Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಂಧ್ರಕ್ಕೆ ನೀರು ಮಾರಿಕೊಳ್ಳುವ ಹುನ್ನಾರ :ರೈತ ಸಂಘ ಆರೋಪ
(ರಾಜ್ಯ ) ಜಿಲ್ಲೆ

ಆಂಧ್ರಕ್ಕೆ ನೀರು ಮಾರಿಕೊಳ್ಳುವ ಹುನ್ನಾರ :ರೈತ ಸಂಘ ಆರೋಪ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪರ: ನೆಲೆ ಕಳೆದುಕೊಂಡು ರೈತರಿಗೆ ನೀರು ಕೊಡದೆ ಆಂಧ್ರ ರಾಜ್ಯಕ್ಕೆ ನೀರು ಮಾರಿಕೊಳ್ಳುವ ಹುನ್ನಾರವನ್ನು ಖಂಡಿಸಿ ಅಖಂಡ ಕರ್ನಾಟಕ ರೈತ ಸಂಘ (ರಿ) ಜಿಲ್ಲಾ ಘಟಕ ವಿಜಯಪುರ ವತಿಯಿಂದ ಆರ್.ಬಿ. ತಿಮ್ಮಾಪೂರ ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧ್ಯಕ್ಷರು ನೀರಾವರಿ ಸಲಹಾ ಸಮಿತಿ ಕೃಷ್ಣಾ ಮೇಲ್ದಂಡೆ ಯೋಜನೆ ಆಲಮಟ್ಟಿ ಹಾಗೂ ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ರವರಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಬುಧವಾರ ಮನವಿ ಸಲ್ಲಿಸಲಾಯಿತು.
ಈ ಕುರಿತು ರೈತ ಮುಖಂಡ ಅರವಿಂದ ಕುಲಕರ್ಣಿ ಮಾತನಾಡಿ, ಆಲಮಟ್ಟಿ ಆಣೆಕಟ್ಟು ನಿರ್ಮಾಣಕ್ಕೆ ನೆಲೆ ಕಳೆದುಕೊಂಡ ಅವಳಿ ಜಿಲ್ಲೆಯ ರೈತರಿಗೆ ರೈತರು ಕೇಳಿದ ಸಂದರ್ಭದಲ್ಲಿ ಕೃಷಿಗೆ ಸಮರ್ಪಕವಾಗಿ ನೀರು ಕೊಡುತ್ತಿಲ್ಲ.ಆ ಭಾಗದಲ್ಲಿ ರೈತರು ಜಮೀನು ಮನೆ ಕಳೆದುಕೊಂಡಿರುವುದಿಲ್ಲ. ಆದರೆ ದಿನನಿತ್ಯ ನೀರು ರೈತರು ಹರಿಸಲಾಗುತ್ತಿದೆ. ಶೇ.೬೦ ರಷ್ಟು ಭೂಮಿಯನ್ನು ನೀರಾವರಿಗೆ ಒಳಪಡಿಸುವ ಬೃಹತ್ ಕೃಷ್ಣಾ ಮೇಲ್ದಂಡೆ ಯೋಜನೆ ಇದಾಗಿದೆ. ಮೊದಲಿನಿಂದಲೂ ವಿಜಯಪುರ ಜಿಲ್ಲೆ ಬರಗಾಲ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿದೆ. ಇದನ್ನು ಕಳಚಬೇಕಾದರೆ ಸಮಗ್ರ ನೀರಾವರಿಗೆ ಒಳಪಡಬೇಕು. ಇಂತಹ ಭೀಕರ ಬರಗಾಲ ಸಂದರ್ಭದಲ್ಲಿ ರೈತರಿಗೆ ನೀರು ಕೊಡದಿದ್ದರೆ ಆಣೆಕಟ್ಟು ನಿರ್ಮಿಸಿದ್ದು ಯಾವ ಪುರಷಾರ್ಥಕ್ಕೆ? ಈ ಸದ್ಯ ಜಲಾಶಯದಲ್ಲಿ ಸಾಕಷ್ಟು ನೀರು ಸಂಗ್ರಹವಿದ್ದು , ಒಟ್ಟು ನೀರಿನ ಸಂಗ್ರಹ ೧೧೫,೭೦೯ ಟಿ.ಎಂ.ಸಿ. ನೀರು ಸಂಗ್ರಹವಿದ್ದು , ಅದರಲ್ಲಿ ೧೭ , ಟಿ.ಎಂ.ಸಿ ನೀರು ಬಳಕೆಗೆ ನಿರ್ಬಂಧ ಹೊರತುಪಡಿಸಿದರೂ ೯೮.೦೮೯ ಟಿ.ಎಂ.ಸಿ. ನೀರು ಸಂಗ್ರಹವಿದೆ. ಈಗಲೂ ಜಲಾಶಯಕ್ಕೆ ೨೩೭೧ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಆದ್ದರಿಂದ ಜಿಲ್ಲೆಯಲ್ಲಿ ಇರುವ ಎಲ್ಲ ಕೆರೆಗಳನ್ನು ಭರ್ತಿ ಮಾಡಲು ಕೇವಲ ಒಂದರಿಂದ ಒಂದೂವರೆ ಟಿ.ಎಂ.ಸಿ. ನೀರು ಸಾಕಾಗುತ್ತದೆ. ಬೆಳೆಗಳಿಗೆ ಒಳಗೊಂಡಂತೆ ಎಲ್ಲ ಕೂಡಿ ೩ ಟಿ.ಎಂ.ಸಿ. ನೀರು ಆದರೆ ರೈತರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಯಾವುದೇ ಕುಂಟುನೆಪ ಹೇಳದೆ ಸರಾಗವಾಗಿ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಜಮೀನು ಕಳೆದುಕೊಂಡ ರೈತರಿಗೆ ನೀರು ಕೇಳಿದಾಗ ಯಾವುದೇ ಹಂತಗಳ ನೆಪ ಹೇಳದೆ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕೆಂದು ಆಗ್ರಹಪಡಿಸಿದರು.
ಈ ಸಂದರ್ಭದಲ್ಲಿ ವಿಠ್ಠಲಗೌಡ ಜೆ. ಬಿರಾದಾರ, ರ‍್ಯಾವಪ್ಪಗೌಡ ಬಿ.ಪೋಲೇಶಿ, ಮಲಿಗೆಪ್ಪ ಮ. ಸಾಸನೂರ, ಲಾಲಸಾಬ ಮ. ಹಳ್ಳೂರ, ಶಿದ್ದಲಿಂಗಪ್ಪ ಮ. ಬಿರಾದಾರ, ಚನ್ನಬಸಪ್ಪ ಸಿಂದೂರ, ರಾಜೇಸಾಬ ನಾಟೀಕಾರ ಇನ್ನಿತರರು ಉಪಸ್ಥಿತರಿದ್ದರು.

BIJAPUR NEWS public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ
    In (ರಾಜ್ಯ ) ಜಿಲ್ಲೆ
  • ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ
    In ವಿಶೇಷ ಲೇಖನ
  • ಲೋಕಾಯುಕ್ತ ಅಧಿಕಾರಿಗಳ ದಾಳಿ :ದಾಖಲೆಗಳ ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಹಾಗೂ ಪತ್ರಕರ್ತರ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತ
    In (ರಾಜ್ಯ ) ಜಿಲ್ಲೆ
  • ಗುರು ಎಂದು ಚೈತನ್ಯ ಸ್ವರೂಪ :ಶಿವಬಸಯ್ಯ ಸ್ವಾಮಿ
    In (ರಾಜ್ಯ ) ಜಿಲ್ಲೆ
  • ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅದ್ಧೂರಿ ಗುರುವೀರಘಂಟೈ ಮಡಿವಾಳೇಶ್ವರ ಜೋಡು ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಮಕ್ಕಳನ್ನು ಪ್ರಬುದ್ದ ನಾಗರಿಕರಾಗಿ ನಿರ್ಮಾಣ ಮಾಡಿ :ಬಿಇಓ‌ ತಳವಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.