ವಿಜಯಪುರ: ಕೆಎಸ್ಕ್ಯುಎಎಸಿ ವತಿಯಿಂದ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿವೇತನ ಎನ್ಎಂಎಂಎಸ್ ಪರೀಕ್ಷೆಯು ಡಿ.೧೭ರಂದು ನಡೆಯಲಿದ್ದು, ಈ ಪರೀಕ್ಷೆಗೆ ನೊಂದಾಯಿಸಲು ಶಾಲಾ ಲಾಗಿನ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ೮ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಮೂಲಕ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಮಾಧ್ಯಮಿಕ ಹಂತದಲ್ಲಿ ಶಾಲೆಯಿಂದ ಹೊರಗುಳಿಯುವಂತೆ ತಡೆಯುವುದು ಹಾಗೂ ವಿದ್ಯಾಬ್ಯಾಸದ ಮುಂದವರಿಕೆಗೆ ಪ್ರೇರೆಪಿಸುವುದು ಈ ಯೋಜನೆ ಉದ್ದೇಶವಾಗಿದೆ.
ಆಸಕ್ತ ವಿದ್ಯಾರ್ಥಿಗಳು ಶಾಲೆಯ ಮುಖ್ಯ ಶಿಕ್ಷಕರು-ಪ್ರಾಂಶುಪಾಲಕರ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ದಿನಾಂಕ : ೧೭-೧೦-೨೦೨೩ ಕೊನೆಯ ದಿನಾಂಕವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಶ್ರೀಮತಿ ಎ.ಪಿ.ಚವ್ಹಾಣ ನೋಡಲ್ ಅಧಿಕಾರಿಗಳು ಮೊ: ೯೪೪೮೬೪೫೦೬೬ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
