Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ.ಬಿ.ಪಾಟೀಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜಧಾನಿಯಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಖಾಯಂ ರೈಲು ಸೇವೆಯಾಗಿ ಪರಿವರ್ತಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಆಗ್ರಹಿಸಿದ್ದಾರೆ.
ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ಬೆಂಗಳೂರಿನಿಂದ ವಿಜಯಪುರಕ್ಕೆ ಈ ಎರಡೂ ಬೈಪಾಸ್ ಮೂಲಕವೇ ರೈಲು ಸಾಗುವಂತೆ ಮಾಡಬೇಕು ಎಂದು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಈ‌ ನಿಟ್ಟಿನಲ್ಲಿ ನೈರುತ್ಯ ರೈಲ್ವೆ ಅಧಿಕಾರಿಗಳ ಜತೆ ಹಲವು ಸಭೆಗಳನ್ನು ನಡೆಸಲಾಗಿದೆ. ನಮ್ಮ ಪ್ರಯತ್ನಕ್ಕೆ ವಿಶೇಷ ರೈಲಿನ ರೂಪದಲ್ಲಿ ಮೊದಲ ಯಶಸ್ಸು ಸಿಕ್ಕಿರುವುದು ಸಂತಸ ತಂದಿದೆ ಎಂದಿದ್ದಾರೆ.
ಬೈಪಾಸ್ ಮೂಲಕ ಚಲಿಸಿದ್ದ ಕಾರಣಕ್ಕೆ ಎರಡೂ ಕಡೆ ಎಂಜಿನ್ ಬದಲಿಸುವ ಪ್ರಮೇಯ ಬಂದಿಲ್ಲ. ಬಾಗಲಕೋಟೆ, ವಿಜಯಪುರ ಕಡೆಗೆ ಹೋಗುವ ಎಲ್ಲ ರೈಲುಗಳನ್ನು ಇದೇ ರೀತಿ ಬೈಪಾಸ್ ಮೂಲಕ ಸಂಚರಿಸುವಂತೆ‌ ಮಾಡಿದರೆ ಪ್ರಯಾಣದ ಅವಧಿ ಕಡಿಮೆ‌ ಮಾಡಬಹುದು ಎಂಬುದು ನನ್ನ ನಿಲುವು. ಈ ನಿಟ್ಟಿನಲ್ಲಿ ರೈಲ್ವೆ ಅಧಿಕಾರಿಗಳ ಜತೆ ಸಭೆಗಳು ನಡೆದಿವೆ ಎಂದು ಹೇಳಿದರು.
ಈ ವಿಶೇಷ ರೈಲು ಕೇವಲ ಒಂಬತ್ತು ನಿಲುಗಡೆ ಹೊಂದಿತ್ತು. ಬುಧವಾರ ರಾತ್ರಿ ಯಶವಂತಪುರದಿಂದ ಹೊರಟ ರೈಲು ಗುರುವಾರ ಬೆಳಿಗ್ಗೆ 9 ಗಂಟೆ ಬದಲಿಗೆ 11 ಗಂಟೆಗೆ ತಲುಪಿದೆ. ವಿಶೇಷ ರೈಲಾಗಿದ್ದರಿಂದ ನಿಗದಿತ ಸಮಯಕ್ಕೆ ತಲುಪಲು ಆಗಿಲ್ಲವಷ್ಟೆ. ಈ ವಿಶೇಷ ರೈಲು ಸೇವೆಗೆ ವಿಜಯಪುರ ಜಿಲ್ಲೆಯ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು-ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿಯನ್ನು ಈಗಿನ 14 ಗಂಟೆಗಳಿಂದ 10 ಗಂಟೆಗಳಿಗೆ ಇಳಿಸಲು ಪ್ರಯತ್ನ ನಡೆದಿದೆ. ಹೀಗಾಗಿ, ಮೈಸೂರು- ಫಂಡರಪುರ ನಡುವಿನ ಗೋಲಗುಂಬಜ್ ಎಕ್ಸ್‌ಪ್ರೆಸ್‌ ರೈಲನ್ನು ಖಾಯಂ ಆಗಿ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕವೇ ಓಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಈ ಸಂಬಂಧವಾಗಿ ಕೇಂದ್ರ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್, ಸೋಮಣ್ಣ ಅವರಿಗೆ ಪತ್ರ ಬರೆದು, ವ್ಯವಹರಿಸಲಾಗುವುದು. ಬೆಂಗಳೂರಿನಿಂದ ರಾತ್ರಿ ಹೊರಡುವ ರೈಲುಗಳು ವಿಜಯಪುರಕ್ಕೆ ಬೆಳಿಗ್ಗೆ 6-7 ಗಂಟೆಯ ಹೊತ್ತಿಗೆ ತಲುಪುವಂತೆ ವೇಳಾಪಟ್ಟಿ ಬದಲಿಸಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಪಾಟೀಲ ಪ್ರತಿಪಾದಿಸಿದ್ದಾರೆ.
ಇದಲ್ಲದೆ, ವಿಜಯಪುರಕ್ಕೆ ಒಂದು ಪ್ರತ್ಯೇಕ ವಿಶೇಷ ರೈಲನ್ನು ಕಾಯಂ ಆಗಿ ಓಡಿಸಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ.
ಸಾಮಾನ್ಯವಾಗಿ ವಿಶೇಷ ರೈಲು ಗಳು ನಂತರದ ದಿನಗಳಲ್ಲಿ ಕಾಯಂ ಆಗುತ್ತವೆ ಎಂದೂ ಅವರು ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.