Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರಕ್ಷಕರು ಸಮಾಜದ ಸುರಕ್ಷತೆಯ ಮುಖ್ಯ ಅಂಗ :ಎಸ್ಪಿ ನಿಂಬರಗಿ
(ರಾಜ್ಯ ) ಜಿಲ್ಲೆ

ಆರಕ್ಷಕರು ಸಮಾಜದ ಸುರಕ್ಷತೆಯ ಮುಖ್ಯ ಅಂಗ :ಎಸ್ಪಿ ನಿಂಬರಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಾನೂನು-ಸುವ್ಯವಸ್ಥೆ ಕಾಪಾಡಲು ದಿನದ ೨೪ ಗಂಟೆಗಳ ಕಾಲ ಕರ್ತವ್ಯ ಸನ್ನದ್ಧರಾಗುವ ಆರಕ್ಷಕರು ಸಮಾಜದ ಸುರಕ್ಷತೆಯ ಬಹುಮುಖ್ಯ ಅಂಗ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಹೇಳಿದರು.
ವಿಜಯಪುರದ ಸಾಯಿ ಉದ್ಯಾನವನದ ಆವರಣದಲ್ಲಿ ಎ.ಆರ್.ಜೆ. ಗುರುಕುಲ ಅಂತಾರಾಷ್ಟ್ರೀಯ ಶಾಲೆಯ ಹಾಗೂ ಜಿಲ್ಲಾ ಪೋಲಿಸ್ ಇಲಾಖೆ ಸಹಯೋಗದಲ್ಲಿ ದೇಶ ರಕ್ಷಕರಿಗೆ, ಆರಕ್ಷಕರಿಗೆ ಹಾಗೂ ಹಲವಾರು ಸೇವಾ ನಿರತರಿಗೆ ಗೌರವಿಸಲು ಆಯೋಜಿಸಿದ್ದ ಸೆಲ್ಯೂಟ್' ಎಂಬ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸರ ಭಾಷೆ ಕಠಿಣವಿರಬಹುದು, ಅಪರಾಧಿಕ ಚಟುವಟಿಕೆಗಳ ವಿರುದ್ಧ ಸೆಣಸಾಟದಲ್ಲಿ ಅಪರಾಧಿಗಳಿಗೆ ಕಠಿಣ ಭಾಷೆಯೇ ಪ್ರಯೋಗಿಸಬೇಕಾಗುತ್ತದೆ, ಆದರೆ ಪೊಲೀಸರು ಜನಸ್ನೇಹಿ. ಈಗ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು. ಈಗ ಅಪರಾಧಗಳ ಸ್ವರೂಪವೂ ಬದಲಾಗುತ್ತಿದೆ, ಪೊಲೀಸರ ಜವಾಬ್ದಾರಿಯೂ ಅಧಿಕವಾಗುತ್ತದೆ, ಗಡಿಯಾರ ನೋಡದೇ ಕೆಲಸ ಮಾಡುವ ಆರಕ್ಷಕರು, ವೀರಯೋಧರನ್ನು ನಾವು ಸದಾ ಗೌರವಿಸುವ ಕಾರ್ಯ ಮಾಡಬೇಕು, ಅವರನ್ನು ಗೌರವಿಸಲು ಅಪೂರ್ವವಾದಸೆಲ್ಯೂಟ್’ ಕಾರ್ಯಕ್ರಮ ಆಯೋಜಿಸಿರುವುದು ಅರ್ಥಪೂರ್ಣ ಎಂದರು.
ಲಾಡಲಿ ಫೌಂಡೇಷನ್ ರಾಯಭಾರಿ ಕು.ಶಿಫಾ ಜಮಾದಾರ ಮಾತನಾಡಿ, ಸಮವಸ್ತ್ರ ಧರಿಸಿದ ಅಧಿಕಾರಿಗಳು ಪ್ರತಿಯೊಂದು ಅರ್ಥದಲ್ಲಿಯೂ ರಾಷ್ಟ್ರದ ರಕ್ಷಕರು ಸೈನಿಕರು ಗಡಿಯಲ್ಲಿ ಬಾಹ್ಯ ಬೆದರಿಕೆಗಳಿಂದ ನಮ್ಮ ದೇಶವನ್ನು ರಕ್ಷಿಸಿದರೆ ಆಂತರಿಕ ರಕ್ಷಣಾ ಪಡೆಗಳು ಕಾನೂನು ಸುವ್ಯವಸ್ಥೆ ಮತ್ತು ಸಾಮಾಜಿಕ ಸಾಮರಸ್ಯವನ್ನು ಕಾಪಾಡುವ ಮೂಲಕ ರಾಷ್ಟ್ರವನ್ನು ಒಳಗಿನಿಂದ ರಕ್ಷಿಸುತ್ತಾರೆ ಎಂದರು.
ಮಾಜಿ ಶಾಸಕ ಪ್ರೊ. ರಾಜು ಆಲಗೂರ ಮಾತನಾಡಿದರು. ಹೆಚ್ಚುವರಿ ಪೋಲಿಸ್ ಅಧಿಕ್ಷಕ ರಾಮನಗೌಡ ಹಟ್ಟಿ, ಉಪಪೋಲಿಸ್ ವರಿಷ್ಟಾಧಿಕಾರಿ ಡಾ.ಬಸವರಾಜ ಯಲಗಾರ, ಶ್ರೀದೇವಿ ಕಾರಜೋಳ, ಶರಣು ಸಬರದ, ವರುಣ ಕುಲಕರ್ಣಿ, ಶಾರುಕ ತಹಶಿಲ್ದಾರ ಉಪಸ್ಥಿತರಿದ್ದರು.
ಎಆರ್‌ಜೆ ಫೌಂಡೇಷನ್‌ನ ಅಧ್ಯಕ್ಷರಾದ ಪಂ. ಸಂಜೀವಾಚಾರ್ಯ ಮಧಭಾವಿ ಆಶೀರ್ವಚನ ನೀಡಿದರು.
ಸಮಾಜದ ಸುರಕ್ಷತೆಗಾಗಿ ಅನುಪಮವಾಗಿ ತೊಡಗಿಸಿಕೊಂಡಿರುವ ಸುಮಾರು ೮೦ ಪೋಲಿಸ್‌ರಿಗೆ, ಸೈನಿಕರಿಗೆ, ಅಗ್ನಿಶಾಮಕ ಸಿಬ್ಬಂದಿ ಲೋಕಾಯುಕ್ತ ಪ್ರಾಮಾಣಿಕತೆ ಮೆರೆದ ಆಟೊ ಚಾಲಕರಿಗೆ ಸೇರಿದಂತೆ ವಿವಿಧ ರಕ್ಷಣಾ ಸಿಬ್ಬಂದಿಗಳಿಗೆ ಸನ್ಮಾನಿಸಲಾಯಿತು.
ನಂತರ ಖ್ಯಾತ ಗಾಯಕಿ ಎಂ.ಡಿ. ಪಲ್ಲವಿ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ದೇಶಭಕ್ತಿ ಕುರಿತು ಶಾಲಾ ವಿದ್ಯಾರ್ಥಿಗಳು ಕಾರ್ಗಿಲ್ ವಿಜಯ ಹಾಗೂ ಸಿಂಧೂರ ಅಪರೇಷನ್ ನೃತ್ಯ ಮೂಲಕ ದೇಶದ ಪರಾಕ್ರಮವನ್ನು ಪ್ರದರ್ಶಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.