Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
(ರಾಜ್ಯ ) ಜಿಲ್ಲೆ

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲದಲ್ಲಿ ನಡೆದ 12ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಬಿ.ಆರ್.ನಾಡಗೌಡ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಶಂ.ಗು.ಬಿರಾದಾರ ವೇದಿಕೆ
ಆಲಮೇಲ: ಮಕ್ಕಳ ಸಾಹಿತ್ಯ ಸರ್ವ ಶ್ರೇಷ್ಠ ಸಾಹಿತ್ಯ ಈ ಸಾಹಿತ್ಯವು ಮಗು ಕೇಂದ್ರಿತ ಸಾಹಿತ್ಯವಾಗಿದೆ ಮಕ್ಕಳಲ್ಲಿ ವಿಭಿನ್ನ ರೀತಿಯ ಪ್ರತಿಭೆಗಳು ಇದ್ದೇ ಇರುತ್ತವೆ. ಮಕ್ಕಳಲ್ಲಿ ಅಡಗಿರುವ ಕೌಶಲ್ಯ ಸೃಜನಶೀಲತೆ ಪ್ರತಿಭೆಗಳನ್ನು ಗುರುತಿಸಿ ಅವರಲ್ಲಿ ಸ್ಪರ್ಧಾತ್ಮಕ ಮನೋಭಾವನೆ ವ್ಯಕ್ತಿತ್ವ ವಿಕಸನ ಉಜ್ವಲ ಭವಿಷ್ಯಕ್ಕಾಗಿ ಶ್ರೇಯೋಭಿವೃದ್ಧಿಗಾಗಿ ಉತ್ತೇಜನಗೊಳ್ಳಲು ಇಂಥಹ ಸಮ್ಮೇಳನದ ವೇದಿಕೆಗಳು ಪರಿಣಾಮಕಾರಿಯಾಗುತ್ತವೆ ಎಂದು 12ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಮಕ್ಕಳ ಸಾಹಿತಿ ಬಿ.ಆರ್.ನಾಡಗೌಡ ಹೇಳಿದರು.
ಪಟ್ಟಣದ ಶ್ರೀವೀಶ್ವೇಶ್ವರ ದೇವಸ್ಥಾನದ ಆವರಣದಲ್ಲಿ ಮಕ್ಕಳ ಸಾಹಿತ್ಯ ಸಂಗಮ ಏರ್ಪಡಿಸಿದ್ದ 12ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ಬಹಳಷ್ಟು ಬದಲಾಗಿದ್ದಾರೆ. ಅವರ ಕೈಯಲ್ಲಿ ಪುಸ್ತಕಗಳಿಗಿಂತ ಹೆಚ್ಚಾಗಿ ಮೊಬೈಲ್ ಮತ್ತು ವಿಡಿಯೋ ಗೇಮ್‌ಗಳು ಆವರಿಸಿಕೊಂಡಿವೆ. ಈ ಪರಿಸ್ಥಿತಿಯು ನಮ್ಮ ಮುಂದಿನ ಪೀಳಿಗೆಯ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಎನ್ನುವುದನ್ನು ನಾವು ಗಂಭೀರವಾಗಿ ಯೋಚಿಸಬೇಕಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು
ಇಂದಿನ ದಿನಗಳಲ್ಲಿ ಮೊಬೈಲ್ ಮತ್ತು ಟಿವಿಗಳ ಬಳಕೆ ಹೆಚ್ಚಾಗಿದ್ದು, ಪುಸ್ತಕಗಳ ಓದು ಕಡಿಮೆಯಾಗಿದೆ, ಮಕ್ಕಳು ಪುಸ್ತಕಗಳಿಂದ ದೂರವಾದರೆ ಅವರಲ್ಲಿ ಸಂಸ್ಕಾರ ಮತ್ತು ಭಾಷಾ ಜ್ಞಾನದ ಕೊರತೆ ಉಂಟಾಗಬಹುದು, ಪೋಷಕರು ಮಕ್ಕಳಿಗೆ ದಿನನಿತ್ಯ ಕನಿಷ್ಠ ಅರ್ಧ ಗಂಟೆಯಾದರೂ ಪುಸ್ತಕ ಓದುವ ಹವ್ಯಾಸವನ್ನು ರೂಢಿಸಬೇಕು, ಮಕ್ಕಳ ಸಾಹಿತ್ಯವು ಅವರ ಸುಪ್ತ ಮನಸ್ಸಿನ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ.
​ಪಾಲಕರು ತಮ್ಮ ಮಕ್ಕಳಿಗೆ ಉಡುಗೊರೆಯಾಗಿ ಮೊಬೈಲ್ ನೀಡುವ ಬದಲು ಉತ್ತಮ ಪುಸ್ತಕಗಳನ್ನು ನೀಡಿದರೆ ಅವರ ಭವಿಷ್ಯಕ್ಕೆ ಅಡಿಪಾಯ ಹಾಕಿದಂತಾಗುತ್ತದೆ. ಜ್ಞಾನ ಎಂಬುದು ನಿರಂತರವಾಗಿ ಹರಿಯುವ ನದಿ ಇದ್ದಂತೆ, ಅದನ್ನು ಪುಸ್ತಕಗಳ ಮೂಲಕ ಪಡೆದುಕೊಳ್ಳೋಣ ಎಂದರು.
ಸಮ್ಮೇಳನವನ್ನು ಉದ್ಘಾಟಿಸಿದ ಶಾಸಕ ಅಶೋಕ ಮನಗೂಳಿ ಮಾತನಾಡಿ ‘ ಮಕ್ಕಳ ಸಾಹಿತ್ಯದ ಎಲ್ಲಾ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುವೆ, ಮಕ್ಕಳ ಸಂಗಮದ ಕಾರ್ಯಗಳಿಗೆ ಪ್ರತಿವರ್ಷ ೨೫ ಸಾವಿರೂ ರೂ. ನೀಡುವೆ, ಮಕ್ಕಳ‌ ಭವನ ನಿರ್ಮಾಣ ಮಾಡುವದಕ್ಕೂ ಆರ್ಥಿಕ ಸಹಾಯ ಮಾಡುವದಾಗಿ ಹೇಳಿದರು.
ಮಾಜಿ ಶಾಸಕ‌ ರಮೇಶ ಭೂಸನೂರ, ಮಾಜಿ‌ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಮಾತನಾಡಿದರು. ನಿಕಟ ಪೂರ್ವ ಸಮ್ಮೇಳನಾಧ್ಯಕ್ಷ‌ ಬಿ.ಎಂ.ಪಾಟೀಲ, ಸಮ್ಮೇಳನದ‌ ರೂವಾರಿ ಹ.ಮ.ಪೂಜಾರ ಮೊದಲಾದವರು ಮಾತನಾಡಿದರು.
ಜಿಲ್ಲಾ ಮಕ್ಕಳ‌ಸಾಹಿತ್ಯ ಸಂಗಮದ ಜಿಲ್ಲಾ ಅಧ್ಯಕ್ಷ ಎ.ಆರ್.ಹೆಗ್ಗನದೊಡ್ಡಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಸಾಪ ಅಧ್ಯಕ್ಷ ಶಿವಶರಣ ಗುಂದಗಿ, ತಾಲ್ಲೂಕು ಅಧ್ಯಕ್ಷ ಲಕ್ಷ್ಮಿಪುತ್ರ ಕಿರನಳ್ಳಿ ಸ್ವಾಗತಿಸಿದರು. ಪ್ರಾಚಾರ್ಯ ರಮೇಶ ಗಂಗನಳ್ಳಿ ವಂದಿಸಿದರು.

ಅದ್ಧೂರಿ ಮೆರವಣಿಗೆ, ಎಲ್ಲೆಲ್ಲೂ ಮಕ್ಕಳ ಕಲರವ

ಆಲಮೇಲ: ಪಟ್ಟಣದ ತುಂಬೆಲ್ಲ ಕನ್ನಡಾಂಬೆಯ ಜೈ ಘೋಷ.. ಎಲ್ಲೆಲ್ಲೂ ಮಕ್ಕಳ ಕಲರವ.. ಇದು ಕಂಡುಬಂದಿದ್ದು ಆಲಮೇಲ ಪಟ್ಟಣದಲ್ಲಿ ಹಮ್ಮಿಕೊಂಡಿರುವ 12ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲಿ.
ಪಟ್ಟಣದ ಎ.ಕೆ. ನಂದಿ ಪ್ರೌಢಶಾಲೆಯ ಆವರಣದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಮಕ್ಕಳ ಸಾಹಿತಿ ಬಿ. ಆರ್. ನಾಡಗೌಡ ಅವರ ಸಾರೋಟದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಸಾನಿಧ್ಯವನ್ನು ಸಂಗನಬಸವ ಶಿವಾಚಾರ್ಯರು ಅರ್ಜುಣಗಿ ಹಿರೇಮಠ ಆಲಮೇಲ, ಶ್ರೀಶೈಲಯ್ಯ ಸ್ವಾಮಿಗಳು ಅಳ್ಳೊಳ್ಳಿ ಮಠ, ಕೆ ಪಿ ಆರ್ ಶುಗರ್ಸ್ ಲಿ. ನ ಆಡಳಿತ ಅಧಿಕಾರಿ ಪಾರ್ಥಿಬನ್ ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಹಿಬೂಬ ಮಸಳಿ ಮೆರವಣಿಗೆಗೆ ಚಾಲನೆ ನೀಡಿದರು. ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕಗೌಡ ಕೊಳಾರಿ, ಪ್ರಭು ವಾಲಿಕಾರ, ರಮೇಶ ಬಂಟನೂರ, ಬಸವರಾಜ ಹೂಗಾರ, ಶಿವಮೂರ್ತಿ ಕಾಟಕರ ಸೇರಿದಂತೆ ಅನೇಕರಿದ್ದರು.

ಮೆರವಣಿಗೆ ಯುದ್ದಕ್ಕೂ ಡೊಳ್ಳು, ಚಿಟ್ಟ ಹಲಗೆ, ಬೇಂಡ್, ಬ್ಯಾಂಜೋ ಸದ್ದು ಜೋರಾಗಿತ್ತು.
ಕನ್ನಡಾಂಬೆಯ ಹಾಗೂ ಕರ್ನಾಟಕದ ಕುರಿತಾದ ಸಂಗೀತ ಎಲ್ಲೆಡೆ ಜೋರಾಗಿ ಕೇಳಿ ಬರುತ್ತಿತ್ತು, ಶಾಲಾಮಕ್ಕಳು ಕನ್ನಡಾಂಬೆಯ ಜೈ ಘೋಷ ಮಾಡುತ್ತಾ ಸಂಭ್ರಮಿಸುತ್ತಿದ್ದರು, ಎಲ್ಲರ ಕೊರಳಲ್ಲಿ ಕನ್ನಡಾಂಬೆಯ ಶಾಲು ಹಾಗೂ ಮಕ್ಕಳ ಕೈಯಲ್ಲಿ ಕನ್ನಡಾಂಬೆಯ ಧ್ವಜ ರಾರಾಜಿಸುತ್ತಿತ್ತು, ರಸ್ತೆ ಯುದ್ಧಕ್ಕೂ ರಸ್ತೆ ಬದಿಯಲ್ಲಿ ನಿಂತಿದ್ದ ಕನ್ನಡ ಅಭಿಮಾನಿಗಳು ಜಯ ಘೋಷ ಕೂಗುತ್ತಾ ಮೆರವಣಿಗೆಗೆ ಮತ್ತಷ್ಟು ಮೆರಗು ತಂದರು.
ಮನೆಗಳ ಮುಂದೆ ರಂಗೋಲಿ ಹಾಕಿ, ಆರತಿ ಮಾಡಿ ತಾಯಂದರು ಸ್ವಾಗತಿಸಿದರು,
ತಾಲೂಕಿನ ಕನ್ನಡಪರ ಸಂಘಟನೆಗಳು ಮಹಿಳಾ ಸಂಘಟನೆಗಳು ದಲಿತಪರ ಸಂಘಟನೆಗಳು ಅಂಗನವಾಡಿ ಆಶಾ ಕಾರ್ಯಕರ್ತೆಯರು ಗ್ರಾಮದ ಪ್ರಮುಖ ಮುಖಂಡರುಗಳು ಶಾಲೆಯ ಶಿಕ್ಷಕರುಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಮೆರವಣಿಗೆಗೆ ಮತ್ತಷ್ಟು ಮೆರವ ತಂದುಕೊಟ್ಟರು.
ಆಲಮೇಲ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸರ್ವಾಧ್ಯಕ್ಷರ ಮೆರವಣಿಗೆಯು ವಿಶ್ವೇಶ್ವರ ದೇವಸ್ಥಾನಕ್ಕೆ ಆಗಮಿಸಿತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಕುಮಸಗಿ ಶಾಲಾ ಸಂಸತ್ತು ರಚನೆ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಹನಿಟ್ರ್ಯಾಪನಿಂದ ಯುವಕನ ಅಪಹರಣ :8 ಆರೋಪಿಗಳ ಬಂಧನ!
    In (ರಾಜ್ಯ ) ಜಿಲ್ಲೆ
  • ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ
    In (ರಾಜ್ಯ ) ಜಿಲ್ಲೆ
  • ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು
    In (ರಾಜ್ಯ ) ಜಿಲ್ಲೆ
  • ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣರು ಜಾನಪದ ಸಾಹಿತ್ಯದ ವಾರಸುದಾರರು :ಆಲಮೇಲ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.