Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಐತಿಹಾಸಿಕ ದೇಗುಲ ಜೀರ್ಣೋದ್ಧಾರಕ್ಕೆ ಬೇಕಿದೆ ಕಾಯಕಲ್ಪ
(ರಾಜ್ಯ ) ಜಿಲ್ಲೆ

ಐತಿಹಾಸಿಕ ದೇಗುಲ ಜೀರ್ಣೋದ್ಧಾರಕ್ಕೆ ಬೇಕಿದೆ ಕಾಯಕಲ್ಪ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೇವತಗಾಂವದ ಸಿಂಹಗಢ ಮಹಾರಾಜರ ದೇವಾಲಯ | ಜೀರ್ಣೋದ್ಧಾರಕ್ಕೆ ಗ್ರಾಮಸ್ಥರ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವರದಿ: ಸಿದ್ರಾಮ ಮಾಳಿ
ರೇವತಗಾಂವ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ರೇವತಗಾಂವ ಗ್ರಾಮವು ಮಹಾರಾಷ್ಟ್ರದ ಗಡಿಭಾಗದ ದೇಗುಲವು, ಸೂಕ್ಷ್ಮ ವಾಸ್ತುಶಿಲ್ಪ ಶೈಲಿಯ ದೇವಾಲಯವು ಪ್ರವಾಸಿಗರ ಗಮನವನ್ನು ಸೆಳೆಯುತ್ತದೆ. ಗ್ರಾಮದಲ್ಲಿರುವ ಶ್ರೀ ಸದ್ಗುರು ಸಿಂಹಗಢ ಮಹಾರಾಜರ ದೇವಾಲಯವು ಅತ್ಯಂತ ಪ್ರಸಿದ್ಧಿ ಪಡೆದ ಈ ದೇವಾಲಯವು ಹಲವಾರು ವರ್ಷಗಳ ಇತಿಹಾಸ ಹೊಂದಿದೆ.
ಈ ಸಿಂಹಗಢ ಮಹಾರಾಜರ ದೇವಾಲಯವು ದ್ರಾವಿಡ ಶೈಲಿಯ ಸಭಾಮಂಟಪ , ಪ್ರದಕ್ಷಣಾಪಥ ಕುರುಹುಗಳನ್ನು ಇರುವದು ನೋಡಿದರೆ, ಈ ದೇವಾಲಯಗಳು ಹಂಪಿ ಮಾದರಿಯಲ್ಲಿ ನಿರ್ಮಿಸಲಾಗಿದೆ ಎಂಬುದು ತಿಳಿದುಬರುತ್ತದೆ. ಈ ದೇವಾಲಯದಲ್ಲಿ ಬೃಹತ್ ಗಾತ್ರದ ಮಹಾದೇವನ ಲಿಂಗವೂ ಇದೆ. ಸುಮಾರು ೬೪ ವರ್ಷಗಳ ಹಿಂದೆ ಅಂದರೆ, ೧೯೫೯ ರಲ್ಲಿ ಮಹಾದೇವನ ದೇವಾಲಯವೆಂದು ಕರೆಯುತ್ತಾರೆ.
ಸುಮಾರು ೬೪ ವರ್ಷಗಳ ಹಿಂದೆ ರೇವತಗಾಂವ ಗ್ರಾಮಕ್ಕೆ ಆಗಮಿಸಿದ ಸಿಂಹಗಢ ಮಹಾರಾಜರು ಮೂಲತಃ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಸಮೀಪದಲ್ಲಿರುವ ಸಿಂಹಗಢ ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿದರು. ವಾಹನ ಚಾಲಕರಾಗಿ ಕಾರ್ಯ ನಿರ್ವಹಿಸುತಿದ್ದ ಸಮಯದಲ್ಲಿ ಆ ವಾಹನವು ಅಪಘಾತಕ್ಕಿಡಾಗಿ ಬದುಕಿ ಉಳಿದ ಅವರು ಮುಂದೆ ವಾಹನ ಚಾಲಕನ ಕಾರ್ಯವನ್ನು ಬಿಟ್ಟು ಮಹಾರಾಷ್ಟ್ರದ ಸುಕ್ಷೇತ್ರವಾದ ಪಂಢರಪುರದ ಪಾಂಡುರಂಗ ವಿಠ್ಠಲನ ದೇವಾಲಯದಲ್ಲಿ ಬಂದು ನೆಲೆಸಿದರು. ನಂತರ ಸಮೀಪದ ಮರವಾಡ ಗ್ರಾಮದಲ್ಲಿ ಹಲವು ವರ್ಷಗಳ ಕಾಲ ನೆಲೆಸಿ ನಂತರ ಕರ್ನಾಟಕದ ಗಡಿ ಭಾಗದಲ್ಲಿರುವ ರೇವತಗಾಂವ ಗ್ರಾಮಕ್ಕೆ ಆಗಮಿಸಿ ಪರಕೀಯರ ದಾಳಿಗೆ ತುತ್ತಾದ ಮಹಾದೇವನ ದೇವಾಲಯದಲ್ಲಿ ನೆಲೆ ಕಂಡರು.
ಈ ದೇವಾಲಯ ಭೂತಗಳ ವಾಸಸ್ಥಾನವೆಂದು ತಿಳಿದು ಗ್ರಾಮಸ್ಥರು ಆ ದೇವಾಲಯದ ಸಮೀಪ ಸುಳಿಯುತ್ತಿರಲಿಲ್ಲ. ಆದರೆ ಸದ್ಗುರು ಸಿಂಹಗಢ ಮಹಾರಾಜರು ಈ ದೇವಾಲಯದಲ್ಲಿ ವಾಸ ಮಾಡುತ್ತ ಇದ್ದ ನಂತರ ಕ್ರಮೇಣ ಭಕ್ತರು ಇವರ ದರ್ಶನಕ್ಕೆ ಬರತೊಡಗಿದರು.
ಸಿಂಹಗಢ ಮಹಾರಾಜರು ಶಿಥಿಲಗೊಂಡಿರುವ ಈ ಮಹಾದೇವನ ದೇವಸ್ಥಾನವನ್ನು ಜಿರ್ಣೋದ್ಧಾರಗೊಳಿಸುವ ಸಲುವಾಗಿ ಶ್ರಮಪಟ್ಟಿದ್ದಾರೆ. ಅವರ ಶ್ರಮ ಕಂಡು ಗ್ರಾಮಸ್ಥರು ತಾವೂ ಕೈಜೋಡಿಸಿ ಕೆಲಸ ಮಾಡಿದ ಸಾಕಷ್ಟು ಉದಾಹರಣೆಗಳೂ ಇವೆ.
ದೇವಾಲಯದಲ್ಲಿ ಪ್ರತಿ ದಿನ ಸಾಯಂಕಾಲ ಪಾಂಡುರಂಗನ ಹೆಸರಿನಲ್ಲಿ ಭಜನೆ ಜಪ ಮಾಡಲಾಗುತಿತ್ತು. ಸಿಂಹಗಢ ಮಹಾರಾಜರು ಅನೇಕ ಪವಾಡಗಳನ್ನು ಮಾಡಿದ ಇವರು ಸುತ್ತಮುತ್ತಲಿನ ಗ್ರಾಮದ ಜನರ ನಂಬಿಕೆ ವಿಶ್ವಾಸಕ್ಕೆ ಭಾಜನರಾಗಿದ್ದರು.
ಈ ಸಿಂಹಗಢ ಮಹಾರಾಜರು ೧೯೭೧ ರಲ್ಲಿ ಎಳ್ಳ ಅಮವಾಸ್ಯೆಯ ಆರನೇಯ ದಿನಕ್ಕೆ ಇಹಲೋಕ ತ್ಯಜಿಸಿದರು.
ಅಂದಿನಿಂದ ಗ್ರಾಮದಲ್ಲಿ ಪ್ರತಿ ವರ್ಷ ಎಳ್ಳ ಅಮವಾಸ್ಯೆ ಮುಗಿದ ಆರನೇಯ ದಿನಕ್ಕೆ ಅವರ ಪುಣ್ಯಾರಾಧನೆ ದಿನವೆಂದು ವಿಶೇ಼ಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತಿದ್ದು ಸಾವಿರಾರು ಭಕ್ತಾದಿಗಳು ಪಾಲ್ಗೊಳ್ಳುತ್ತಾರೆ.
ಸೂಕ್ತವಾದ ರಕ್ಷಣೆ, ನಿರ್ವಹಣೆಯ ಕೊರತೆಯಿಂದಾಗಿ ದೇವಾಲಯದ ಗೋಡೆಗಳು ಶಿಥಿಲವಾಗುತ್ತಿವೆ. ಈ ಐತಿಹಾಸಿಕ ಪೌರಾಣಿಕವಾಗಿ ಪ್ರಸಿದ್ಧಿ ಪಡೆದ ಈ ದೇವಾಲಯವನ್ನು ಜೀಣೋದ್ಧಾರಗೊಳಿಸಬೇಕಾಗಿರುವದು, ಅತ್ಯಂತ ಅವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಸಂಬಂಧಪಟ್ಟ ಇಲಾಖೆಯವರು ಕೂಡಲೇ ಗಮನಹರಿಸಿ ಜೀಣೋದ್ಧಾರ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ಡಿ.೧೯ ರಿಂದ ಪುಣ್ಯಾರಾಧನೆ ಕಾರ್ಯಕ್ರಮ

ರೇವತಗಾಂವ ಗ್ರಾಮದ ಸಿಂಹಗಢ ಮಹಾರಾಜರ ೫೪ ನೇ ಪುಣ್ಯಾರಾಧನೆ ಕಾರ್ಯಕ್ರಮವು ಡಿ.೧೯ ರಿಂದ ಆರಂಭಗೊಂಡು ಡಿ.೨೬ ರವರೆಗೆ ನಡೆಯಲಿದೆ.
ಡಿ.೧೯ ರ ಶುಕ್ರವಾರದಂದು ಎಳ್ಳ ಅಮವಾಸ್ಯೆಯ ರಾತ್ರಿ ೯ ಗಂಟೆಗೆ ವೀಣೆ ನಿಲ್ಲುಸುವುದು ಹಾಗೂ ಮರಾಠಾ ಭಜನಾ ಕಾರ್ಯಕ್ರಮಗಳೊಂದಿಗೆ ಪುಣ್ಯಾರಾಧನೆ ಕಾರ್ಯಕ್ರಮಗಳು ಪ್ರಾರಂಭಗೊಂಡು ಡಿ.೨೬ ರ ಶುಕ್ರವಾರದವರೆಗೆ “ಹರಿನಾಮ ಜಪಯಜ್ಞ” ನಡೆಯಲಿವೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
  • ಟೆಂಡರ್ ರದ್ದಿಗೆ ಆಗ್ರಹಿಸಿ ದಿನಗೂಲಿ ನೌಕರರ ಸಂಘದಿಂದ ಧರಣಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಮತ್ತು ನೇತ್ರ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಲ್ಲಕ್ಕಿ ಉತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.