Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬದ್ಧತೆ ಇದ್ದಾಗ ಸುಸಜ್ಜಿತ ಸಮಾಜ ನಿರ್ಮಾಣ ಸಾಧ್ಯ
(ರಾಜ್ಯ ) ಜಿಲ್ಲೆ

ಬದ್ಧತೆ ಇದ್ದಾಗ ಸುಸಜ್ಜಿತ ಸಮಾಜ ನಿರ್ಮಾಣ ಸಾಧ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಾರ್ವಜನಿಕ ಕ್ಷೇತ್ರದಲ್ಲಿ ಬದ್ಧತೆ, ಕಾಳಜಿಯಿಂದ ಕೆಲಸ ಮಾಡಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ವಿಜಯಪುರದ ಲೋಣಿಯಲ್ಲಿ ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಜ್ಞಾನ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಶಿಕ್ಷಣ, ಕುಡಿಯುವ ನೀರು, ಆಸ್ಪತ್ರೆಯಂತಹ ವಿಷಯದಲ್ಲಿ ರಾಜಕಾರಣ ಮಾಡದಿದ್ದರೆ ಸುಸಜ್ಜಿತ ಸಮಾಜ ಸಾಧ್ಯ. ಹಿಂದಿನವರು ನಿಸ್ವಾರ್ಥ ಮನೋಭಾವದಿಂದ ಸಂಸ್ಥೆಗಳನ್ನು ಕಟ್ಟಿದ್ದಾರೆ ಎಂದು ಸಚಿವರು ಪ್ರಶಂಸಿಸಿದರು.
ಶಿಕ್ಷಣಕ್ಕೆ ನಮ್ಮ ಜೀವನದಲ್ಲಿ ಎಲ್ಲಿಲ್ಲದ ಮಹತ್ವವಿದೆ.
ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆನ್ನುವ ಕನಸು ಬಡವ, ಶ್ರೀಮಂತ ಭೇದವಿಲ್ಲದೆ ಎಲ್ಲರಲ್ಲೂ ಇರುತ್ತದೆ. ವಿದ್ಯೆ ಇದ್ದಲ್ಲಿ ಕೀರ್ತಿ ಮತ್ತು ಸಂಪತ್ತು ಇರುತ್ತದೆ. ರಾಜ್ಯದ ಭವಿಷ್ಯ, ಮಕ್ಕಳ ಭವಿಷ್ಯ, ದೇಶದ ಭವಿಷ್ಯಕ್ಕಾಗಿ ಶಿಕ್ಷಣ ಕಟ್ಟಿದ ಮಹನೀಯರ ಕಾರ್ಯ ಶ್ಲಾಘನೀಯ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎನ್ನುವಂತೆ ಬದ್ಧತೆ, ಸಾಮಾಜಿಕ ಕಾಳಜಿಯಿಂದ
27ನೇ ವಯಸ್ಸಿಗೆ ಶಿಕ್ಷಣ ಸಂಸ್ಥೆ ಕಟ್ಟಿದ ಬಿ.ಎಂ.ಕೋರೆ ಅವರು ಸಮಾಜಕ್ಕೆ ಆದರ್ಶ ಎಂದರು.
ಮಹಿಳೆಯರ ಸ್ವಾವಲಂಬನೆಗಾಗಿ ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಸಾಕಷ್ಟು ವಿರೋಧಗಳ ಮಧ್ಯೆಯೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಮಹಿಳೆಯರಿಗೆ ಏನಾದರೂ ಸಹಾಯ ಮಾಡಬೇಕೆಂದು ಗೃಹಲಕ್ಷ್ಮಿ ಯೋಜನೆ ಜೊತೆಗೆ ಗೃಹಲಕ್ಷ್ಮಿ ಬ್ಯಾಂಕ್ ಸ್ಥಾಪನೆ ಮಾಡಿದ್ದೇವೆ. ಬ್ಯಾಂಕಿನ ಸದಸ್ಯರಾಗಿ ಪ್ರಯೋಜನ ಪಡೆದುಕೊಳ್ಳಿ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಪಾಲಕರ ಕನಸು ನನಸು ಮಾಡುವ ಜವಾಬ್ದಾರಿ ಮಕ್ಕಳದ್ದು ಎಂದ ಸಚಿವರು, ಮಕ್ಕಳ ಭವಿಷ್ಯಕ್ಕಾಗಿ ನಮ್ಮ ಕ್ಷೇತ್ರದಲ್ಲಿ ದೊಡ್ಡ ಹೆಜ್ಜೆ ಇಡಲಾಗುತ್ತಿದೆ. ಡಿಜಿಟಲ್ ಡೆಟಾಕ್ಸ್ ಯೋಜನೆಯಡಿ ಕ್ಷೇತ್ರದಲ್ಲಿ ರಾತ್ರಿ 7 ರಿಂದ 9 ಗಂಟೆಯವರೆಗೆ ಎಲ್ಲರೂ ಮೊಬೈಲ್, ಟಿವಿ ಬಂದ್ ಮಾಡಿ ಮಕ್ಕಳ ಓದಿನೆಡೆಗೆ ಗಮನ ನೀಡುವಂತೆ ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಬೀದರ್ ನ ಸಿದ್ದಾರೂಢ ಆಶ್ರಮದ ಶ್ರೀ ಶಿವಕುಮಾರ ಸ್ವಾಮಿಗಳು, ಆಳೂರು ಸಿದ್ಧಾರೂಢ ಆಶ್ರಮದ ಶ್ರೀ ಶಂಕರಾನಂದ ಮಹಾಸ್ವಾಮಿಗಳು, ಸಚಿವರಾದ ಶಿವಾನಂದ ಪಾಟೀಲ, ಶಾಸಕರಾದ ವಿಠ್ಠಲ ಕಟಕದೊಂಡ, ಇಂಡಿ ಶಾಸಕರಾದ ಯಶವಂತಗೌಡ ಪಾಟೀಲ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ ಶಹಾಪುರ, ಡಾ. ವಿಜಯಾ ಕೋರಿಶೆಟ್ಟಿ, ಕುಲಪತಿಗಳು ಅಕ್ಕಮಹಾದೇವಿ ವಿಶ್ವವಿದ್ಯಾಲಯ, ವಿಜಯಪುರ, ವಿ.ಸಿ.ನಾಗಠಾಣ, ಜಿಲ್ಲಾಧ್ಯಕ್ಷರು ವೀರಶೈವ ಮಹಾಸಭಾ ವಿಜಯಪುರ, ಬಿ.ಎಂ.ಕೋರೆ, ಸಿದ್ಧೇಶ್ವರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು, ಡಾ.ಎಂ.ಎಸ್.ಮದಬಾವಿ, ಡಾ.ವಿ.ಡಿ.ಐಹೊಳ್ಳಿ, ಡಾ.ಎಸ್.ಕೆ.ಕೊಪ್ಪ, ಡಾ.ಸಂಗಮೇಶ ಮೇತ್ರಿ, ಹಾಸಂಪೀರ ವಾಲೀಕಾರ, ಜಂಬೂನಾಥ ಕಂಚ್ಯಾಣಿ, ಡಾ.ಮಲ್ಲಿಕಾರ್ಜುನ ಉಟಗಿ, ಪಂಚಪ್ಪ ಕಲಬುರ್ಗಿ, ವಿ.ಡಿ.ಕಲ್ಯಾಣಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

​

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.