Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ

ಜ.೧೯ರಿಂದ ಪುಣ್ಯಸ್ಮರಣೋತ್ಸವ ವಿವಿಧ ಕಾರ್ಯಕ್ರಮಗಳು

ಸಪ್ತ ಶಕ್ತಿಸಂಗಮ ಮಹಿಳೆಯರನ್ನು ಜಾಗ್ರತಗೊಳಿಸುವ ಪ್ರಯತ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಂಬೆ ಬೆಳೆಗಾರರ ಸಮಸ್ಯೆಗಳ ಇತ್ಯರ್ಥಕ್ಕೆ ಆಗ್ರಹಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ನಿಂಬೆ ಬೆಳೆಗಾರರ ಸಮಸ್ಯೆಗಳ ಇತ್ಯರ್ಥಕ್ಕೆ ಆಗ್ರಹಿಸಿ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ನಿಂಬೆ ಬೆಳೆಗೆ ಉತ್ತಮ ಬೆಲೆಯ ಜೊತೆಗೆ ನಿಂಬೆಯಿಂದ ತಯಾರಾಗುವ ಉಪ ಉತ್ಪನ್ನಗಳ ಕಾರ್ಖಾನೆ ಸ್ಥಾಪನೆ ಸೇರಿದಂತೆ ನಿಂಬೆ ಬೆಳೆಗಾರರ ವಿವಿಧ ಸಮಸ್ಯೆಗೆ ಸರಕಾರ ಪರಿಹಾರ ದೊರಕಿಸಿ ಕೊಡುವಂತೆ ಒತ್ತಾಯಿಸಿ ನೂರಾರು ನಿಂಬೆ ಬೆಳೆಗಾರರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಒಂದು ಡಾಗ್ ನಿಂಬೆ ರಸ್ತೆಗೆ ಸುರುವಿ ಮಂಗಳವಾರ ಪ್ರತಿಭಟನೆ ನಡೆಸಿ ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾವಿ ಅವರಿಗೆ ಮನವಿ ಸಲ್ಲಿಸಿದರು.
ಒಂದು ಡಾಗ್ ನಿಂಬೆಗೆ ೨೫೦೦ ರೂ, ಬೆಂಬಲ ಬೆಲೆ ಘೋಷಣೆ ಮಾಡಬೇಕು, ನಿಂಬೆ ಅಭಿವೃದ್ಧಿ ಮಂಡಳಿಯಿಂದ ಖರೀದಿ ಕೇಂದ್ರ ಸ್ಥಾಪನೆ ಮಾಡಬೇಕು, ಇಂಡಿ ನಗರದಲ್ಲಿ ಕೋಲ್ಡ್ ಸ್ಟೋರೇಜ್ ಸ್ಥಾಪನೆ ಮಾಡಬೇಕು, ಬೇಸಿಗೆಯ ಸಂದರ್ಭದಲ್ಲಿ ನೀರಿನ ಕೊರತೆ ಅನುಭವಿಸುವ ನಿಂಬೆ ಬೆಳೆಗಾರ ರೈತರಿಗೆ ನೀರಿನ ವ್ಯವಸ್ಥೆ ಮಾಡಿಕೊಡಬೇಕು ಎನ್ನುವ ಪ್ರಮುಖ ಬೇಡಿಗೆಳನ್ನು ಈ ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿದ, ನಿಂಬೆ ಬೆಳೆಗಾರ ರೈತರು ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆಯ ಮೆರವಣಿಗೆ ಮಾಡಿ ಕೊನೆಗೆ ಇಂಡಿ ನಗರದ ಮಿನಿ ವಿಧಾನ ಸೌಧಕ್ಕೆ ತಲುಪಿದರು.
ಅಲ್ಲಿ ಸಭೆಯಾಗಿ ಮಾರ್ಪಟ್ಟು ಅನೇಕ ರೈತ ಮುಖಂಡರು ಮಾತನಾಡಿ ಸರಕಾರದ ಬಗ್ಗೆ, ದಲ್ಲಾಳಿಗಳ ಬಗ್ಗೆ, ರೈತ ನಿಂಬೆ ಬೆಳೆ ಸಂರಕ್ಷಣೆ ಮಾಡಿ ನಿಂಬೆ ಹರಿದು ಡಾಗ್ ತುಂಬುವವರೆಗಿನ ಕಷ್ಟದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.
ರೈತ ಸಂಘದ ಅಧ್ಯಕ್ಷ ಎಸ್.ಎಸ್.ಕೆಂಬೋಗಿ, ಎ.ಎಸ್.ಪಟೇಲ, ಕಾಸುಗೌಡ ಬಿರಾದಾರ, ಬಿ,ಡಿ. ಪಾಟೀಲ, ಶ್ರೀಶೈಲಗೌಡ ಪಾಟೀಲ, ಅನೀಲ ಜಮಾದಾರ, ಎಸ್.ಟಿ.ಪಾಟೀಲ, ಶಂಕರಗೌಡ ಪಾಟೀಲ, ಹಣಮಂತ್ರಾಯಗೌಡ ಪಾಟೀಲ, ಬಾಳು ಮುಳಜಿ ಮುಂತಾದ ಪ್ರಗತಿಪರ ರೈತರು ಮಾತನಾಡಿ, ನಿಂಬೆ ಬೆಳೆ ಬೆಳೆಸಬೇಕಾದರೆ ಕನಿಷ್ಟ ೫ ರಿಂದ ೬ ವರ್ಷ ಕಾಯಬೇಕು. ನಂತರವೇ ಫಲ ನೀಡುತ್ತದೆ. ೬ ವರ್ಷಗಳ ಕಾಲ ನಿಂಬೆ ಬೆಳೆಗಾರ ಬೆಳೆಸಿದ ನಿಂಬೆಗೆ ಕನಿಷ್ಟ ಬೆಂಬಲ ಬೆಲೆ ಸಿಕ್ಕಾಗ ಮಾತ್ರ ಆ ರೈತ ಉಳಿಯತ್ತಾನೆ.
ನಮ್ಮ, ನಿಂಬೆಗೆ ವಿದೇಶಿ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆಯಿದೆ. ಕಾರಣ ನಮ್ಮ ನಿಂಬೆಯನ್ನು ವಿದೇಶಿ ಮಾರುಕಟ್ಟೆಗೆ ಪರಿಚಯಿಸಬೇಕು. ನಮ್ಮ ನಗರದಲ್ಲಿಯೇ ರಾಜ್ಯ ನಿಂಬೆ ಬೆಳೆ ಅಭಿವೃದ್ಧಿ ಮಂಡಳಿ ಸ್ಥಾಪನೆಯಾಗಿದೆ. ಅದಕ್ಕೆ ಪೂರ್ಣ ಪ್ರಮಾಣದ ಸಿಬ್ಬಂದಿಗಳನ್ನು ಒದಗಿಸಿ, ಸಾಕಷ್ಟು ಅನುದಾನ ನೀಡಿ, ನಿಂಬೆ ಬೆಳೆಗಾರ ರೈತರಿಗೆ ನಿಂಬೆ ಬೆಳೆಯಲ್ಲಿ ಅಧುನಿಕ ಪದ್ದತಿಗಳನ್ನು ಅಳವಡಿಸಿಕೊಳ್ಳುವಂತೆ ತರಬೇತಿಗಳನ್ನು ಆಯೋಜಿಸಬೇಕು, ನಿಂಬೆ ಬೆಳೆಯಿಂದ ಬೈ ಪ್ರೊಡಕ್ಟ್ ಮಾಡಲು ಇಲ್ಲಿಯೇ ಬೃಹತ್ ಪ್ರಮಾಣದ ಕಾರ್ಖಾನೆ ಸಿದ್ದಪಡಿಸಬೇಕು ಎಂದು ಆಗ್ರಹಿಸಿದ ರೈತರು ಎಸಿ ಅವರಿಗೆ ಮನವಿ ಪತ್ರ ನೀಡಿದರು.
ಮನವಿ ಪತ್ರ ಸ್ವೀಕರಿಸಿದ ಎಸಿ ಚಿದಾನಂದ ಗುರುಸ್ವಾಮಿ ಮಾತನಾಡಿ, ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡುವದಾಗಿ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಅನೀಲಗೌಡ ಬಿರಾದಾರ, ಸೋಮು ನಿಂಬರಗಿಮಠ, ದೇವೇಂದ್ರ ಕುಂಬಾರ, ಯಮುನಾಜಿ ಸಾಳುಂಕೆ, ಯುವರಾಜಗೌಡ ಪಾಟೀಲ, ಅಕ್ತಾರ ಪಟೇಲ, ಎಸ್.ಪಿ.ಪಾಟೀಲ. ಸಿದ್ದಪ್ಪ ತಳವಾರ, ಮಹಾದೇವ ಗುಡ್ಡೊಡಗಿ, ನಾಗನಾಥ ಬಿರಾದಾರ, ಶಿವರಾಜ ಕೆಂಗನಾಳ, ಶಿವಶರಣ ಹಂಜಗಿ, ಅಯೂಬ ನಾಟೀಕಾರ, ರಾಘವೇಂದ್ರ ಕಾಪ್ಸೆ, ಡಾ. ರಮೇಶ ರಾಠೋಡ, ಸಿದ್ದು ಡಂಗಾ, ದೇವೇಂದ್ರ ಕುಂಬಾರ, ನಿಯಾಜ್ ಅಗರಖೇಡ, ಜಗನ್ನಾಥ ಇಂಡಿ, ಸುನೀಲಗೌಡ ಬಿರಾದಾರ, ಅಶೋಕ ಅಕಲಾದಿ, ಮಂಜು ದೇವರ, ಸೋಮು ನಿಂಬರಗಿಮಠ, ಮೈಬೂಬ ಬೇವನೂರ, ಅಪ್ಪು ಮಂಗಳೂರ, ಅದೃಶ್ಯಪ್ಪ ವಾಲಿ, ಸುಭಾಸ ಪಾಟೀಲ, ಲಕ್ಕಿ ಲಚ್ಯಾಣ, ಯಶವಂತ ಕಾಡೇಗೋಳ, ಸುದರ್ಶನ ಉಪಾಧ್ಯಯ, ಫಜಲು ಮುಲ್ಲಾ, ಅಂಬಣ್ಣ ಸುಣಗಾರ, ಪುಟ್ಟು ಮರಡಿ, ಜೆಟ್ಟೆಪ್ಪ ಸಾಲೋಟಗಿ, ಸಿದ್ದಪ್ಪ ಗುನ್ನಾಪೂರ, ಕೆಂಚಪ್ಪ ನಿಂಬಾಳ, ಬಾಬು ಮೇತ್ರಿ, ಈರಪ್ಪ ಮಾಳಿಂಗೆ, ಸಂಜು ಧಶವಂತ, ಬಾಳು ರಾಠೋಡ, ಶ್ರೀಶೈಲ ವಿಜಯಪೂರ, ಗಜಾನಂದ ಗಿಣ್ಣಿ ಸೇರಿದಂತೆ ಸುಮಾರು ಐನೂರಕ್ಕೂ ಹೆಚ್ಚು ರೈತರು ಪ್ರತಿಭೌಟನೆಯಲ್ಲಿ ಪಾಳ್ಗೊಂಡಿದ್ದರು.

“ಸರಕಾರ ಕೂಡಲೆ ನಿಂಬೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಬೇಕು. ನಿಂಬೆ ಅಭಿವೃಧ್ಧಿ ಮಂಡಳಿಗೆ ೧ ಸಾವಿರ ಕೋಟಿ ಅನುದಾನ ಒದಗಿಸಿ, ಅಭಿವೃಧ್ಧಿ ಮಂಡಳಿ ಮುಖಾಂತರ ರೈತರ ನೆರವಿಗೆ ಧಾವಿಸಬೇಕು.”

– ಕಾಸುಗೌಡ ಬಿರಾದಾರ
ರೈತ ಮುಖಂಡ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ

ಜ.೧೯ರಿಂದ ಪುಣ್ಯಸ್ಮರಣೋತ್ಸವ ವಿವಿಧ ಕಾರ್ಯಕ್ರಮಗಳು

ಸಪ್ತ ಶಕ್ತಿಸಂಗಮ ಮಹಿಳೆಯರನ್ನು ಜಾಗ್ರತಗೊಳಿಸುವ ಪ್ರಯತ್ನ

ಚಿನ್ನದಂಗಡಿ ವರ್ತಕನ ಮೇಲೆ ಪೊಲೀಸರಿಂದ ವಿನಾಕಾರಣ ಹಲ್ಲೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ
    In (ರಾಜ್ಯ ) ಜಿಲ್ಲೆ
  • ಜ.೧೯ರಿಂದ ಪುಣ್ಯಸ್ಮರಣೋತ್ಸವ ವಿವಿಧ ಕಾರ್ಯಕ್ರಮಗಳು
    In (ರಾಜ್ಯ ) ಜಿಲ್ಲೆ
  • ಸಪ್ತ ಶಕ್ತಿಸಂಗಮ ಮಹಿಳೆಯರನ್ನು ಜಾಗ್ರತಗೊಳಿಸುವ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ಚಿನ್ನದಂಗಡಿ ವರ್ತಕನ ಮೇಲೆ ಪೊಲೀಸರಿಂದ ವಿನಾಕಾರಣ ಹಲ್ಲೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಾಂಪ್ರದಾಯಿಕ ರೀತಿಯಲ್ಲಿ ಸಂಕ್ರಾಂತಿ ಹಬ್ಬ ಆಚರಣೆ
    In (ರಾಜ್ಯ ) ಜಿಲ್ಲೆ
  • ಶರಣ ವಚನ ಸಾಹಿತ್ಯ ಮನುಕುಲಕ್ಕೆ ದಾರಿದೀಪ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಮಾದರಿಯ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು :ಶಾಂತಾ
    In (ರಾಜ್ಯ ) ಜಿಲ್ಲೆ
  • ರಾಜಕೀಯ ಜಾಗೃತಿ ಮೂಡಿಸಲು ‘ಬಸವ ಶಕ್ತಿ’ ಸಮಾವೇಶ
    In (ರಾಜ್ಯ ) ಜಿಲ್ಲೆ
  • ರೈತರ ಪಂಪ್ ಸೆಟ್ಟುಗಳಿಗೆ ಅಕ್ರಮ-ಸಕ್ರಮ ಯೋಜನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.