Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
(ರಾಜ್ಯ ) ಜಿಲ್ಲೆ

ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ಉದ್ದೇಶದಿಂದ “ಮೀಡಿಯೇಶನ್ ಫಾರ್ ದ ನೇಶನ್ ೨.೦” ಎಂಬ ರಾಷ್ಟ್ರಮಟ್ಟದ ವಿಶೇಷ ಮಧ್ಯಸ್ಥಿಕೆ ಅಭಿಯಾನವನ್ನು ಜ.೨ ೨೦೨೬ ರಿಂದ ರಾಜ್ಯದಾದ್ಯಂತ ಎಲ್ಲ ನ್ಯಾಯಾಲಯಗಳಲ್ಲಿ ಆರಂಭಿಸಲಾಗುತ್ತಿದೆ.
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕರ್ನಾಟಕ ಹೈಕೋರ್ಟ್, ಬೆಂಗಳೂರು ಇವರ ನಿರ್ದೇಶನದಂತೆ ಈ ಅಭಿಯಾನವನ್ನು ೯೦ ದಿನಗಳ ಅವಧಿಗೆ ಹಮ್ಮಿಕೊಳ್ಳಲಾಗಿದ್ದು, ಪರಸ್ಪರ ರಾಜಿ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸುವುದಕ್ಕೆ ಒತ್ತು ನೀಡಲಾಗುತ್ತದೆ.
ಈ ಅಭಿಯಾನದಡಿ ಜ.೩೧ ೨೦೨೬ ರವರೆಗೆ ಮಧ್ಯಸ್ಥಿಕೆಗೆ ಯೋಗ್ಯವಾದ ಪ್ರಕರಣಗಳನ್ನು ಗುರುತಿಸಲಾಗುತ್ತದೆ. ಗುರುತಿಸಲಾದ ಪ್ರಕರಣಗಳನ್ನು ಸಂಬಂಧಿತ ನ್ಯಾಯಾಲಯಗಳ ಅನುಮೋದನೆಯೊಂದಿಗೆ ಮಧ್ಯಸ್ಥಿಕೆ ಕೇಂದ್ರಗಳಿಗೆ ರವಾನಿಸಲಾಗುವುದು. ವಕೀಲರು, ನ್ಯಾಯಾಲಯದ ಸಿಬ್ಬಂದಿ, ಕಾನೂನು ಪ್ರಾಧ್ಯಾಪಕರು ಹಾಗೂ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳ ಸಹಕಾರದಿಂದ ಪ್ರಕರಣಗಳ ಗುರುತಿಸುವ ಕಾರ್ಯ ನಡೆಯಲಿದೆ.
ಕುಟುಂಬ ವ್ಯಾಜ್ಯಗಳು, ನಾಗರಿಕ ವಿವಾದಗಳು, ಚೆಕ್ ಬೌನ್ಸ್ ಪ್ರಕರಣಗಳು, ಹಣಕಾಸು ಸಂಬಂಧಿತ ವ್ಯಾಜ್ಯಗಳು ಸೇರಿದಂತೆ ಮಧ್ಯಸ್ಥಿಕೆಗೆ ಸೂಕ್ತವಾದ ಪ್ರಕರಣಗಳನ್ನು ಈ ಅಭಿಯಾನದಲ್ಲಿ ಪರಿಗಣಿಸಲಾಗುತ್ತದೆ. ಪಕ್ಷಗಾರರು ಮತ್ತು ವಕೀಲರು ಮಧ್ಯಸ್ಥಿಕೆಗೆ ಯೋಗ್ಯವಿದ್ದ ತಮ್ಮ ಪ್ರಕರಣಗಳನ್ನು ಇಲ್ಲಿನ ನ್ಯಾಯಾಲಯಗಳ ಸಂಕೀರ್ಣದಲ್ಲಿರುವ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಿ ನೀಡಬಹುದು.
ನ್ಯಾಯಾಲಯಗಳ ಮೇಲಿನ ಭಾರ ಕಡಿಮೆ ಮಾಡಿ, ವಿವಾದಗಳಿಗೆ ಶಾಂತಿಯುತ ಹಾಗೂ ವೇಗವಾದ ಪರಿಹಾರ ಒದಗಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಈ ವಿಶೇಷ ಮಧ್ಯಸ್ಥಿಕೆ ಅಭಿಯಾನದಲ್ಲಿ ಪಕ್ಷಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ರವೀಂದ್ರಕುಮಾರ ಕಟ್ಟಿಮನಿ ಮತ್ತು ಸದಸ್ಯ ಕಾರ್ಯದರ್ಶಿಗಳಾದ ರಾಮಮೂರ್ತಿ ಎನ್ ರವರು ಪ್ರಕಟಣೆಯಲ್ಲಿ ಕೋರಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕರಡಕಲ್ ಗ್ರಾಪಂ ಅಧ್ಯಕ್ಷರಾಗಿ ದೇವಿಂದ್ರಪ್ಪ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
    In (ರಾಜ್ಯ ) ಜಿಲ್ಲೆ
  • ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಮನೆಯಿಂದಲೇ ಇ-ಖಾತಾ ಪಡೆವ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಸಂಪರ್ಕ ಸಭೆಗೆ ಬರದಂತೆ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.