ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದಲ್ಲಿ ಸ್ಪೀಡ್ ಲಿಮಿಟ್ ಅಳವಡಿಸುವಂತೆ ವಿವೇಕ ಬ್ರಿಗೇಡ್ ಸಂಘಟನೆಯ ಪದಾಧಿಕಾರಿಗಳು ಸೋಮವಾರ ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಅವರಿಗೆ ಮನವಿ ಸಲ್ಲಿಸಿದರು.
ಅವರು ಸಲ್ಲಿಸಿದ ಮನವಿಯಲ್ಲಿ ಪಟ್ಟಣದಲ್ಲಿ ಜನಸಂದಣಿ ಮತ್ತು ವಾಹನಗಳ ಸಂಚಾರವು ಕೂಡ ಹೆಚ್ಚಾಗಿದೆ. ವೃದ್ಧರು, ಮಕ್ಕಳು ನಡೆದಾಡುವ ಸ್ಥಳಗಳಲ್ಲಿ ವಾಹನಗಳು ಅತಿ ವೇಗವಾಗಿ ಸಂಚರಿಸುತ್ತಿವೆ. ಇದರಿಂದಾಗಿ ಕೆಲವೊಂದು ಅಪಘಾತಗಳು ಆಗುತ್ತಿವೆ. ಪಟ್ಟಣ ವ್ಯಾಪ್ತಿಯಲ್ಲಿ ಬರುವ ತಹಸೀಲ್ದಾರ್ ಕಚೇರಿಯಿಂದ ವಿಜಯಪುರ ರಸ್ತೆಯ ಬಸವೇಶ್ವರ ಮಹಾವಿದ್ಯಾಲಯದವರೆಗೆ ಮತ್ತು ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ವಾಹನಗಳ ಚಾಲನೆ ಮಿತಿ 40 ಕಿ.ಮೀ. ಗಂಟೆಗೆ ಸ್ಪೀಡ್ ಲಿಮಿಟ್ ಅಳವಡಿಸಬೇಕು. ಜನ ದಟ್ಟಣೆಯ ಪ್ರದೇಶವಾದ ಬಸವೇಶ್ವರ ದೇವಾಲಯ ಎದುರಿಗೆ ಮತ್ತು ಬಸ್ ನಿಲ್ದಾಣದ ಎದುರಿಗೆ ಹಾಗೂಅಂಬೇಡ್ಕರ್ ವೃತ್ತ, ಸರ್ಕಾರಿ ಆಸ್ಪತ್ರೆ, ಅರಳಿಕಟ್ಟಿ ಮತ್ತು ಬಸವ ಭವನ ಹತ್ತಿರ ಜೀಬ್ರಾ ಕ್ರಾಸ್ ಗಳನ್ನು ಹಾಕಿಸಿ ಅಪಘಾತವನ್ನು ತಡೆಗಟ್ಟಬೇಕೆಂದು ವಿನಂತಿಸಲಾಗಿದೆ.
ಈ ಸಂದರ್ಭದಲ್ಲಿ ವಿವೇಕ್ ಬ್ರಿಗೇಡ್ ಸಂಘಟನೆಯ ವಿನುತ ಕಲ್ಲೂರ, ಶಂಕರ ಬೈಕೋಳ, ರವಿ ಚಿಕ್ಕೊಂಡ,ಶಶಿಕಾಂತ ಸ್ಥಾವರಮಠ,ಪ್ರಜ್ವಲ ಕಾರಕೂನ, ಗಂಗಾಧರ ಅರಿಯಾ, ದಯಾನಂದ ಸಾರವಾಡ ಇದ್ದರು.

