Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪೭ ಸಾವಿರ ಜಾನುವಾರುಗಳಿಗೆ ಲಸಿಕೆ ಗುರಿ :ಡಾ.ರಾಜಕುಮಾರ ಅಡಕಿ

ಹಳ್ಳಿಗಳು ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ :ಶಾಸಕ ಮನಗೂಳಿ

ಡಿವೈಎಫ್‌ಐ ಸಂಘಟನೆ ಮುಖಂಡರ ಬಂಧನಕ್ಕೆ ತೀವ್ರ ಖಂಡನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಕಾವಲು ಸಮಿತಿ ರಚನೆ
(ರಾಜ್ಯ ) ಜಿಲ್ಲೆ

ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಕಾವಲು ಸಮಿತಿ ರಚನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ನಮ್ಮ ಮನೆಯ ಹೆಣ್ಣು ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವ ಅಗತ್ಯತೆ ಇಂದು ಹೆಚ್ಚಾಗಿದೆ ಎಂದು ಆರೋಗ್ಯ ಇಲಾಖೆಯ ಸುಕನ್ಯಾ ಚಳ್ಳಗೇರಿ ಹೇಳಿದರು.
ಪಟ್ಟಣದ ೯ನೇಅಂಗನವಾಡಿ ಕೇಂದ್ರದಲ್ಲಿ ಬುಧವಾರ ಸ್ನೇಹಸಂಸ್ಥೆ, ಐಎಲ್‌ಪಿ ಯೋಜನೆ, ಶಿಶು ಅಭಿವೃದ್ಧಿ ಯೋಜನೆ ಸಿಂದಗಿ, ಪಟ್ಟಣ ಪಂಚಾಯಿತಿ ದೇವರ ಹಿಪ್ಪರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನಾವು ಬಾಲ್ಯವಿವಾಹ, ಭ್ರೂಣಹತ್ಯೆ, ಲಿಂಗಪತ್ಯೆಗಳ ಕುರಿತು ಅರಿವು ಮೂಡಿಸಿ ತಡೆಯಬೇಕಿದೆ. ಜೊತೆಗೆ ಸಮುದಾಯದ ಪಾಲಕರಲ್ಲಿ ಜಾಗೃತಿ ಉಂಟು ಮಾಡಬೇಕಿದೆ ಎಂದರು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಪುಷ್ಪಾವತಿ ಬಿರಾದಾರ ಮಾತನಾಡಿ, ಶಾಲಾ ಮಕ್ಕಳ ಕಡ್ಡಾಯ ಹಾಜರಾತಿ, ಅಪೌಷ್ಠಿಕ ಮಕ್ಕಳ ರಕ್ಷಣೆ, ವಲಸೆ ಹೋಗುವ ಮಕ್ಕಳ ರಕ್ಷಣೆ ಮತ್ತು ಪಾಲಕರ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ತಿಳಿಸಿದರು.
ಸ್ನೇಹ ಸಂಸ್ಥೆ ಜಿಲ್ಲಾ ಸಂಯೋಜಕ ಸಾಗರ ಘಾಟಗೆ ಮಾತನಾಡಿ, ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ಕಾವಲು ಸಮಿತಿಯನ್ನು ರಚಿಸಲಾಗಿದ್ದು, ಎಲ್ಲರೂ ಕಂಕಣ ಬದ್ಧರಾಗಿ ಕಾರ್ಯ ನಿರ್ವಹಿಸೋಣ. ಸಮುದಾಯದ ನವಗ್ರಹಗಳಂತೆ ಇರುವ ಇಲಾಖೆಗಳನ್ನು ಒಗ್ಗೂಡಿಸುವ ಕೆಲಸ ಮಾಡಲಾಗುತ್ತಿದೆ. ಈ ಮೂಲಕ ಮಕ್ಕಳ ಹಾಗೂ ಮಹಿಳೆಯರ ಹಕ್ಕುಗಳನ್ನು ರಕ್ಷಣೆ ಮಾಡುವ ಕೆಲಸ ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವ ಕಾರ್ಯ ನಮ್ಮದಾಗಬೇಕು ಎಂದು ಸದಸ್ಯರ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ಹೇಳಿದರು.
ಪೊಲೀಸ್ ಇಲಾಖೆಯ ಎಸ್.ಎಸ್.ಹಿರೇಕುರುಬರ ಮಾತನಾಡಿ, ಕಾನೂನುಗಳ ಸೇವೆಗಳು ಮತ್ತು ತಪ್ಪಿನ ಶಿಕ್ಷೆಯನ್ನು ನಾವು ಸಮುದಾಯದಲ್ಲಿ ತಿಳಿಸಬೇಕು. ನಮ್ಮ ಮಕ್ಕಳಿಗೆ ನೈತಿಕ ಶಿಕ್ಷಣವನ್ನು ಕೊಡಬೇಕು. ಹಿಂದೆ ಗುರುಕುಲ ಶಿಕ್ಷಣ ಪದ್ಧತಿಯಂತೆ ಇಂದು ನಾವು ನಮ್ಮ ಮಕ್ಕಳಿಗೆ ಹೇಳಬೇಕಿದೆ ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ದೇವಣಗಾಂವ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಪಟ್ಟಣ ಪಂಚಾಯಿತಿ ಸದಸ್ಯೆ ರತ್ನಾಬಾಯಿ ದೇವೂರ, ಅಂಗನವಾಡಿ ಮೇಲ್ವಿಚಾರಕಿ ಎ.ಪಿ. ಕುಂಬಾರ, ಪಟ್ಟಣ ಪಂಚಾಯಿತಿ ಪ್ರತಿನಿಧಿ ನಿಂಗಪ್ಪ ಸುಂಗಠಾಣ, ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ರಾವುತ ಮರಬಿ, ಗೌಡಪ್ಪ ಬಿರಾದಾರ, ಶಿಕ್ಷಕಿ ಪುಷ್ಪಾ ರೂಗಿ, ಮಹಿಳಾ ಸ್ವಸಹಾಯ ಸಂಘದ ಪ್ರತಿನಿಧಿ ಅಂಬಿಕಾ ಕುಲಕರ್ಣಿ, ಮಕ್ಕಳ ಪ್ರತಿನಿಧಿಗಳಾದ ಮಹ್ಮದ್ ಅಪಾನ ಕಂಕರಪಿರ, ತಸ್ಮೀಯಾ ಮಸಳಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಹಾಯಕಿಯರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪೭ ಸಾವಿರ ಜಾನುವಾರುಗಳಿಗೆ ಲಸಿಕೆ ಗುರಿ :ಡಾ.ರಾಜಕುಮಾರ ಅಡಕಿ

ಹಳ್ಳಿಗಳು ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ :ಶಾಸಕ ಮನಗೂಳಿ

ಡಿವೈಎಫ್‌ಐ ಸಂಘಟನೆ ಮುಖಂಡರ ಬಂಧನಕ್ಕೆ ತೀವ್ರ ಖಂಡನೆ

ಪೀಸ್ ಇಂಟರ್‌ನ್ಯಾಶನಲ್ ಪ್ರೌಢಶಾಲೆ ಉತ್ತಮ ಫಲಿತಾಂಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪೭ ಸಾವಿರ ಜಾನುವಾರುಗಳಿಗೆ ಲಸಿಕೆ ಗುರಿ :ಡಾ.ರಾಜಕುಮಾರ ಅಡಕಿ
    In (ರಾಜ್ಯ ) ಜಿಲ್ಲೆ
  • ಹಳ್ಳಿಗಳು ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಡಿವೈಎಫ್‌ಐ ಸಂಘಟನೆ ಮುಖಂಡರ ಬಂಧನಕ್ಕೆ ತೀವ್ರ ಖಂಡನೆ
    In (ರಾಜ್ಯ ) ಜಿಲ್ಲೆ
  • ಪೀಸ್ ಇಂಟರ್‌ನ್ಯಾಶನಲ್ ಪ್ರೌಢಶಾಲೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಗುರುದೇವ ಅಂತರಾಷ್ಟ್ರೀಯ ವಸತಿ ಶಾಲೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಬಹುಮುಖ ವ್ಯಕ್ತಿತ್ವದ ಸೃಜನಶೀಲ ಸಾಹಿತಿ ಡಾ.ಚನ್ನಪ್ಪ ಕಟ್ಟಿ
    In ವಿಶೇಷ ಲೇಖನ
  • ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ
    In (ರಾಜ್ಯ ) ಜಿಲ್ಲೆ
  • ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ
    In (ರಾಜ್ಯ ) ಜಿಲ್ಲೆ
  • ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.