100 ನೇ ದಿನ ತುಂಬಿದ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಅನಿರ್ಧಿಷ್ಟ ಧರಣಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: 100 ದಿನ ತುಂಬಿದರೂ ಕೂಡ ಸರಕಾರ ವಿಜಯಪುರಕ್ಕೆ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸುತ್ತಿಲ್ಲ. ಅದಕ್ಕಾಗಿ ಶುಕ್ರವಾರ ನಗರದ ಗಾಂಧಿವೃತ್ತದಲ್ಲಿ 20000 ಕ್ಕೂ ಹೆಚ್ಚು ಸಾರ್ವಜನಿಕರು ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ವಿಜಯಪುರದ ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ಕಾರ್ಮಿಕರು, ರೈತರು, ವಿಕಲ ಚೇತನರು, ಮುದ್ದು ಮಕ್ಕಳು ಸಹಿ ಹಾಕುವುದರ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸರಕಾರದ ಈ ನೀತಿಯನ್ನು ಖಂಡಿಸಿ ಕಳೆದ ನೂರು ದಿನಗಳಿಂದ ಅನಿರ್ದಿಷ್ಟ ಧರಣಿ ಹಾಗೂ 8 ದಿನಗಳಿಂದ ಅಹೋರಾತ್ರಿ ಧರಣಿ ನಡೆಯುತ್ತಿದ್ದು ಸರಕಾರ ಇನ್ನು ಜನಗಳ ಹೋರಾಟಕ್ಕೆ ಸ್ಪಂದಿಸದಿದ್ದಕ್ಕಾಗಿ ಜಿಲ್ಲೆಯ ಜನ ಜಾಗೃತಿ ಮೂಡಿಸುವ ಉದ್ದೇಶಕ್ಕಾಗಿ 100 ಮೀಟರ್ ಬ್ಯಾನರ್ ಮೇಲೆ ಸಾವಿರಾರು ಸಹಿಯನ್ನು ದಿನವಿಡಿ ಸಹಿ ಸಂಗ್ರಹ ಮಾಡಲಾಯಿತು.
100 ಮೀಟರ್ ಬ್ಯಾನರ್ ಅನ್ನು ಹಿಡಿದು ನಗರದ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯ ಮೂಲಕ ಗಾಂಧಿವೃತ್ತಕ್ಕೆ ಆಗಮಿಸಿ ನೂರು ದಿನದ ಸಂಗ್ರಹಣ ಅಭಿಯಾನವನ್ನು ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷರಾದ ಯು ಬಸವರಾಜ್ ರವರು ಮಾತನಾಡುತ್ತಾ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಎಲ್ಲವನ್ನು ಖಾಸಗೀಕರಣ ಮಾಡಲು ಹೊರಟಿದೆ. ಜನ ಜಾಗೃತ ಆಗಬೇಕು. ಈ ಐತಿಹಾಸಿಕ ಹೋರಾಟ ಎಲ್ಲಾ ಜನರಿಗೆ ಮಾದರಿಯಾಗಲಿ ಎಂದು ಹೇಳಿದರು.
ಹೋರಾಟ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.


