Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರೂಡಸೆಟ್ ಸಂಸ್ಥೆಯಲ್ಲಿ ಉದ್ಯಮಿದಾರರಿಗೆ ಕಾರ್ಯಾಗಾರ

ಹೆಸ್ಕಾಂ: ಕುಂದು-ಕೊರತೆ ಸಭೆ

ಬಬಲೇಶ್ವರ: ಹೆಸ್ಕಾಂ ಕುಂದು-ಕೊರತೆ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಳ್ಳೊಳ್ಳಿ ಗ್ರಾಪಂನಲ್ಲಿ ಹಣ ದುರುಪಯೋಗ ಆರೋಪ :ತನಿಖೆಗೆ ಆಗ್ರಹ
(ರಾಜ್ಯ ) ಜಿಲ್ಲೆ

ಬಳ್ಳೊಳ್ಳಿ ಗ್ರಾಪಂನಲ್ಲಿ ಹಣ ದುರುಪಯೋಗ ಆರೋಪ :ತನಿಖೆಗೆ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಬಳ್ಳೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಂದಾಜು ಮೊತ್ತ ಮಾಡಲಾದ ಮೂರು ರಸ್ತೆ ಕಾಮಗಾರಿಗಳಲ್ಲಿ ಕೇವಲ ಶೇ.5ರಷ್ಟು ಮಾತ್ರ ಕೆಲಸ ನಡೆಸಿ, ಉಳಿದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪವನ್ನು ಗ್ರಾಮದ ರೈತ ಕುಮಾರ ಜಾಧವ ಮಾಡಿದ್ದಾರೆ.
ಬಳ್ಳೊಳ್ಳಿ ಗ್ರಾಮ ಪಂಚಾಯತ್ ಅಡಿಯಲ್ಲಿ ವಿನೋದ್ ಗೋಡಿಹಾಳ ಜಮೀನಿಂದ ಸಾಯಬಗೌಡ ಹತ್ತಿ ಜಮೀನಿನವರೆಗೆ ಮುರುಮ ರಸ್ತೆ ಕಾಮಗಾರಿ (ಕಾಮಗಾರಿ ಸಂಖ್ಯೆ: 1507003034/ಆರ್.ಸಿ/93393042892515995), ಬಳ್ಳೊಳ್ಳಿಯಿಂದ ದೇವರನಿಂಬರಗಿ ರಸ್ತೆಯ ಪುರಾಣಿಕ ಹೊಲದಿಂದ ಅಪ್ಪಾಶ್ಯಾ ಬಿರಾದಾರ ಹೊಲದವರೆಗೆ ರಸ್ತೆ ನಿರ್ಮಾಣ ಕಾಮಗಾರಿ (1507003034/ ಆರ್.ಸಿ//93393042892515837) ಹಾಗೂ ಕದರಿ ಮಹಾದೇವ ವಸತಿಯಿಂದ ತೇಲಿ ವಸ್ತಿ ರಸ್ತೆ ಕಾಮಗಾರಿ (1507003034/ ಆರ್.ಸಿ//93393042892517645) ಈ ಮೂರು ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟದ ಕೆಲಸ ಮಾಡಿ ಹಣ ದೋಚಿದ್ದು ಸರಕಾರಕ್ಕೆ ಮತ್ತು ಸಾರ್ವಜನಿಕರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಕುರಿತು ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್‌ಗೆ ಲಿಖಿತವಾಗಿ ಮನವಿ ಸಲ್ಲಿಸಿದರೂ ಇಲ್ಲಿಯವರೆಗೆ ಅಧಿಕಾರಿಗಳು ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ರಸ್ತೆ ಕಾಮಗಾರಿ ಹಾಗೂ ಹೂಳೆತ್ತುವ ಕೆಲಸಗಳ ಸಂಪೂರ್ಣ ಸ್ಥಿತಿಯನ್ನು ವಿಡಿಯೋ ಮೂಲಕ ದಾಖಲು ಮಾಡಿ ಸಂಬಂಧಪಟ್ಟ ಇಂಜಿನಿಯರ್‌ಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿಸಿದ್ದಾರೆ.
ಮುಂದುವರೆದು 15ನೇ ಹಣಕಾಸು ಆಯೋಗದ ಅನುದಾನದಡಿ ನಡೆದ ಬಹುತೇಕ ಎಲ್ಲಾ ಕಾಮಗಾರಿಗಳಲ್ಲೂ ಕಳಪೆ ಕೆಲಸ ಮಾಡಲಾಗಿದೆ. ಆದ್ದರಿಂದ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಖುದ್ದಾಗಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರ ಎದುರಲ್ಲೇ ಸ್ಥಳ ಪರಿಶೀಲಿಸಿ, ಸಭೆ ನಡೆಸಿ ಸಂಪೂರ್ಣ ಮಾಹಿತಿಯನ್ನು ಪರಿಶೀಲಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಬಳ್ಳೋಳ್ಳಿಯ ಗ್ರಾಮ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಪಂಚಾಯತ್ ಕಚೇರಿಯಲ್ಲಿ ಕಾರ್ಯನಿರ್ವಹಿಸದೆ, ಲಾಡ್ಜ್ ಹಾಗೂ ಹೋಟೆಲ್‌ಗಳಲ್ಲಿ ಕುಳಿತು ಕೆಲಸ ಮಾಡುತ್ತಿರುವುದು ಯಾವ ನಿಯಮದಡಿ ನಡೆಯುತ್ತಿದೆ ಎಂಬುದೇ ಅರ್ಥವಾಗುತ್ತಿಲ್ಲ. ಹಾಗಿದ್ದರೆ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣದ ಅವಶ್ಯಕತೆಯೇನು ಎಂಬ ಪ್ರಶ್ನೆ ಎದ್ದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ಕಂಪ್ಯೂಟರ್ ಆಪರೇಟರನ್ನು ಕೂಡಲೇ ಬದಲಾಯಿಸಿ, ಎಲ್ಲಾ ಕಾಮಗಾರಿಗಳ ಬಗ್ಗೆ ಮೇಲಾಧಿಕಾರಿಗಳು, ಸಂಬಂಧಪಟ್ಟ ಇಂಜಿನಿಯರ್‌ಗಳು ಹಾಗೂ ಅಧಿಕಾರಿಗಳಿಗೆ ನೋಟಿಸ್ ನೀಡಿ ಗ್ರಾಮದಲ್ಲಿ ಸಭೆ ನಡೆಸಿ ಗ್ರಾಮಸ್ಥರ ಸಮ್ಮುಖದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರೂಡಸೆಟ್ ಸಂಸ್ಥೆಯಲ್ಲಿ ಉದ್ಯಮಿದಾರರಿಗೆ ಕಾರ್ಯಾಗಾರ

ಹೆಸ್ಕಾಂ: ಕುಂದು-ಕೊರತೆ ಸಭೆ

ಬಬಲೇಶ್ವರ: ಹೆಸ್ಕಾಂ ಕುಂದು-ಕೊರತೆ ಸಭೆ

೯೮ ಖರೀದಿ ಕೇಂದ್ರಗಳಲ್ಲಿ ತೊಗರಿ ಖರೀದಿ ಪ್ರಕ್ರಿಯೆ ಆರಂಭ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರೂಡಸೆಟ್ ಸಂಸ್ಥೆಯಲ್ಲಿ ಉದ್ಯಮಿದಾರರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಹೆಸ್ಕಾಂ: ಕುಂದು-ಕೊರತೆ ಸಭೆ
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ: ಹೆಸ್ಕಾಂ ಕುಂದು-ಕೊರತೆ ಸಭೆ
    In (ರಾಜ್ಯ ) ಜಿಲ್ಲೆ
  • ೯೮ ಖರೀದಿ ಕೇಂದ್ರಗಳಲ್ಲಿ ತೊಗರಿ ಖರೀದಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಮಕ್ಕಳು ಸತತ ಅಧ್ಯಯನಶೀಲತೆ ರೂಢಿಸಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಹೊಲಗಳಲ್ಲಿ ಭೂಮಿತಾಯಿಗೆ ಚರಗ ಚೆಲ್ಲಿದ ರೈತರು
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ :ಡಿಸಿಎಂ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಕವಚ ವಾಹನ ಚಾಲಕ ಸಾಸನೂರ ಮೇಲೆ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಳ್ಳೊಳ್ಳಿ ಗ್ರಾಪಂನಲ್ಲಿ ಹಣ ದುರುಪಯೋಗ ಆರೋಪ :ತನಿಖೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕಿನಾದ್ಯಂತ ಎಳ್ಳ ಅಮವಾಸ್ಯೆ ಚರಗ ಚೆಲ್ಲುವ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.