Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮೇಲದಲ್ಲಿ ಡಿ.24 ರಂದು ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ
(ರಾಜ್ಯ ) ಜಿಲ್ಲೆ

ಆಲಮೇಲದಲ್ಲಿ ಡಿ.24 ರಂದು ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಕ್ಕಳ ಸಾಹಿತ್ಯ ಸಂಗಮದ ಗೌರವ ಅಧ್ಯಕ್ಷ, ರಾಜ್ಯ ಪ್ರಶಸ್ತಿ ಪುರಸ್ಕೃತ‌ ಹ.ಮ.ಪೂಜಾರ ಸುದ್ದಿಗೋಷ್ಠಿ

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಮಕ್ಕಳು ಸಾಹಿತ್ಯಿಕವಾಗಿ ಬೆಳೆಯಬೆಕು ಎಂಬ ಸದುದ್ದೇಶದಿಂದ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳಲಾಗಿದೆ ಎಂದು ಮಕ್ಕಳ ಸಾಹಿತ್ಯ ಸಂಗಮದ ಗೌರವ ಅಧ್ಯಕ್ಷ, ರಾಜ್ಯ ಪ್ರಶಸ್ತಿ ಪುರಸ್ಕೃತ‌ ಹ.ಮ ಪೂಜಾರ ಹೇಳಿದರು.
ಶನಿವಾರ ಪಟ್ಟಣದ ವಿಶೇಶ್ವರ ಬಾಲಭಾರತಿ ಶಾಲೆಯಲ್ಲಿ ಡಿ. 24 ರಂದು ಹಮ್ಮಿಕೊಂಡ 12ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಆಲಮೇಲದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ಮಾಡಬೇಕು ಎಂದು ಕಂಡ ಕನಸು ಇಂದು ನನಸಾಗಿದೆ. ಈ ಸಮ್ಮೇಳನ ಅಖಿಲ ಭಾರತ ಸಮ್ಮೇಳನ ರೀತಿ ಆಯೋಜನೆ ಮಾಡಲಾಗಿದ್ದು ಇದು ಅತ್ಯಂತ ಖುಷಿ ನೀಡಿದೆ ಎಂದರು.
ನಾನು ಪ್ರಾಥಮಿಕ ಶಿಕ್ಷಣ ಮತ್ತ ಶಿಕ್ಷಕನಾಗಿ ಸೇವೆಗೈದ ಆಲಮೇಲದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ಮಾಡಬೇಕು ಎನ್ನುವ ಬಹುದಿನಗಳ ಕನಸು ನನಸಾಗಿದೆ. ಆಲಮೇಲ ಪಟ್ಟಣ ಸಾಹಿತ್ಯ, ಸಾಂಸ್ಕೃತಿಕ, ದೇಶಿಯ ಕಾರ್ಯಕ್ರಮ ಸೇರಿದಂತೆ ಪ್ರತಿಯೊಂದು ಅಚ್ಚುಕಟ್ಟಾಗಿ ಮಾಡುತ್ತಾರೆ ಎಂದು ಜಿಲ್ಲೆಯಲ್ಲಿ ಹೆಸರಿದೆ. ಅದಕ್ಕಾಗಿ 12ನೇ ಜಿಲ್ಲಾ ಮಕ್ಕಳ ಸಮ್ಮೇಳನ ಆಲಮೇಲದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಡಿ.24 ರಂದು ನಡೆಯುವ 12ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಜಯಪುರದ ಮಕ್ಕಳ ಸಾಹಿತಿ ಬಿ.ಆರ್. ನಾಡಗೌಡ ಅವರನ್ನು ಅವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಈ ಸಮ್ಮೇಳನದ ಮುಖ್ಯ ವೇದಿಕೆ ಮಕ್ಕಳ ಸಾಹಿತ್ಯ ಸಂಗಮದ ಸಂಸ್ಥಾಪಕ ಅಧ್ಯಕ್ಷ ಶಂ.ಗು. ಬಿರಾದಾರ ವೇದಿಕೆ ಎಂದು ಹೆಸರಿಡಲಾಗಿದೆ ಮತ್ತು ಎರಡು ಮುಖ್ಯ ದ್ವಾರ ಬಾಗಿಲುಗಳಿಗೆ ಮಕ್ಕಳಾ ಸಾಹಿತಿಗಳಾದ ಸಿಸು ಸಂಗಮೇಶ ಮತ್ತು ಬಾಯಿ ಕುಮಠೆ ಇಬ್ಬರ ಹೆಸರು ಇಡಲಾಗಿದೆ. ಸಿಂದಗಿ ಶಾಸಕ ಅಶೋಕ ಮನಗೂಳಿ ಸಮ್ಮೇಳನದ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.
ಜಿಲ್ಲಾ ಅಧ್ಯಕ್ಷ ಪ್ರೊ. ಎ.ಆರ್ ಹೆಗ್ಗನದೊಡ್ಡಿ ಮಾತನಾಡಿ, ಮಕ್ಕಳಿಗಾಗಿ ಪ್ರಾರಂಭಿಸಲಾದ ಮಕ್ಕಳ ಸಾಹಿತ್ಯ ಸಂಗಮದ ಕಾರ್ಯಕ್ರಮಗಳು ನಿರಂತರ ನಡೆಯಬೇಕು ಎಂಬ ಹಿರಿಯ ಮಕ್ಕಳ ಸಾಹಿತಿಗಳ ಆಸೆಯಂತೆ ಮುನ್ನಡೆಸಿಕೊಂಡು ಹೋಗಲಾಗುತ್ತದೆ. ಮಕ್ಕಳ ಸಾಹಿತ್ಯ ಸಂಗಮದ ಗೌರವ ಅಧ್ಯಕರಾದ ರಾಜ್ಯ ಪ್ರಶಸ್ತಿ ಪುರಸ್ಕ್ರತ ಹ.ಮ ಪೂಜಾರ ಅವರು ಕಳೆದ 49 ವರ್ಷಗಳಿಂದ ಮಕ್ಕಳಿಗಾಗಿ ಅನೇಕ ಕಾರ್ಯಕ್ರಮಗಳು ಮಾಡಿಕೊಂಡು ಬಂದಿದ್ದು, ಮಕ್ಕಳಲ್ಲಿರುವ ಸಾಹಿತ್ಯವನ್ನು ಹೊರ ತಂದು ಇನ್ನುಳಿದ ಮಕ್ಕಳಿಗೆ ಪ್ರೇರಣೆ ಆಗುವಂತೆ ನಿರಂತರವಾಗಿ ಮಕ್ಕಳ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದಾರೆ. ಅವರ ಆಸೆಯಂತೆ ಡಿ. 24 ರಂದು ನಡೆಯುವ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ ಸಾಂಸ್ಕೃತಿಕವಾಗಿ ದೇಶಿಯ ಕಲೆ, ವಾದ್ಯಗಳೊಂದಿಗೆ ಸರ್ವಾಧ್ಯಕ್ಷರ ಮೆರವಣಿಗೆ ಮಾಡಲಾಗುವದು. ಹಾಗೆ ಸಮ್ಮೇಳನದ ಪ್ರತಿಯೊಂದು ಉಪನ್ಯಾಸ, ಗೋಷ್ಠಿ ಮಕ್ಕಳ ಬಗ್ಗೆನೆ ಆಯೋಜನೆ ಮಾಡಲಾಗಿದೆ. ಮತ್ತು 2ನೇ ಗೋಷ್ಠಿ ಚಿಣ್ಣರ ಚಿಂತನಾ ಗೋಷ್ಠಿ ಅದ್ಯಕ್ಷ, ಉಪನ್ಯಾಸ ಎಲ್ಲವೂ ವಿವಿದ ಶಾಲೆಯ ಮಕ್ಕಳೆ ನಡೆಸಿಕೊಡಲಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಎಸ್.ಆಯ್. ಜೊಗೂರ, ಜಿಲ್ಲಾ ಕಾರ್ಯದರ್ಶಿ ಎಸ್.ಎಸ್. ಸಾತಿಹಾಳ, ಶಿವುಕುಮಾರ ಶಿವಶಿಂಪಿ, ತಾಲೂಕು ಅಧ್ಯಕ್ಷ ಲಕ್ಷ್ಮಿಪುತ್ರ ಕಿರನಳಿ, ಬೊಮ್ಮನಹಳ್ಳಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಗೀತಾ ಎಸ್, ಅಪ್ಪು ಶೆಟ್ಟಿ ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.