Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ

ಜ.೧೯ರಿಂದ ಪುಣ್ಯಸ್ಮರಣೋತ್ಸವ ವಿವಿಧ ಕಾರ್ಯಕ್ರಮಗಳು

ಸಪ್ತ ಶಕ್ತಿಸಂಗಮ ಮಹಿಳೆಯರನ್ನು ಜಾಗ್ರತಗೊಳಿಸುವ ಪ್ರಯತ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ಹೂ-ಹಣ್ಣು ತರಕಾರಿಯಲ್ಲಿ ಅರಳಿದ ಕಲಾಕೃತಿಗಳು
(ರಾಜ್ಯ ) ಜಿಲ್ಲೆ

ವಿವಿಧ ಹೂ-ಹಣ್ಣು ತರಕಾರಿಯಲ್ಲಿ ಅರಳಿದ ಕಲಾಕೃತಿಗಳು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶಾಸಕ ಯತ್ನಾಳ ಅವರಿಂದ ಫಲಪುಷ್ಪ ಪ್ರದರ್ಶನ-ತೋಟಗಾರಿಕೆ ಅಭಿಯಾನ ಉದ್ಘಾಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಹಾಗೂ ಜಿಲ್ಲಾ ಹಾಪ್‌ಕಾಮ್ಸ್ ಇವರ ಸಹಯೋಗದೊಂದಿಗೆ ಇದೇ ಜನವರಿ ೧೩ರಿಂದ ೧೫ರವರೆಗೆ ನಗರದ ಸ್ಟೇಶನ ರಸ್ತೆಯಲ್ಲಿರುವ ಬಸವವನ ಆವರಣದಲ್ಲಿ ಹಮ್ಮಿಕೊಂಡ ಫಲಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನಕ್ಕೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಿ, ಎಲ್ಲ ಮಳಿಗೆಗಳನ್ನು ವೀಕ್ಷಣೆ ಮಾಡಿದರು.
ಫಲಪುಸ್ಪ ಪ್ರದರ್ಶನ ನೋಡುಗರ ಕಣ್ಮನ ಸೆಳೆಯುತ್ತಿವೆ. ವಿವಿಧ ಹೂ-ಹಣ್ಣು ಹಾಗೂ ತರಕಾರಿಗಳಿಂದ ನಿರ್ಮಿಸಲಾದ ಅಪರೂಪದ ಕಲಾಕೃತಿಗಳು ಜನಾಕರ್ಷಣೆಯವಾಗಿವೆ. ಒಂದಕ್ಕಿಂತ ಒಂದು ವಿಭಿನ್ನ ಆಲೋಚನೆ, ಸೃಜನಶೀಲತೆ ಹಾಗೂ ನೈಸರ್ಗಿಕ ಸೌಂದರ್ಯವನ್ನು ಸೃಷ್ಟಿಸುವ ಸನ್ನಿವೇಶ ಈ ಪ್ರದರ್ಶನದಲ್ಲಿ ವೀಕ್ಷಿಸಬಹುದಾಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ಪಡೆಯುತ್ತಿದೆ.
ಪ್ರದರ್ಶನದಲ್ಲಿ ಹೂವಿನಲ್ಲಿ ಅರಳಿದ ಗೋಲಗುಮ್ಮಟ, ಗಿಡದಲ್ಲಿ ಕುಳಿತ ನಾಟ್ಯ ಮಯೂರಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ಹೂವಿನಲ್ಲಿ ಮೂಡಿಬಂದ ಡಾಲ್ಫಿನ್, ಪುಷ್ಪ ಮಾರಾಟಕ್ಕೆ ಬಂದ ಪುಷ್ಪಲತಾ ಚಿತ್ರ, ನೀರಿನಿಂದ ಹೊರಬಂದ ಹಂಸ ಸೇರಿದಂತೆ ಮುಂತಾದ ಕಲಾಕೃತಿಗಳು ಗಮನ ಸೆಳೆಯುತ್ತಿವೆ.
ಜಿಲ್ಲೆಯ ಹೆಮ್ಮೆಯನ್ನು ಹೆಚ್ಚಿಸಿದ ಭೌಗೋಳಿಕ ಮಾನ್ಯತೆ ಪಡೆದ ಇಂಡಿ ಲಿಂಬೆ, ವಿವಿಧ ಬಗೆಯ ಹೂಗಳಿಂದ ನಿರ್ಮಾಣವಾದ ಕಲಾ ಕೃತಿಗಳು, ಆರೋಗ್ಯ ಸಂದೇಶವನ್ನು ಸಾರುವ ಹಣ್ಣುಗಳ ಕಲಾಕೃತಿ, ತರಕಾರಿಯಲ್ಲಿ ಸೃಷ್ಟಿಸಿದ ಮಹಾಪುರುಷರ ಆಕೃತಿಗಳನ್ನು ಪ್ರದರ್ಶನದಲ್ಲಿ ಕಾಣಬಹುದಾಗಿದೆ.
ಸಿಂಪಿಯಲ್ಲಿ ಅರಳಿದ ಹಣ್ಣು, ಹೂವಿನಲ್ಲಿ ಅರಳಿದ ಅಳಿಲು, ಹಸಿ ಈರುಳ್ಳಿಯಲ್ಲಿ ಉದ್ಭವಿಸಿದ ತೋಟದ ಮನೆ, ಕಲಾಕೃತಿಗಳು ಕಲಾವಿದರ ವೈವಿಧ್ಯಮಯ ಕಲ್ಪನೆಗೆ ಸಾಕ್ಷಿಕರಿಸಿವೆ. ಧಾನ್ಯಬೀಜಗಳಿಂದ ನಿರ್ಮಿಸಿದ ಕಲಾ ಕೃತಿಗಳಲ್ಲಿ ಸಿರಿಧಾನ್ಯದಲ್ಲಿ ಮೂಡಿಬಂದ ಸ್ವಾಮಿವಿವೇಕಾನಂದರು, ರಾಜಗಿರಿ ಬೀಜಗಳಿಂದ ಮೂಡಿಬಂದ ಜಾಂಬವಂತ ಆಕರ್ಷಣೀಯವಾಗಿವೆ.
ಕುಟುಂಬ ಸಮೇತರಾಗಿ ಪ್ರದರ್ಶನ ವೀಕ್ಷಣೆಗೆ ಬಂದವರು ಸೆಲ್ಪಿ ತೆಗೆದುಕೊಂಡು ಆನಂದಿಸಬಹುದಾಗಿದೆ. ಮನರಂಜನೆ ಮತ್ತು ನಾವಿನ್ಯತೆಯನ್ನು ಮೇಳೈಸಿದಂತೆ ಪ್ರದರ್ಶನಕ್ಕೆ ಆಗಮಿಸಿದವರಿಗೆ ಜೋಡಿ ಸೆಲ್ಫಿ ಪಾಯಿಂಟ್, ಪಕ್ಷಿ ಸೆಲ್ಫಿ ಫಾಯಿಂಟ್‌ಗಳನ್ನು ಈ ಪ್ರದರ್ಶನದಲ್ಲಿ ರೂಪಿಸಲಾಗಿದೆ. ಒಟ್ಟಾರೆ ಈ ಪ್ರದರ್ಶನದಲ್ಲಿ ಪ್ರಕೃತಿ, ಕಲೆ, ಆರೋಗ್ಯ, ಸಾಮಾಜಿಕ ಸಂದೇಶ ಸೇರಿದಂತೆ ಎಲ್ಲವನ್ನು ಒಂದೂಗುಡಿಸಿ ವಿಜಯಪುರದ ಸಾಂಸ್ಕೃತಿಕ ವೈಭವಕ್ಕೆ ಹೊಸ ಆಯಾಮ ನೀಡಿದೆ.
ಶಾಲಾ ಮಕ್ಕಳಿಗೆ ತೋಟಗಾರಿಕೆ ವಿಷಯಗಳ ಕುರಿತು ಹೆಚ್ಚಿನ ಅಧ್ಯಯನಕ್ಕಾಗಿ ಜಿಲ್ಲೆಯ ರೈತರು ಬೆಳೆದ ಎಲ್ಲ ಬಗೆಯ ಹಣ್ಣು, ತರಕಾರಿ ಹಾಗೂ ಪುಷ್ಪಗಳ ಪ್ರದರ್ಶನ ಏರ್ಪಡಿಸಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ, ನಾಗರಿಕರಿಗೆ, ಗೃಹಿಣಿಯರಿಗೆ ಬೋನ್ಸಾಯ ಗಿಡಗಳ ಬೇಸಾಯ, ಅಣಬೆ ಬೇಸಾಯ, ಕೈತೋಟ, ಸಾವಯವ ಕೃಷಿಗೆ ಉತ್ತೇಜನ ನೀಡಲು ಪ್ರದರ್ಶಿಸಲಾಗಿದೆ. ರೈತರಿಗೆ ಮಾಹಿತಿ ನೀಡಲು ತೋಟಗಾರಿಕೆ ಸೇವಾ ಕೇಂದ್ರ, ವಿವಿಧ ಯಂತ್ರೋಪಕರಣ, ಹನಿ ನೀರಾವರಿ ಉಪಕರಣಗಳು ಹಾಗೂ ಇತರ ಪರಿಕರ ಮಳಿಗೆಗಳನ್ನು ಸ್ಥಾಪಿಸಲಾಗಿದೆ.
ಜಿಲ್ಲೆಯ ತೋಟಗಾರಿಕೆ ಬೆಳೆಗಾರರಿಗೆ ದ್ರಾಕ್ಷಿ, ದಾಳಿಂಬೆ ಮತ್ತು ಡ್ರ್ಯಾಗನ್ ಫ್ರೂಟ್ ಬೆಳೆಗಳಲ್ಲಿ ಹವಾಮಾನ ಅಧಾರಿತ ಸಮಗ್ರ ಬೇಸಾಯ ಪದ್ಧತಿ, ಜೇನು ಸಾಕಾಣಿಕೆ ತರಬೇತಿ ಹಾಗೂ ತಾಳೆ ಬೆಳೆಯಲ್ಲಿ ಸುಧಾರಿತ ಬೇಸಾಯ ಕ್ರಮಗಳ ಕುರಿತು ಈ ಪ್ರದರ್ಶನದಲ್ಲಿ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ಈ ಪ್ರದರ್ಶನದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಸಂಕ್ರಾಂತಿ ಹಬ್ಬಕ್ಕೆ ಬೇಕಾಗುವ ಹಣ್ಣು ಹಂಪಲುಗಳನ್ನು ರೈತರಿಂದ ನೇರವಾಗಿ ಸಾರ್ವಜನಿಕರಿಗೆ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರತಿ ದಿನ ಸಂಜೆ ವಿವಿಧ ಕಲಾ ತಂಡ, ಶಾಲಾ ಕಾಲೇಜ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪ್ರತಿ ಬೆಳಿಗ್ಗೆ ೯-೩೦ ರಿಂದ ೮-೩೦ರವರೆಗೆ ಪ್ರದರ್ಶನ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಅಪರೂಪದ ಪ್ರದರ್ಶನದಲ್ಲಿ ಭಾಗವಹಿಸಿ ವೀಕ್ಷಣೆ ಮಾಡುವಂತೆ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರಾಹುಲ ಭಾವಿದೊಡ್ಡಿ ಮನವಿ ಮಾಡಿಕೊಂಡಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಬಿ.ಎಸ್.ಕವಲಗಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಸೇರಿದಂತೆ, ರೈತ ಮುಖಂಡರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ

ಜ.೧೯ರಿಂದ ಪುಣ್ಯಸ್ಮರಣೋತ್ಸವ ವಿವಿಧ ಕಾರ್ಯಕ್ರಮಗಳು

ಸಪ್ತ ಶಕ್ತಿಸಂಗಮ ಮಹಿಳೆಯರನ್ನು ಜಾಗ್ರತಗೊಳಿಸುವ ಪ್ರಯತ್ನ

ಚಿನ್ನದಂಗಡಿ ವರ್ತಕನ ಮೇಲೆ ಪೊಲೀಸರಿಂದ ವಿನಾಕಾರಣ ಹಲ್ಲೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ
    In (ರಾಜ್ಯ ) ಜಿಲ್ಲೆ
  • ಜ.೧೯ರಿಂದ ಪುಣ್ಯಸ್ಮರಣೋತ್ಸವ ವಿವಿಧ ಕಾರ್ಯಕ್ರಮಗಳು
    In (ರಾಜ್ಯ ) ಜಿಲ್ಲೆ
  • ಸಪ್ತ ಶಕ್ತಿಸಂಗಮ ಮಹಿಳೆಯರನ್ನು ಜಾಗ್ರತಗೊಳಿಸುವ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ಚಿನ್ನದಂಗಡಿ ವರ್ತಕನ ಮೇಲೆ ಪೊಲೀಸರಿಂದ ವಿನಾಕಾರಣ ಹಲ್ಲೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಾಂಪ್ರದಾಯಿಕ ರೀತಿಯಲ್ಲಿ ಸಂಕ್ರಾಂತಿ ಹಬ್ಬ ಆಚರಣೆ
    In (ರಾಜ್ಯ ) ಜಿಲ್ಲೆ
  • ಶರಣ ವಚನ ಸಾಹಿತ್ಯ ಮನುಕುಲಕ್ಕೆ ದಾರಿದೀಪ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಮಾದರಿಯ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು :ಶಾಂತಾ
    In (ರಾಜ್ಯ ) ಜಿಲ್ಲೆ
  • ರಾಜಕೀಯ ಜಾಗೃತಿ ಮೂಡಿಸಲು ‘ಬಸವ ಶಕ್ತಿ’ ಸಮಾವೇಶ
    In (ರಾಜ್ಯ ) ಜಿಲ್ಲೆ
  • ರೈತರ ಪಂಪ್ ಸೆಟ್ಟುಗಳಿಗೆ ಅಕ್ರಮ-ಸಕ್ರಮ ಯೋಜನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.