ ಇವರ ಗೊತ್ತಿರದ ದಾನ ಧರ್ಮಗಳು ಹಲವಾರು ಇವೆ. ಎಲೆಮರೆಯ ಕಾಯಿಯಂತೆ ಇವರಿದ್ದಾರೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯರಾದ ಡಾ. ಭಾರತಿ. ವಾಯ್. ಖಾಸನೀಸ ಅವರು ಮಾತನಾಡಿ ಸಮಾಜ ಮತ್ತು ಸಂಸ್ಥೆಗೆ ಮಾಡಿರುವ ದಾನ, ಧರ್ಮ, ಸೇವೆಗಳು ಅದು ದೇವರ ಸೇವೆ ಇದ್ದಹಾಗೆ, ಇದರಲ್ಲಿ ನನ್ನದೇನು ಇಲ್ಲ ಎಲ್ಲವೂ ಬಿ.ಎಲ್.ಡಿ.ಇ ಸಂಸ್ಥೆಯ ಕೊಡುಗೆ ಎಂದು ಸಂಸ್ಥೆಯ ಉಪಕಾರ ಸ್ಮರಿಸಿದರು.
ವಿದ್ಯಾರ್ಥಿನಿ ಪಲ್ಲವಿ ಹಿರೇಮಠ ಕಾರ್ಯಕ್ರಮವನ್ನು ನಿರೂಪಿಸಿದರು. ಐಶ್ವರ್ಯ ಜೋಷಿ ಪ್ರಾರ್ಥನೆ ಮಾಡಿದರು, ಪ್ರವೀಣ ಹೊಸಮನಿ ವಚನ ಗಾಯನ ಮಾಡಿದರು, ಐಶ್ವರ್ಯ ಉಮರಾಣಿ ಸ್ವಾಗತಿಸಿದರು. ಸಹ ಪ್ರಾಧ್ಯಾಪಕ ಡಾ. ಎಮ್.ಬಿ. ಕೋರಿ ವಂದಿಸಿದರು.
ಸಹಾಯಕ ಪ್ರಾಧ್ಯಾಪಕರುಗಳಾದ ಡಾ. ಜೆ. ಎಸ್. ಪಟ್ಟಣಶೆಟ್ಟಿ, ಡಾ. ಬಿ.ಎಸ್. ಹಿರೇಮಠ, ಎಸ್. ಎಸ್.ಪಾಟೀಲ, ಪಿ. ಡಿ. ಮುಲ್ತಾನಿ, ಡಾ. ಎಸ್. ಪಿ. ಶೇಗುಣಸಿ, ಪ್ರಶಿಕ್ಷಣಾರ್ಥಿಗಳು ಮತ್ತು ಐಹೊಳ್ಳಿ ಬಂಧುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
  • ಟೆಂಡರ್ ರದ್ದಿಗೆ ಆಗ್ರಹಿಸಿ ದಿನಗೂಲಿ ನೌಕರರ ಸಂಘದಿಂದ ಧರಣಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಮತ್ತು ನೇತ್ರ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಲ್ಲಕ್ಕಿ ಉತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.