Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಂಎಲ್ಸಿ ಸುನೀಲಗೌಡ ಪತ್ರಕ್ಕೆ ಕೇಂದ್ರ ಸಚಿವ ನಿತೀನ್ ಗಡ್ಕರಿ ಸ್ಪಂದನೆ
(ರಾಜ್ಯ ) ಜಿಲ್ಲೆ

ಎಂಎಲ್ಸಿ ಸುನೀಲಗೌಡ ಪತ್ರಕ್ಕೆ ಕೇಂದ್ರ ಸಚಿವ ನಿತೀನ್ ಗಡ್ಕರಿ ಸ್ಪಂದನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ-ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50ರ ದುರಸ್ಥಿಗೆ ಆಗ್ರಹಿಸಿ ಎಂಎಲ್ಸಿ ಸುನೀಲಗೌಡ ಪಾಟೀಲ ಬರೆದ ಪತ್ರ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಅವರು ವಿಜಯಪುರ- ಚಿತ್ರದುರ್ಗ ಮತ್ತು ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50ರ ದುರಸ್ಥಿಗೆ ಆಗ್ರಹಿಸಿ ಬರೆದ ಪತ್ರಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಸ್ಪಂದಿಸಿದ್ದು, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಲಿಖಿತವಾಗಿ ಪತ್ರ ಬರೆಯುವ ಮೂಲಕ ಸ್ಪಂದಿಸಿದ್ದಾರೆ.
ಶಾಸಕ ಸುನೀಲಗೌಡ ಪಾಟೀಲ ಅವರು 24.11.2025 ರಂದು ಕೇಂದ್ರ ಸಚಿವ ನಿತೀನ ಗಡ್ಕರಿ ಅವರಿಗೆ ಪತ್ರ ಬರೆದಿದ್ದರು. ಮಹಾರಾಷ್ಟ್ರದ ಸೋಲಾಪುರದಿಂದ ಪ್ರಾರಂಭವಾಗಿ ರಾಜ್ಯದ ವಿಜಯಪುರ ಮೂಲಕ ಚಿತ್ರದುರ್ಗ ಮೂಲಕ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50 ಪ್ರಮುಖ ಹೆದ್ದಾರಿಗಳಲ್ಲಿ ಒಂದಾಗಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಆಂತಾರಾಜ್ಯ ಪ್ರಮುಖ ರಾಷ್ಟ್ರೀಯ ಹೆದ್ದಾರಿಯಾಗಿರುವ ಈ ರಸ್ತೆ ಹದಗೆಟ್ಟಿದೆ. ವಿಜಯಪುರದಿಂದ ಚಿತ್ರದುರ್ಗದವರೆಗೆ ರಸ್ತೆಯ ಮೇಲ್ಪದರು ಕಿತ್ತು ಹೋಗಿದೆ. ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿಯೂ ಬಹುತೇಕ ಹಾಳಾಗಿದೆ. ಈ ಎರಡೂ ಮಾರ್ಗಗಳಲ್ಲಿ ರಸ್ತೆ ಮಧ್ಯದಲ್ಲಿ ಕುಣಿಗಳು ಉಂಟಾಗಿದ್ದು, ವಾಹನಹಗಳ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಇದರಿಂದ ವಾಹನಗಳ ಸಂಚಾರ ನಿಧಾನವಾಗಿದ್ದು, ದಿನನಿತ್ಯ ಸಂಚಾರಕ್ಕೆ ಸಾರ್ವಜನಿಕರಿಗೆ ಅಪಾಯ ಎದುರಾಗಿದೆ. ಭಾರಿ ಸಾರಿಗೆ ವಾಹನಗಳೂ ಈ ರಸ್ತೆಯಲ್ಲಿ ಸಂಚರಿಸುವುದರಿಂದ ಈ ಸಮಸ್ಯೆ ಮತ್ತಷ್ಟು ಉಲ್ಬಣಿಸಲು ಕಾರಣವಾಗಿದೆ. ಅಲ್ಲದೇ, ಅತೀ ಹೆಚ್ಚು ವಾಹನಗಳು ಸಂಚರಿಸುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈ ಮಾರ್ಗವೂ ಒಂದಾಗಿದೆ. ಪ್ರತಿನಿತ್ಯ ಈ ಎರಡೂ ಮಾರ್ಗಗಳಲ್ಲಿ ಸುಮಾರು 27 ಸಾವಿರ ಪಿಸಿಯು(Passanger Car nUnits) ನಷ್ಟು ವಾಹನಗಳು ಸಂಚರಿಸುತ್ತವೆ. ದಿನೇ ದಿನೇ ವಾಹನಗಳ ಸಂಚಾರ ಹೆಚ್ಚಾಗುತ್ತಿದೆ. ವಿಜಯಪುರದಿಂದ ಬೆಂಗಳೂರು ಮಾರ್ಗದಲ್ಲಿ ಹುನಗುಂದ, ಕುಷ್ಟಗಿ ಹಾಗೂ ಹೊಸಪೇಟೆಗಳಿಗೆ ಬೇರೆ ಹೆದ್ದಾರಿಗಳು ಸಂಪರ್ಕಿಸುವುದರಿಂದ ಆ ಮಾರ್ಗದ ವಾಹನಗಳೂ ಇದೇ ರಸ್ತೆಗೆ ಸೇರಿ ವಾಹನ ದಟ್ಟಣೆ ಇನ್ನೂ ಹೆಚ್ಚಾಗುತ್ತಿದೆ ಎಂದು ಅವರು ಎಳೆಎಳೆಯಾಗಿ ಅಂಕಿ-ಅಂಶ ಸಮೇತ ಪತ್ರದಲ್ಲಿ ಪ್ರಸ್ತಾಪಿಸಿದ್ದರು.
ಅಷ್ಟೇ ಅಲ್ಲ, ಅತೀ ಹೆಚ್ಚು ಟೋಲ್ ಸಂಗ್ರಹವಾಗುವ ಮಾರ್ಗಗಳಲ್ಲಿ ಇದೂ ಒಂದಾಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಂದ ಪ್ರತಿದಿನ ಸರಾಸರಿ ಸುಮಾರು ರೂ. 30 ಲಕ್ಷ ಟೋಲ್ ಸಂಗ್ರಹಿಸಲಾಗುತ್ತಿದೆ. ಇಷ್ಟೋಂದು ಟೋಲ್ ಹಣ ಸಂಗ್ರಹವಾಗುತ್ತಿದ್ದರೂ ರಸ್ತೆ ಮಾತ್ರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಾನದಂಡಕ್ಕೆ ಅನುಗುಣವಾಗಿರದೇ ಕಳಪೆಯಾಗಿದೆ. ಆದ್ದರಿಂದ ಈ ರಸ್ತೆಯನ್ನು ನಿರ್ದಿಷ್ಠ ಮಾನದಂಡಗಳಿಗೆ ಅನುಗುಣವಾಗಿ ದುರಸ್ತಿ ಮಾಡಿ ಮೂಲಭೂತ ಸೌಲಭ್ಯ ಒದಗಿಸಬೇಕು. ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚಿ ಹೆದ್ದಾರಿಯಲ್ಲಿ ಹೊಸದಾಗಿ ಮೇಲ್ಪದರು ಹಾಕಬೇಕು. ಅಗತ್ಯವಿರುವ ಕಡೆ ಹೆದ್ದಾರಿಯನ್ನು ಅಗಲೀಕರಣ ಮಾಡಬೇಕು ಎಂದು ಶಾಸಕರು ತಮ್ಮ ಪತ್ರದಲ್ಲಿ ಮಾಹಿತಿ ನೀಡಿದ್ದರು.
ಅಲ್ಲದೇ, ಕೇಂದ್ರ ಸಚಿವರು ಮುತುವರ್ಜಿ ವಹಿಸಿದರೆ ಈ ರಸ್ತೆ ದುರಸ್ಥಿಯಾಗಿ ಮಾಡಿ ಕರ್ನಾಟಕ ಮತ್ತು ಮಹಾರಾಷ್ಟ್ರದ ಜನರಿಗೆ ಸಂಚಾರಕ್ಕೆ ಅನುಕೂಲ ಒದಗಿಸಬೇಕು. ಇದರಿಂದ ಈ ಮಾರ್ಗದಲ್ಲಿ ಬರುವ ಬಹಳಷ್ಟು ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದೆ. ಕೂಡಲೇ ಈ ನಟ್ಟಿನಲ್ಲಿ ಕ್ರಮ ಕೈಗೊಳ್ಳೇಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದರು.
ಈ ಪತ್ರಕ್ಕೆ ಕೇಂದ್ರ ಸಚಿವ ನಿತೀನ ಗಡ್ಕರಿ ಸ್ಪಂದಿಸಿದ್ದು, ಶಾಸಕ ಸುನೀಲಗೌಡ ಪಾಟೀಲ ಅವರು ಪ್ಸಸ್ತಾಪಿಸಿರುವ ಅಂಶಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ 11.12.2025 ರಂದು ಬರೆದ ಪತ್ರದಲ್ಲಿ ಉತ್ತರಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.