Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರವಾಡ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯಕ್ಕೆ ಬದ್ಧ
(ರಾಜ್ಯ ) ಜಿಲ್ಲೆ

ಸಾರವಾಡ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯಕ್ಕೆ ಬದ್ಧ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಾರವಾಡ ಮತ್ತು ಸುತ್ತಮುತ್ತಲಿನ ತೊನಶ್ಯಾಳ, ದದಾಮಟ್ಟಿ, ಹೊನಗನಹಳ್ಳಿ, ಸವನಹಳ್ಳಿ, ಅತಾಲಟ್ಟಿ, ತೊರವಿ ಮುಂತಾದ ಗ್ರಾಮಗಳಿಗೆ ರೇವಣಸಿದ್ಧೇಶ್ವರ ಏತನೀರಾವರಿ ಯೋಜನೆ 2ನೇ ಹಂತದಲ್ಲಿ ನೀರಾವರಿ ಸೌಲಭ್ಯ ಒದಗಿಸಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಮಂಗಳವಾರ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ರೂ. 10 ಕೋ. ಅನುದಾನದಲ್ಲಿ ಸಾರವಾಡ – ಬಬಲೇಶ್ವರ ರಸ್ತೆಯ ಹಲಗಣಿ ಕ್ರಾಸ್ ವರೆಗೆ ಸುಧಾರಣೆ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ರೂ. 2 ಕೋ. ಅನುದಾನದಲ್ಲಿ ಸಾರವಾಡ – ತೊನಶ್ಯಾಳ ರಸ್ತೆ ಸುಧಾರಣೆ ಕಾಮಗಾರಿ, ಲೋಕೋಪಯೋಗಿ ಇಲಾಖೆಯ ರೂ. 5 ಕೋ. ಅನುದಾನದಲ್ಲಿ ಸಾರವಾಡ – ದದಾಮಟ್ಟಿ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ, ರೂ.2 ಕೋ. ವೆಚ್ಚದ ಡೋಣಿ ನದಿಯಲ್ಲಿರುವ ಹೂಳೆತ್ತುವ ಕಾರ್ಯಕ್ಕೆ ಚಾಲನೆ, ರೂ. 1 ಕೋ. ವೆಚ್ಚದಲ್ಲಿ ಚಿಕ್ಕಪ್ಪಯ್ಯ ಗುಡಿ ರಸ್ತೆ ಸುಧಾರಣೆ ಕಾಮಗಾರಿ ಭೂಮಿ ಪೂಜೆ, ಎಂ.ಪಿ.ಎಸ್ ಶಾಲೆಯಲ್ಲಿ ಮಕ್ಕಳ ಆಟಿಕೆ ಸಾಧನಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಬಾಕಿ ಕಾಮಗಾರಿ ಪೂರ್ಣಗೊಳಿಸಿ ಜಿಲ್ಲೆಯಲ್ಲಿ ಸಂಪೂರ್ಣ ನೀರಾವರಿ ಮಾಡಲಾಗುವುದು. ಬಬಲೇಶ್ವರ ಮತಕ್ಷೇತ್ರದಲ್ಲಿ ಸಾರವಾಡ ಗ್ರಾಮ ಹೃದಯದಲ್ಲಿದೆ. ಈ ಗ್ರಾಮಕ್ಕೆ ಮೊದಲ ಆದ್ಯತೆ ನೀಡುತ್ತಿದ್ದೇವೆ. ಈ ಗ್ರಾಮಸ್ಥರ ಉಪಕಾರ ನನ್ನ ಮೇಲೆ ಇದೆ. 2018ರಲ್ಲಿ ಪ್ರದಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ ಶಾ ಇಲ್ಲಿಗೆ ಬಂದು ನನ್ನನ್ನು ಸೋಲಿಸಲು ಭರ್ಜರಿ ಪ್ರಚಾರ ಮಾಡಿದರೂ ಸಾರವಾಡ ಗ್ರಾಮಸ್ಥರು ನನಗೆ 1600 ಮತಗಳ ಲೀಡ್ ನೀಡಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅವರು ಹೇಳಿದರು.
ಸಾರವಾಡ ಈಶ್ವರ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕೆ ಎರಡು ಹಂತದಲ್ಲಿ ತಲಾ ರೂ. 50 ಲಕ್ಷದಂತೆ ಒಟ್ಟು ರೂ. 1 ಕೋ. ಅನುದಾನ ನೀಡುತ್ತೇನೆ. ಮತಕ್ಷೇತ್ರದ 100 ಸರಕಾರಿ ಶಾಲೆಗಳ ಪೈಕಿ ಈಗಾಗಲೇ 58 ಶಾಲೆಗಳಲ್ಲಿ ಕ್ರೀಡಾ ಸಲಕರಣೆಗನ್ನು ಅಳವಡಿಸಲಾಗಿದೆ. ಸಾರವಾಡದಲ್ಲಿ ಟೊಯೊಟಾ ಕಿರ್ಲೋಸ್ಕರ್ ಸಿ.ಎಸ್.ಆರ್ ಅನುದಾನದಲ್ಲಿ ಪ್ರಾಥಮಿಕ ಶಾಲೆ ಅಭಿವೃದ್ಧಿ ಮಾಡಲಾಗುವುದು. ಬಾಲಕಿಯರ ಮತ್ತು ಉರ್ದು ಶಾಲೆಯನ್ನೂ ಅಭಿವೃದ್ಧಿ ಪಡಿಸಲಾಗುವುದು. ಪ್ರಗತಿಪಥ ಯೋಜನೆಯಡಿ ಗ್ರಾಮೀಣ ರಸ್ತೆ ಅಭಿವೃದ್ಧಿ ಪಡಿಸಲಾಗುತ್ತಿದೆ. ಸಾರವಾಡದಲ್ಲಿ 110 ಕೆವಿ ಸ್ಟೇಷನ್ ನಿರ್ಮಾಣ, ಡೋಣಿ ಸೇತುವೆ ಅಗಲೀಕರಣ ಮಾಡಲಾಗುವುದು. ಗ್ರಾಮದಲ್ಲಿ ಮೂರು ಎಕರೆಯಲ್ಲಿ ಸುಸಜ್ಜಿತವಾಗಿ ನಿವೇಶನಗಳನ್ನು ಅಭಿವೃದ್ಧಿ ಪಡಿಸಿ 123 ದಲಿತ ಕುಟುಂಬಗಳಿಗೆ ಹಂಚಿಕೆ ಮಾಡಲಾಗುವುದು. ದದಾಮಟ್ಟಿ- ಜುಮನಾಳ ಕ್ರಾಸ್ ರಸ್ತೆ ಅಭಿವೃದ್ಧಿ, ಬಸ್ ನಿಲ್ದಾಣ ನಿರ್ಮಾಣ, ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ, ಡೋಣಿ ನದಿ ಹೂಳೆತ್ತುವ ಕಾಮಗಾರಿ ಮಾಡಲಾಗುವುದು. ಡೋಣಿ ನದಿ ಹೂಳೆತ್ತುವ ಯೋಜನೆ ಪರಿಷ್ಕೃತ ಯೋಜನೆಯನ್ನು ಕೇಂದ್ರ ಸರಕಾರಕ್ಕೆ ಈಗಾಗಲೇ ಕಳುಹಿಸಲಾಗಿದೆ. ಒಂದು ವರ್ಷದೊಳಗೆ ಸಾರವಾಡ ಗ್ರಾಮಸ್ಥರ ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇನೆ. ಜಿಲ್ಲೆಗೆ ಐದಾರು ಕೈಗಾರಿಕೆಗಳು ಇಲ್ಲಿಗೆ ಬರಲಿವೆ. ವೈಜ್ಞಾನಿಕ ಕೃಷಿ ಕೈಗೊಳ್ಳಲು ಅಕ್ಷಯ ಕಲ್ಪ ಸಂಘಟನೆಯ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಹೈನುಗಾರಿಕೆ ಉತ್ತೇಜನ ನೀಡಲಾಗುವುದು ಎಂದು ಸಚಿವ ಎಂ. ಬಿ. ಪಾಟೀಲ ಹೇಳಿದರು.
ಜಿ.ಪಂ. ಮಾಜಿ ಅಧ್ಯಕ್ಷ ವಿ. ಎಸ್. ಪಾಟೀಲ, ಮುಖಂಡರಾದ ಚನ್ನಪ್ಪ ಕೊಪ್ಪದ, ಸೋಮನಾಥ ಕಳ್ಳಿಮನಿ, ರೈತ ಕಂಟೆಪ್ಪ ಕಣಬೂರ ಮಾತನಾಡಿದರು.
ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯ ವಾಲಿ ಸಚಿವ ಎಂ. ಬಿ. ಪಾಟೀಲ ಅವರ ಕುರಿತು ಸ್ವರಚಿತ ಕವನ ವಾಚಿಸಿದರು.
ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಅತಿಥಿಮಠದ ಶ್ರೀ ಜಸಾರಂಗಪ್ಪಯ್ಯ ಮಹಾಸ್ವಾಮಿಗಳು, ಸಾರವಾಡ ಹಿರೇಮಠ ಶ್ರೀ ರೇಣುಕಸ್ವಾಮಿಗಳು ಹಿರೇಮಠ, ಬಬಲೇಶ್ವರ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ, ಮುಖಂಡರಾದ ಸದಾಶಿವ ಚಿಕರೆಡ್ಡಿ, ಶರಣಪ್ಪ ಬಿದರಿ, ಈಶ್ವರ ಇನಾಮದಾರ, ಡಾ. ಗಂಗಾಧರ ಸಂಬಣ್ಣಿ, ಗ್ರಾ. ಪಂ ಅಧ್ಯಕ್ಷ ಎಂ. ಎಸ್ ಪಾಟೀಲ, ಈಶ್ವರಪ್ಪ ಚಿಕರೆಡ್ಡಿ, ಜಯಗೌಡ ಪಾಟೀಲ, ಶಶಿಧರ ಬಿದರಿ, ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಸಿ. ಎಸ್. ಪೋಲಿಸಪಾಟೀಲ, ಗದಿಗೆಪ್ಪ ಕಲಾದಗಿ, ಸಾರವಾಡ, ದದಾಮಟ್ಟಿ, ಕಣಮುಚನಾಳ ಗ್ರಾಮಸ್ಥರು, ಯುವಕರು, ಮಹಿಳೆಯರು ಉಪಸ್ಥಿತರಿದ್ದರು.

” ಬಬಲೇಶ್ವರ ಮತಕ್ಷೇತ್ರ ರಾಜ್ಯದ 224 ಮತಕ್ಷೇತ್ರಗಳಲ್ಲಿ ಜನಪ್ರೀಯ ಮತ್ತು ಜನಾನುರಾಗಿಯಾಗಿದೆ. ಇದಕ್ಕೆ ಸಚಿವ ಎಂ. ಬಿ. ಪಾಟೀಲ ಅವರು ಕಾರಣ. ಅಭಿವೃದ್ಧಿಯ ಮೂಲಕ ಜನರಲ್ಲಿ ಮನಪರಿವರ್ತನೆ ಮಾಡಿದ್ದಾರೆ. ಜಾತ್ಯತೀತವಾಗಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ತಾಯಿ ಹೃದಯದ ಜನನಾಯಕರಾಗಿದ್ದಾರೆ.”

– ಸಂಗಮೇಶ ಬಬಲೇಶ್ವರ
ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರು

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.