ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ತಾಲೂಕಿನ ಹೆಸ್ಕಾಂನ ಗ್ರಾಮೀಣ ಉಪ ವಿಭಾಗ ಕಚೇರಿಯಲ್ಲಿ ಡಿ.೨೦ರ ಮಧ್ಯಾಹ್ನ ೩ ಗಂಟೆಗೆ ವಿದ್ಯುತ್ ವಿತರಣೆಗೆ ಸಂಬಂಧಿಸಿದಂತೆ ಗ್ರಾಹಕರ ಅಹವಾಲು, ಕುಂದು-ಕೊರತೆ ಸಭೆ ಆಯೋಜಿಸಲಾಗಿದೆ.
ಸಭೆಗೆ ಗ್ರಾಹಕರು ಪಾಲ್ಗೊಂಡು ವಿದ್ಯುತ್ಗೆ ಸಂಬಂಧಿಸಿದ ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ವಿಜಯಪುರ ತಾಲೂಕಿನ ಹೆಸ್ಕಾಂನ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
