Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
(ರಾಜ್ಯ ) ಜಿಲ್ಲೆ

ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೋರಾಟಗಾರರ ದಿಕ್ಕು ತಪ್ಪಿಸುತ್ತಿರುವ ಕೆಲ ಬಿಜೆಪಿ ನಾಯಕರು | ಹೋರಾಟಗಾರರ ಬಗ್ಗೆ ನನಗೆ ಅಪಾರ ಗೌರವ | ಸಚಿವ ಡಾ. ಎಂ.ಬಿ.ಪಾಟೀಲ ಸ್ಪಷ್ಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಹೋರಾಟಗಾರರ ಬಗ್ಗೆ ನನಗೆ ಅಪಾರ ಗೌರವವಿದೆ, ಅವರು ನಮ್ಮವರು, ಆದರೆ ಹೋರಾಟಗಾರರನ್ನು ದಿಕ್ಕು ತಪ್ಪಿಸುತ್ತಿರುವ ಕೆಲವು ಬಿಜೆಪಿ ನಾಯಕರು ಮೊದಲು ಹೋಗಿ ಪ್ರಧಾನಿ ಅವರನ್ನು ಖಾಸಗೀಕರಣದ ಪ್ರಶ್ನೆ ಮಾಡಲಿ, ಪಿಪಿಪಿ ಬಿಜೆಪಿ ಹಾಗೂ ಮೋದಿ ಅವರ ಕೂಸು, ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಅಧಿಸೂಚನೆ ಹೊರಡಿಸಿದ್ದೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಸ್ಪಷ್ಟಪಡಿಸಿದರು.
ಖಾಸಗಿ ಸಹಭಾಗಿತ್ವದಲ್ಲಿ ಪಿಪಿಪಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಸಂಬಂಧಿಸಿದಂತೆ ಬಿಜೆಪಿಯ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಹೊರಡಿಸಲಾದ ಅಧಿಸೂಚನೆ ಮೊದಲಾದ ದಾಖಲಾತಿಗಳನ್ನು ಪ್ರದರ್ಶಿಸಿದರು. ಈ ಬಗ್ಗೆ ಸದನದಲ್ಲಿಯೂ ಬಿಜೆಪಿ ನಾಯಕರು ಬಿಜೆಪಿ ನಿಲುವಿನ ಬಗ್ಗೆ ಸ್ಪಷ್ಟಪಡಿಸಿದ್ದಾರೆ, ಆ ದಾಖಲಾತಿಯೂ ನನ್ನ ಬಳಿ ಇದೆ, ಇಷ್ಟೆಲ್ಲ ಇರುವಾಗ ವಿನಾಕಾರಣ ಹೋರಾಟಗಾರರ ದಿಕ್ಕು ತಪ್ಪಿಸುವುದೇಕೆ ಎಂದು ಪ್ರಶ್ನಿಸಿದರು.
ಸರ್ಕಾರಿ ಮೆಡಿಕಲ್ ಕಾಲೇಜ್ ನಿರ್ಮಾಣ ಮಾಡುವ ಹೋರಾಟ ನ್ಯಾಯಯುತ, ಅವರು ಕೇಳುತ್ತಿರುವುದರಲ್ಲಿ ತಪ್ಪಿಲ್ಲ, ನಾನು ಸಹ ಆ ಹೋರಾಟಕ್ಕೆ ಭಾಗವಹಿಸಿ ಬೆಂಬಲ ಸೂಚಿಸಿರುವೆ, ಹೋರಾಟಗಾರರ ಬಗ್ಗೆಯೂ ನನಗೆ ಅಪಾರ ಗೌರವವಿದೆ, ಹೋರಾಟಗಾರರೆಲ್ಲ ನಮ್ಮವರೇ, ಆದರೆ ಹೋರಾಟಗಾರರ ದಿಕ್ಕು ತಪ್ಪಿಸುತ್ತಿರುವ ಕೆಲವು ಬಿಜೆಪಿ ಫುಡಾರಿಗಳು ಅವರ ದಿಕ್ಕು ತಪ್ಪಿಸುತ್ತಿದ್ದಾರೆ, ಪಿಪಿಪಿ ಬಗ್ಗೆ ಅವರದ್ದೇ ಸರ್ಕಾರ ಮಾಡಿದ್ದು, ಮೊದಲು ಹೋಗಿ ಮೋದಿಜಿ ಅವರನ್ನು ಪಿಪಿಪಿ ಬಗ್ಗೆ ಪ್ರಶ್ನೆ ಮಾಡಲಿ ಎಂದು ಸವಾಲು ಹಾಕಿದರು.
ಬಿಜೆಪಿ ಅವಧಿಯ ಸರ್ಕಾರದಲ್ಲಿ ಮೇ.೯ರ ೨೦೨೨ ರಂದು ಸರ್ಕಾರ ಅಧಿಸೂಚನೆ ಹೊರಡಿಸಿ ರಾಜ್ಯದ ೧೧ ಜಿಲ್ಲೆಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜುಗಳು ಆರಂಭಿಸಲು ಹಾಗೂ ಜಿಲ್ಲಾ ಆಸ್ಪತ್ರೆಯನ್ನು ಉನ್ನತೀಕರಿಸಲು ಐ-ಡೆಕ್ ಸೇವೆಯ್ನು ೩೨೪.೫೦ ಲಕ್ಷ ರೂ. ವೆಚ್ಚದಲ್ಲಿ ಟ್ರಾö್ಯನ್ಸಕ್ಷನ್ ಅಡವೈಸರ್ ಆಗಿ ಪಡೆಯಲು ಅಧಿಸೂಚನೆ ಹೊರಡಿಸಿದ ಮಹತ್ವದ ದಾಖಲೆಗಳನ್ನು ಸಹ ಪ್ರದರ್ಶಿಸಿದರು. ಅದಕ್ಕೆ ಪೂರಕವಾದ ನೀಲನಕ್ಷೆ ಮೊದಲಾದ ಸಮಗ್ರ ವಿವರಗಳನ್ನು ಒದಗಿಸಿದರು.

ನಾನೂ ಸರ್ಕಾರಿ ಮೆಡಿಕಲ್ ಕಾಲೇಜ್ ಪರವಾಗಿಯೇ ಇದ್ದೇನೆ

“ನಾನು ಬಿಎಲ್‌ಡಿಇ ಸಂಸ್ಥೆಯಿಂದಲೋ ಮೆಡಿಕಲ್ ಕಾಲೇಜು ಮಾಡಬೇಕೆನ್ನುವ ಯಾವ ಉಮೇದು ಇಲ್ಲ, ಇದರ ಅವಶ್ಯಕತೆಯೂ ಇಲ್ಲ, ಇನ್ನೊಂದು ಪಿಪಿಪಿಯಾದರೂ ಸಹ ಸರ್ಕಾರಿ ಕೋಟಾ ಮೆಡಿಕಲ್ ಸೀಟುಗಳಿಗೆ ಯಾವ ಬಾಧ್ಯತೆಯೂ ಇಲ್ಲ, ಆದರೆ ನಾನು ಸಹ ಸರ್ಕಾರಿ ಮೆಡಿಕಲ್ ಕಾಲೇಜ್ ಪರವಾಗಿಯೇ ಇದ್ದೇನೆ, ಸಚಿವ ಸಂಪುಟದಲ್ಲಿಯೂ ಈ ಬಗ್ಗೆ ಧ್ವನಿ ಎತ್ತಿರುವೆ, ವಿಜಯಪುರದ ಇನ್ನೋರ್ವ ಸಚಿವ ಸಂಪುಟ ಸಹೋದ್ಯೋಗಿಗೂ ಕೇಳಿ ನೋಡಿ ಎಂದು ಸಚಿವ ಎಂ.ಬಿ.ಪಾಟೀಲ ನುಡಿದರು.
ಮತ್ತೊಮ್ಮೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸುವೆ
ಈ ಹಿಂದೆಯೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸಿರುವೆ, ಆದರೆ ಅಂದು ಮುಖ್ಯಮಂತ್ರಿಗಳ ಧರ್ಮಪತ್ನಿ ಅವರ ಅನಾರೋಗ್ಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಧಾವಂತದಲ್ಲಿದ್ದರು, ಸರಣಿ ಸಭೆಗಳು ಸಹ ಆ ದಿನ ಇದ್ದವು, ಆದರೂ ಹೋರಾಟಗಾರರನ್ನು ಗೌರವಯುತವಾಗಿಯೇ ಚರ್ಚೆ ನಡೆಸಲಾಗಿದೆ, ಈ ಮತ್ತೊಮ್ಮೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡುವ ದಿನಾಂಕ ಅಥವಾ ವಿಜಯಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ನಿಯೋಗದೊಂದಿಗೆ ಭೇಟಿ ಮಾಡಿಸಲಾಗುವುದು, ಈ ಬಾರಿ ನಾನು ಸಹ ಹೋರಾಟಗಾರರ ಪರವಾಗಿ ಪ್ರಬಲವಾಗಿ ನಮಗೆ ಸರ್ಕಾರಿ ಮೆಡಿಕಲ್ ಕಾಲೇಜು ಬೇಕು ಎಂದು ಒತ್ತಡ ತರುವೆ. ಇನ್ನು ಮುಖ್ಯಮಂತ್ರಿಗಳು ಲಿಖಿತವಾಗಿ ಬರೆದುಕೊಡಬೇಕು, ಸ್ಥಳಕ್ಕೆ ಭೇಟಿ ನೀಡಬೇಕು ಎಂಬುದರಲ್ಲಿ ಅರ್ಥವಿಲ್ಲ, ಅವರು ಖಂಡಿತವಾಗಿಯೂ ನಮಗೆ ಸ್ಪಂದಿಸುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ ಭರವಸೆ ನೀಡಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಕುಮಸಗಿ ಶಾಲಾ ಸಂಸತ್ತು ರಚನೆ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಹನಿಟ್ರ್ಯಾಪನಿಂದ ಯುವಕನ ಅಪಹರಣ :8 ಆರೋಪಿಗಳ ಬಂಧನ!
    In (ರಾಜ್ಯ ) ಜಿಲ್ಲೆ
  • ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ
    In (ರಾಜ್ಯ ) ಜಿಲ್ಲೆ
  • ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು
    In (ರಾಜ್ಯ ) ಜಿಲ್ಲೆ
  • ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣರು ಜಾನಪದ ಸಾಹಿತ್ಯದ ವಾರಸುದಾರರು :ಆಲಮೇಲ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.