ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಬಲೇಶ್ವರ ತಾಲೂಕಿನ ಹೆಸ್ಕಾಂನ ಗ್ರಾಮೀಣ ಉಪ ವಿಭಾಗ ಕಚೇರಿಯಲ್ಲಿ ಡಿ.೨೦ರ ಮಧ್ಯಾಹ್ನ ೩.೩೦ ಗಂಟೆಗೆ ವಿದ್ಯುತ್ ವಿತರಣೆಗೆ ಸಂಬಂಧಿಸಿದಂತೆ ಗ್ರಾಹಕರ ಅಹವಾಲು ಸ್ವೀಕರಿಸಲು ಕುಂದು-ಕೊರತೆ ಸಭೆ ಆಯೋಜಿಸಲಾಗಿದೆ.
ಸಭೆಗೆ ಹೆಚ್ಚಿನ ಸಂಖ್ಯೆಯ ಗ್ರಾಹಕರು ಪಾಲ್ಗೊಂಡು ವಿದ್ಯುತ್ಗೆ ಸಂಬಂಧಿಸಿದ ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಬಬಲೇಶ್ವರ ತಾಲೂಕಿನ ಹೆಸ್ಕಾಂನ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
