Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಯ್ಯಪ್ಪ ಸ್ವಾಮಿ ವೃತಾಚರಣೆ ನಿಯಮ, ಪರಂಪರೆ ಐತಿಹಾಸಿಕ
(ರಾಜ್ಯ ) ಜಿಲ್ಲೆ

ಅಯ್ಯಪ್ಪ ಸ್ವಾಮಿ ವೃತಾಚರಣೆ ನಿಯಮ, ಪರಂಪರೆ ಐತಿಹಾಸಿಕ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಅಯ್ಯಪ್ಪ ಸ್ವಾಮಿಯ ವೃತಾಚರಣೆ, ನಿಯಮ, ಪರಂಪರೆ ಐತಿಹಾಸಿಕವಾದದ್ದು. ೭೦ರ ದಶಕದಿಂದ ಶುರುವಾದ ಪರಂಪರೆ ಸಧ್ಯ ಕರ್ನಾಟಕದಿಂದ ಪ್ರತೀ ವರ್ಷ ಕೋಟ್ಯಾಂತರ ಮಾಲಾಧಾರಿಗಳು ಅಯ್ಯಪ್ಪನ ದರ್ಶನ ಪಡೆಯುತ್ತಾರೆ ಎಂದು ಭಾರತೀಯ ಅಯ್ಯಪ್ಪ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ರಾಮು ಕರಾಂಡ ಗುರುಸ್ವಾಮಿಗಳು ಹೇಳಿದರು.
ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ ಮಹಾಪೂಜೆ ಹಾಗೂ ಪಡಿಪೂಜೆಯ ಬಳಿಕ ಮಾಧ್ಯದವರನ್ನುದ್ದೇಶಿಸಿ ಅವರು ಮಾತನಾಡಿದರು.
ಮಂಡಲ ಕಾಲ ವೃತಾಚರಣೆ ಮಾಡುವದರಿಂದ ನಮ್ಮ ದೇಹ, ಮನಸ್ಸು ಪರಿಶುದ್ಧವಾಗುತ್ತದೆ. ಮನಸ್ಸಿಗೆ ನೆಮ್ಮದಿ, ಆನಂದ, ಸಂತೋಷ, ಸಂಮೃದ್ಧಿ ಪ್ರಾಪ್ತಿಯಾಗುತ್ತದೆ. ಅಯ್ಯಪ್ಪ ಅಂದರೆ ಕಲಿಯುಗದ ವರದ. ಬೇಡಿದ ವರಗಳನ್ನು ತಕ್ಷಣ ನೀಡುವ ದೇವರು. ಹಾಗಾಗಿ ಕೋಟ್ಯಾಂತರ ಜನ ನಂಬಿ ಅವರ ಮೊರೆ ಹೋಗಿ, ತಮ್ಮನ್ನು ತಾವು ಸಮರ್ಪಣೆ ಮಾಡಿಕೊಂಡು ಶರಣಾಗುತ್ತಾರೆ ಎಂದರು.
ಸತತ ೩೨ನೇ ವರ್ಷದ ಮಾಲಾಧಾರಿ ಶಿವು ಕಿರಶ್ಯಾಳ ಗುರುಸ್ವಾಮಿ ಅವರು ಮಾತನಾಡಿ, ಕಳೆದ ೧೭ ವರ್ಷಗಳಿಂದ ಈ ಆವರಣದಲ್ಲಿ ಮಹಾಪೂಜೆ ನೆರವೇರಿಸುತ್ತ ಬರುತ್ತಿದ್ದೇವೆ. ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಪೂಜೆ ಶ್ರದ್ಧೆ, ಭಕ್ತಿ ಮತ್ತು ಸಂಯಮದ ಪ್ರತೀಕ. ಈ ಪೂಜೆಯ ಮೂಲಕ ಮಾಲಾಧಾರಿಗಳ ಸಮೇತ ಪಟ್ಟಣದ ಸದ್ಭಕ್ತರು ಮನಸ್ಸಿನ ಅಶಾಂತಿ ತೊರೆದು ಆತ್ಮ ಶುದ್ಧಿಯನ್ನು ಪಡೆಯುತ್ತಾರೆ ಎಂದರು.
ಬಾಗೇವಾಡಿಯ ಚಂದ್ರು ಗುರುಸ್ವಾಮಿ ಮಾತನಾಡಿ ಸ್ವಾಮಿ ಅಯ್ಯಪ್ಪನ ಕೃಪೆಯಂದ ಸಕಲ ವಿಘ್ನಗಳು ದೂರವಾಗಿ ಜೀವನದಲ್ಲಿ ಶಾಂತಿ ಹಾಗೂ ಸದ್ಭಾವನೆ ನೆಲೆಸುತ್ತದೆ. ಸ್ವಾಮಿ ಶರಣಂ ಅಯ್ಯಪ್ಪ ಎಂಬ ನಾಮಸ್ಮರಣೆಯೇ ಭಕ್ತರ ಹೃದಯದಲ್ಲಿ ಧರ್ಮ ಮತ್ತು ಸಮಾನತೆಯ ಸಂದೇಶ ಸಾರುತ್ತದೆ ಎಂದರು.
ಅAದು ಬೆಳಿಗ್ಗೆ ಸಕಲ ವಾದ್ಯ ವೈಭವಗಳೊಂದಿಗೆ ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಕಾಳಿಕಾದೇವಿ ದೇವಸ್ಥಾನದಿಂದ ಪಲ್ಲಕ್ಕಿ ಉತ್ಸವ ಹಾಗೂ ಅಯ್ಯಪ್ಪ ಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆಯನ್ನು ನಡೆಸಲಾಯಿತು. ಸಂಜೆ ಮಣಿಕಂಠನ ವಿಶೇಶ ಹಾಡುಗಳು, ಭರತ ನಾಟ್ಯ, ಮಹಾಭಿಷೇಕ, ಮಹಾಪೂಜೆ ಮತ್ತು ಪಡಿಪೂಜೆ ಭಕ್ತರ ಗಮನ ಸೆಳೆದವು. ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಕಾರ್ಯದರ್ಶಿ ಶ್ರೀಶೈಲ ಮೇಟಿ ಪೂಜಾ ವಿಧಾನಗಳಲ್ಲಿ ಭಾಗಿಯಾಗಿದರು. ಪ್ರಥಮ ಮಾಲಾಧಾರಿ ಬಸವರಾಜ ಪವಾಡಶೆಟ್ಟಿ ಗುರುಸ್ವಾಮಿ, ಹಿರಿಯರಾದ ಗಿರಿಯಪ್ಪ ಬಡಿಗೇರ ಗುರುಸ್ವಾಮಿ, ಸನ್ನಿಧಿಯ ಮೂಲ ಅರ್ಚಕರಾದ ರುದ್ರಯ್ಯ ಹಿರೇಮಠ ಗುರುಸ್ವಾಮಿ, ಅಡಕಿ ಗುರುಸ್ವಾಮಿಗಳು, ವಿಕ್ರಂ ಬಿರಾದಾರ ಗುರುಸ್ವಾಮಿ, ಸೇರಿದಂತೆ ಜಿಲ್ಲೆಯ ಹಲವು ಗುರುಸ್ವಾಮಿಗಳು, ಮಾಲಾಧಾರಿಗಳು ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಮಿತಿಯ ಅಧ್ಯಕ್ಷ ಸುನೀಲ ಇಲ್ಲೂರ, ಸದಸ್ಯರಾದ ಟಿ.ಭಾಸ್ಕರ, ಅಶೋಕ ಚಟ್ಟೇರ, ಭೀಮಣ್ಣ ದಾಸರ ಪೂಜೆಯ ಯಶಸ್ವಿಗೆ ಶ್ರಮಿಸಿದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಮಾಜಿ ಸದಸ್ಯ ಮುತ್ತು ರಾಯಗೊಂಡ ಸೇರಿದಂತೆ ಅನೇಕ ಭಕ್ತರು ಇದ್ದರು. ಯಲಗೂರದ ಅಪ್ಪಾಜಿ ಮೆಲೊಡೀಸ್ ನವರು ವಿಶೇಶ ಸಂಗೀತ ಸೇವೆ ನೀಡಿದರು.

“ರಾಜ್ಯದಾದ್ಯಂತ ಭಾರತೀಯ ಅಯ್ಯಪ್ಪ ಸೇವಾ ಸಂಘವನ್ನು ಬೆಳವಣಿಗೆ ಮಾಡಿ ಶರಬಿಮಲೆಯಲ್ಲಿ ರಾಜ್ಯದ ಛಾಪು ಮೂಡಿಸಬೇಕಾಗಿದೆ. ಶಬರಿಮಲೆಯಲ್ಲಿ ಕರ್ನಾಟಕ ಭವನ ನಿರ್ಮಿಸಲು ಶ್ರಮಿಸುತ್ತಿದ್ದೇವೆ. ಇದಕ್ಕೆ ಎಲ್ಲ ಮಾಲಾಧಾರಿಗಳಿಗೆ ಸಹಕಾರ ಬೇಕಾಗಿದೆ.”

– ರಾಮು ಕರಾಂಡ ಗುರುಸ್ವಾಮಿಗಳು
ರಾಜ್ಯಾಧ್ಯಕ್ಷರು, ಭಾರತೀಯ ಅಯ್ಯಪ್ಪ ಸೇವಾ ಸಂಘ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.