ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಆಯ-ವ್ಯಯ (ಬಜೆಟ್) ಅಂದಾಜು ಪತ್ರಿಕೆ ತಯಾರಿಸಲು ಸಾರ್ವಜನಿಕರಿಮದ ಸಲಹೆ-ಸೂಚನೆ ಪಡೆದುಕೊಳ್ಳಲು ದಿನಾಂಕ:೨೩-೧೨-೨೦೨೫ ರಂದು ಬೆಳಿಗ್ಗೆ ೧೧ ಗಂಟೆಗೆ ವಿಜಯಪುರ ಮಹಾನಗರ ಪಾಲಿಕೆ ಮುಖ್ಯ ಕಚೇರಿಯಲ್ಲಿ ದ್ವೀತಿಯ ಸುತ್ತಿನ ಆಯ-ವ್ಯಯ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ಸಾರ್ವಜನಿಕರು, ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳು, ವ್ಯಾಪಾರ ಮತ್ತು ಕೈಗಾರಿಕೆ ಸಂಸ್ಥೆ ಒಕ್ಕೂಟಗಳ ಸದಸ್ಯರು ಮತ್ತು ಇತರೆ ಸಂಘ-ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿ ಸಲಹೆ-ಸೂಚನೆಗಳನ್ನು ನೀಡುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯ ಮೂಲಕ ಕೋರಿದ್ದಾರೆ.
