Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆ-ಮನೋಭಾವ ಮೂಡಿಸಿ :ಡಾ.ಕರ್ಜಗಿ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆ-ಮನೋಭಾವ ಮೂಡಿಸಿ :ಡಾ.ಕರ್ಜಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಂದಿನ ತಾಂತ್ರಿಕ ಯುಗದಲ್ಲಿ ವಿಜ್ಞಾನ ಪರಿಭಾಷೆಯು ಎಲ್ಲಡೆಯೂ ಸಿಗುತ್ತವೆ. ಆದರೆ ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆ ಮತ್ತು ಮನೋಭಾವ ಮೂಡಿಸುವುದು ಇಂದಿನ ಶಿಕ್ಷಣದ ಗುರಿಯಾಗಬೇಕು ಎಂದು ಬೆಂಗಳೂರಿನ ಸೃಜನಶೀಲ ಅಧ್ಯಾಪನ ಕೇಂದ್ರದ ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ ಹೇಳಿದರು.
ಡಿ.೨೮.೨೯ರಂದು ನಗರದ ಆಕ್ಟ್-ಶಾರದಾ ಪಬ್ಲಿಕ್ ಶಾಲೆಯ ಕಲಾ ಸೌರಭ ೨೦೨೫-೨೬ನೇ ಸಾಲಿನ ಎರಡು ದಿನಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳ ಸರ್ವಾಂಗೀಣ ಶೈಕ್ಷಣಿಕ ಪ್ರಗತಿಯಲ್ಲಿ ವಿಜ್ಞಾನದ ಜೊತೆಜೊತೆಗೆ ಮೌಲ್ಯವರ್ಧನೆಗೆ ಒತ್ತು ನೀಡುವ ವಿವಿಧ ಸಾಂಸ್ಕöÈತಿಕ ಚಟುವಟಿಕೆಗಳಿಗೆ ಒತ್ತು ನೀಡಿದಾಗ ನಿಜವಾದ ಸೃಜನಶೀಲತೆ ಮಕ್ಕಳಲ್ಲಿ ಮೂಡಿಬರುತ್ತದೆ ಎಂದು ತಿಳಿಸಿದರು.
ಪಠ್ಯ ವಿಷಯವನ್ನು ವಿಶೇಷ ಜ್ಞಾನವನ್ನಾಗಿಸಿದಾಗ ಅದೇ ವಿಜ್ಞಾನವಾಗುತ್ತದೆ. ಈ ವಿಜ್ಞಾನವನ್ನು ಜೀವನಕ್ಕೆ ರೂಢಿಸಿಕೊಂಡಾಗ ಅರಿವಿನ ಅಭಿಜ್ಞಾನವಾಗುತ್ತದೆ. ವಿಜ್ಞಾನವು ಬೆಂಕಿ ಇದ್ದ ಹಾಗೆ, ಇದರಿಂದ ದೀಪವನ್ನು ಬೆಳಗಿಸಬಹುದು, ಮನೆ ಸುಡುವದಕ್ಕೂ ಬಳಸಬಹುದು ಆದರೆ ವಿಜ್ಞಾನವನ್ನು ಹೇಗೆ ಬಳಸಬೇಕು ಎಂಬ ಪ್ರಜ್ಞೆ ಮತ್ತು ವಿವೇಕವನ್ನು ಬೆಳೆಸುವುವಲ್ಲಿ ಶಿಕ್ಷಕರು ಮತ್ತು ಪೋಷಕರು ವಿಶೇಷ ಪಾತ್ರ ವಹಿಸಬೇಕೆಂದು ಹೇಳಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಆಶೀರ್ವಚನ ನೀಡಿದ ಕಾಖಂಡಕಿ ಗುರುದೇವ ಆಶ್ರಮದ ಪೂಜ್ಯ ಶಿವಯೋಗಿಶ್ವರ ಸ್ವಾಮೀಜಿಯರು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಜೈ ಜವಾನ್ ಜೈ ಕಿಸಾನ್ ಆಗಬೇಕೆಂದು ಕರೆಕೊಟ್ಟು, ಶ್ರೀ ಸಿದ್ಧೇಶ್ವರ ಸ್ವಾಮಿಜಿಯರ ಮಾತಿನಂತೆ ನಿಸರ್ಗವನ್ನು ಪ್ರೀತಿಸುವ ಎಲ್ಲರೂ ನಿಜವಾದ ರೈತರು. ದೇಶವನ್ನು ಪ್ರೀತಿಸುವ ಎಲ್ಲರೂ ನಿಜವಾದ ಯೋಧರು ಎಂದು ಉಲ್ಲೇಖಿಸಿದರು.
ಈ ನಿಟ್ಟಿನಲ್ಲಿ ನಾವುಗಳು ನಮ್ಮ ಮಕ್ಕಳಲ್ಲಿ ರೈತರ ಮತ್ತು ಯೋಧರ ಮೌಲ್ಯಗಳನ್ನು ರೂಢಿಸಿಕೊಳ್ಳುವ ಶಿಕ್ಷಣ ದೊರೆಯುವಂತೆ ಮಾಡಬೇಕು ಎಂದು ಪಾಲಕರಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಭಾರತದ ಸಾಧನೆಯ ಘೋಷವಾಕ್ಯವಾದ “ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ, ಜೈ ಅಭಿಜ್ಞಾನ್” ಎಂಬ ವಸ್ತು ವಿಷಯವನ್ನು ಶಾಲೆಯ ಎರಡು ಸಾವಿರ ಮಕ್ಕಳು ನಾನಾ ಕಲಾ ಪ್ರಕಾರಗಳ ಮೂಲಕ ನೆರೆದ ಪೋಷಕರನ್ನು ಮನೋರಂಜಿಸಿ, ಎಲ್ಲಾ ಸಭಿಕರ ಮೆಚ್ಚುಗೆಗೆ ಪಾತ್ರರಾದರು. “ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ, ಜೈ ಅಭಿಜ್ಞಾನ್” ಎಂಬ ವಸ್ತು ವಿಷಯವನ್ನು ನಾಟಕ, ನೃತ್ಯ, ಹಾಡು, ರೂಪಕಗಳ ಮೂಲಕ ನೆರೆದ ಪೋಷಕರಿಗೆ ಮನೋರಂಜನೆಯ ಸವಿಯುಣಿಸಿತು.
ರೈತರ ಬವಣೆಗಳು, ಸಾವಯವ ಗೊಬ್ಬರಗಳ ಬಳಕೆ, ಕೆರೆಗೆ ಹಾರ, ಆಪರೇಶನ್ ಸಿಂಧೂರ, ಚಂದ್ರಯಾಣ ಡಾವಣೆಯ ನೃತ್ಯ, ಮೇಕ್ ಇನ್ ಇಂಡಿಯ ಮತ್ತು ವಿಕಸಿತ ಭಾರತದ ಪರಿಕಲ್ಪನೆಯನ್ನು ವಿಶೇಷವಾಗಿ ಪ್ರಸ್ತುತ ಪಡಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷರಾದ ಸಂ. ಗು. ಸಜ್ಜನ, ಉಪಾಧ್ಯಕ್ಷ ಎಂ.ಎಂ, ಸಜ್ಜನ, ಜಂಟಿ ಕಾರ್ಯದರ್ಶಿ ಡಾ. ಆರ್, ಎಂ ಸಜ್ಜನ, ಖಜಾಂಚಿ ಆರ್, ಎನ್, ಸಜ್ಜನ, ನಿರ್ದೇಶಕರುಗಳಾದ ಎ. ಎಸ್. ಸಜ್ಜನ, ಎಸ್. ಎಸ್. ಸಜ್ಜನ್, ಎಂ. ಬಿ. ಸಜ್ಜನ್, ಎಸ್, ಬಿ, ಸಜ್ಜನ, ಆರ್, ಎಮ್, ಸಜ್ಜನ, ಸಿ. ಪಿ. ಸಜ್ಜನ ಹಾಗೂ ಮಾರ್ಗದರ್ಶಕರಾದ ಎಂ, ಬಿ ಸಜ್ಜನ(ಇಟಗಿ), ಎಲ್ ಆರ್ ಸಜ್ಜನ್, ಎಸ್ ಜೆ ಗೌಡರ, ಎಸ್ ಜಿ ರಾಜನಾಳ, ನಿತಿನ್ ರುಣವಾಲ್ ಹಾಗೂ ಶಾಲಾ ಆಡಳಿತ ಮಂಡಳಿಯ ಸದಸ್ಯರು, ಯೂತ್ ಕಮೀಟಿಯ ಪದಾಧಿಕಾರಿಗಳು, ಶಿಕ್ಷಕ-ಶಿಕ್ಷಕಿಯರು, ವಿದ್ಯಾರ್ಥಿಗಳು ಮತ್ತು ಪಾಲಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.