Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ

ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಣ್ಮರೆಯಾಗುತ್ತಿರುವ ಕಲೆ ಸಾಹಿತ್ಯ ಉಳಿಸಿ-ಬೆಳೆಸಿ :ಜೋಶಿ
(ರಾಜ್ಯ ) ಜಿಲ್ಲೆ

ಕಣ್ಮರೆಯಾಗುತ್ತಿರುವ ಕಲೆ ಸಾಹಿತ್ಯ ಉಳಿಸಿ-ಬೆಳೆಸಿ :ಜೋಶಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ, ಆದ್ಯ ವಚನಕಾರರು, ಸತ್ಯ ಶರಣರು, ದಾಸ ಶ್ರೇಷ್ಠರು, ಸೂಫಿ ಸಂತರು, ತತ್ವಪದಕಾರರು, ದಾರ್ಶನಿಕರು, ಹಾಗೂ ಜನಪದರು ಈ ಮಣ್ಣಿನ ಕಣ ಕಣದಲ್ಲಿಯೂ ಕಂಗೊಳಿಸುತ್ತಿದ್ದಾರೆ ಎಂದು ಹಿರಿಯ ಸಾಹಿತಿ ಹಾಗೂ ನಿವೃತ್ತ ಶಿಕ್ಷಕ, ಪ್ರಹ್ಲಾದಚಾರ್ಯ ಜೋಶಿ ಹೇಳಿದರು.
ಪಟ್ಟಣದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ರವಿವಾರ ಸಂಜೆ ವಲಯ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ‘2024-25 ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿ’ ಪ್ರಧಾನ ಸಮಾರಂಭದಲ್ಲಿ ವರ್ಷದ ವ್ಯಕ್ತಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು ಮಾಹಿತಿ ತಂತ್ರಜ್ಞಾನ ಬೆಳೆದಂತೆ ಸಾಹಿತ್ಯ, ಕಲೆ, ಸಂಗೀತ, ನೃತ್ಯ, ನಾಟಕ, ಬಯಲಾಟ, ಡೊಳ್ಳು ಕುಣಿತ ಮತ್ತು ವೀರಗಾಸೆ, ಹಂತಿ ಪದಗಳು, ಜನಪದ ಸಂಸ್ಕೃತಿ ಕಣ್ಮರೆಯಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಅವರು ಯುವಪೀಳಿಗೆ ಹಾಗೂ ಸಾಹಿತ್ಯ ಪರಿಷತ್ತು ಮುಂದಿನ ಜನಾಂಗಕ್ಕೆ ಪರಿಚಯಿಸುವ ಮೂಲಕ ಕವಿ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಮುಂದುವರಿಸಿಕೊಂಡು ಬರುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದವರು, ಎಲೆಮರೆಯ ಕಾಯಿಯಂತೆ ಇರುವ ನನ್ನನು ಗುರುತಿಸಿ ‘ವರ್ಷದ ವ್ಯಕ್ತಿ ಪ್ರಶಸ್ತಿ’ ನೀಡಿ ಗೌರವಿಸಿದ್ದು ನನಗೆ ಅತೀವ ಸಂತಸ ತಂದಿದೆ. ತಮ್ಮೆಲ್ಲರ ಪ್ರೀತಿ ಅಭಿಮಾನ ಹಾರೈಕೆ ಹೀಗೆ ಇರಲಿ ಎಂದು ಆಶಿಸಿದರು.
ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ವಾಮನರಾವ್ ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ವಾಮನರಾವ್ ದೇಶಪಾಂಡೆ ಪ್ರಶಸ್ತಿ ಪುರಸ್ಕಾರ ಬಿರುದುಗಳು ಮೌಲ್ಯ ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ವಲಯ ಕನ್ನಡ ಸಾಹಿತ್ಯ ಪರಿಷತ್ತು ಸೂಕ್ತ ವ್ಯಕ್ತಿಯನ್ನು ಗುರುತಿಸಿರುವುದು ಶ್ಲಾಘನೀಯ, ಹಿರಿಯರ ಮಾರ್ಗದರ್ಶನ ಪಡೆದು ಸಾಹಿತಿಗಳು, ಸಂಶೋಧಕರು ಇಲ್ಲಿಯ ಐತಿಹಾಸಿಕ ಸ್ಥಳಗಳು ಮೇಲೆ ಬೆಳಕು ಚೆಲ್ಲುವ ಕಾರ್ಯಕ್ಕೆ ಮುಂದಾಗಿಲಿ ಎಂದರು.
ವಲಯ ಕಸಾಪ ಅಧ್ಯಕ್ಷ ಮಡಿವಾಳಪ್ಪಗೌಡ ಪಾಟೀಲ ಹೆಗ್ಗನದೊಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಮುಖರಾದ ಚೆನ್ನಯ್ಯ ಸ್ವಾಮಿ ಚಿಕ್ಕಮಠ, ಪುರಸಭೆ ಸದಸ್ಯ ಸುಧಾಕರರಡ್ಡಿ ಡಿಗ್ಗಾವಿ, ಹಿರಿಯ ಪತ್ರಕರ್ತ ಸಂಜೀವರಾವ್ ಕುಲ್ಕರ್ಣಿ, ನಿವೃತ್ತ ಉಪನ್ಯಾಸಕ ನರಸಿಂಹರಾವ್ ಕುಲ್ಕರ್ಣಿ, ಟಿ ಜಿ ಜೋಷಿ, ರಾಮನಗೌಡ ಪೋಲೀಸ್ ಪಾಟೀಲ್, ನಿಂಗನಗೌಡ ದೇಸಾಯಿ, ನಾಗರತ್ನ ಓಂಕಾರ, ಪಾರ್ವತಿ ಬುದೂರು, ಬಿ ಗುಡಿ ಕಸಾಪ ಅಧ್ಯಕ್ಷ ಶರಣಬಸವ ಸೈದಾಪುರ ಸೇರಿದಂತೆ ಅನೇಕರು ಮಾತನಾಡಿ ಶುಭಹಾರೈಸಿದರು.
ಹಳ್ಳೇರಾವ್ ಕುಲ್ಕರ್ಣಿ ಪ್ರಾಸ್ತಾವಿಕ ಮಾತನಾಡಿದರು, ಬಂದೇನವಾಜ್ ನಾಲತವಾಡ ಸ್ವಾಗತಿಸಿದರು, ಡಾ ಯಂಕನಗೌಡ ಪಾಟೀಲ ನಿರೂಪಿಸಿದರು, ವಿಜಯಾಚಾರ್ಯ ಪುರೋಹಿತ ವಂದಿಸಿದರು. ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ

ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ

ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು :ಡಾ.ಭುವನೇಶ್ವರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು :ಡಾ.ಭುವನೇಶ್ವರಿ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಹೋಟೆಲ್ ಗೆ ಬೆಂಕಿ! :ಅಪಾರ ಹಾನಿ
    In (ರಾಜ್ಯ ) ಜಿಲ್ಲೆ
  • ಸನಾತನ ಹಿಂದೂ ಧರ್ಮ ವಿಶ್ವದ ಶ್ರೇಷ್ಠ ಧರ್ಮ :ದಾಮೋದರ
    In (ರಾಜ್ಯ ) ಜಿಲ್ಲೆ
  • ಬಿಸಿಲಲ್ಲಿ ಪ್ರಾಣಿ-ಪಕ್ಷಿಗಳ ದಾಹ ತಣಿಸುತ್ತಿರುವ ಪಟೇಲ್
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ನೆಮ್ಮದಿ :ಗಣಾಚಾರಿ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಮಾದಿಗ ಸಮುದಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.