Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಬಜೆಟ್: ರಾಷ್ಟ್ರೀಯ ಮೀನುಗಾರರ ಸಂಘ’ ಸ್ವಾಗತ

ಎತ್ತರ ನಿಯಂತ್ರಣ ಕಂಬ ಕುಸಿತ: ತಪ್ಪಿದ ಭಾರಿ ಅನಾಹುತ

ಅಭಿವೃದ್ಧಿಗೆ ಡಬಲ್ ಗ್ಯಾರಂಟಿ ಬಜೆಟ್ :ಡಾ.ಹಾದಿಮನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕ ವೃತ್ತಿ ನಿಸ್ವಾರ್ಥ ಸೇವೆ, ಸಮರ್ಪಣೆಯಿಂದಿರಲಿ :ಹಿರೇಮಠ
(ರಾಜ್ಯ ) ಜಿಲ್ಲೆ

ಶಿಕ್ಷಕ ವೃತ್ತಿ ನಿಸ್ವಾರ್ಥ ಸೇವೆ, ಸಮರ್ಪಣೆಯಿಂದಿರಲಿ :ಹಿರೇಮಠ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರಜ್ಞಾವಂತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ನಿಸ್ವಾರ್ಥತೆ, ಸಮರ್ಪಣೆ ಮತ್ತು ಸಂತೃಪ್ತಿ ಭಾವ ಅತಿ ಮುಖ್ಯ. ಎಲ್ಲ ಸೇವೆಗಳಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು. ವಿದ್ಯಾರ್ಥಿಗಳಲ್ಲಿರುವ ಸುಪ್ತ ಕಲೆ, ಪ್ರತಿಭೆಯನ್ನು ಗುರುತಿಸಿ, ಉತ್ತಮ ಶಿಕ್ಷಣ ನೀಡುತ್ತಾ, ಭಾವೀ ಭವ್ಯ ಭಾರತದ ಜವಾಬ್ದಾರಿಯುತ ನಾಗರೀಕರನ್ನಾಗಿ ರೂಪಿಸುವುದು ಅತಿ ಅಗತ್ಯವಾಗಿದೆ ಎಂದು ನಿವೃತ್ತ ಪ್ರಾಧ್ಯಾಪಕ ಎ.ಟಿ.ಹಿರೇಮಠ ಅವರು ಅಭಿಪ್ರಾಯಪಟ್ಟರು.
ನಗರದ ಅಥಣಿ ರಸ್ತೆಯ ಅಲ್-ಅಮೀನ ಆಸ್ಪತ್ರೆಯ ಎದುರಿಗೆ ಇರುವ ಸೇನಾ ನಗರದ ಆದಿಶಕ್ತಿ ದೇವಸ್ಥಾನದಲ್ಲಿ ಜರುಗಿದ ಶ್ರೀಮತಿ ಶಾರದಾ ಬಿರಾದಾರ ಪಾಟೀಲ ಶಿಕ್ಷಕಿಯರ ನಿವೃತ್ತಿ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಪಠ್ಯ ವಿಷಯ ಜ್ಞಾನ ನೀಡಿದರೆ ಸಾಲದು. ಅವರು ಸಮಾಜದಲ್ಲಿ ಗೌರವಯುತವಾದ ಬದುಕು ನಡೆಸಲು ಉತ್ತಮ ಸಂಸ್ಕೃತಿ-ಸಂಸ್ಕಾರ, ನೈತಿಕ -ಮಾನವೀಯ ಮೌಲ್ಯಗಳು, ರಾಷ್ಟçಪ್ರೇಮ ಮತ್ತು ರಾಷ್ಟ್ರೀಯ ಐಕ್ಯತೆಯ ಗುಣಗಳನ್ನು ಒಡಮೂಡಿಸಬೇಕಾಗಿದೆ. ಈ ಶಿಕ್ಷಕಿಯರು ತಮ್ಮ ಇಡೀ ವೈಯಕ್ತಿಕ ಬದುಕನ್ನು ತ್ಯಾಗ ಮಾಡಿ, ಸರ್ಕಾರಿ ಶಾಲೆಯ ಮಕ್ಕಳಿಗೆ ಜ್ಞಾನಧಾರೆ ಎರೆಯಲು ಶ್ರಮಿಸಿದ ಸಮಾಜಕ್ಕೆ ಮಾದರಿ ಶಿಕ್ಷಕಿಯಾಗಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಸ ಶೆಡಶ್ಯಾಳ ಮಾತನಾಡಿ, ನಿವೃತ್ತ ಹೊಂದಿದ ಈ ಪಾಟೀಲ ಮೇಡಂ ಅವರು ಸದಾ ಶಿಕ್ಷಕ-ವಿದ್ಯಾರ್ಥಿಗಳೊಂದಿಗೆ ಅವಿನಾವ ಸಂಬಂಧದೊಂದಿಗೆ ಅಪಾರ ಪ್ರೀತಿಗೆ ಪಾತ್ರರಾಗಿದ್ದರು ಎಂದರು.
ಇದೇ ಸಂದರ್ಭದಲ್ಲಿ ಅನಿಸಿಕೆ ವ್ಯಕ್ತಪಡಿಸಿದ ಪ್ರೊ. ಎಂ.ಎಸ್.ಖೊದ್ನಾಪೂರ ಅವರು, ನಮ್ಮ ಇಂದಿನ ಶೈಕ್ಷಣಿಕ ಸಾಧನೆಗೆ ಇಂತಹ ಸೇವೆಯೇ ಜೀವನದ ಉಸಿರು ನಂಬಿದ ಅದೇಷ್ಟೋ ಶಿಕ್ಷಕರ ಪ್ರಭಾವ, ಪ್ರೇರಣೆ ಮತ್ತು ಮಾರ್ಗದರ್ಶನ ನಮಗೆಲ್ಲ ದಾರಿದೀಪವಾಗಿದೆ. ಬಿರಾದಾರ ಮೇಡಂ ಆವರು ೧೯೮೭ ರಲ್ಲಿ ನಮಗೆ ಪ್ರಾಥಮಿಕ ಶಾಲೆಯಲ್ಲಿ ಹಾಕಿಕೊಟ್ಟ ಭದ್ರ ಬುನಾದಿ ಮತ್ತು ಉತ್ತಮ ಮೌಲ್ವಿಕ ವಿಚಾರಧಾರೆಗಳು ಇಂದಿಗೂ ಅವಿಸ್ಮರಣೀಯ ಎಂದರು.
ಕಾರ್ಯಕ್ರಮದಲ್ಲಿ ತೊರವಿ ಹಿರೇಮಠದ ಮಲ್ಲಿಕಾರ್ಜುನ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು.
ಈ ಸಮಾರಂಭದಲ್ಲಿ ನಿವೃತ್ತ ಶಿಕ್ಷಣ ಅಧಿಕಾರಿ ಶ್ರೀಮತಿ. ಆರ್.ಎಸ್.ಕೋಟ್ನಾಳ, ಶಿಕ್ಷಕಿ ಸುಖದೇವಿ ಅಲಬಾಳಮಠ, ಆದಿಶಕ್ತಿ ದೇವಸ್ಥಾನದ ಅಧ್ಯಕ್ಷ ಶ್ರೀ ಶರಣು ಸಬರದ ಇನ್ನಿತರರು ವೇದಿಕೆಯ ಮೇಲಿದ್ದರು.
ಈ ನಿವೃತ್ತಿ ಅಭಿನಂದನಾ ಸಮಾರಂಭದಲ್ಲಿ ಶ್ರೀ ಎಂ.ಎಸ್.ಭೂಸಗೊಂಡ, ಸುಧಾ ಹಂಚಿನಾಳಕರ, ಶಂಕರ ಹಾರಿವಾಳ, ಮಲ್ಲಪ್ಪ ಕುಂಬಾರ, ಎಸ್.ಎಸ್.ಮಾಳಿ, ವಿಜಯಪುರ ಗ್ರಾಮೀಣ ವಲಯದ ಪ್ರಾಥಮಿಕ ಶಾಲೆಯ ಶಿಕ್ಷಕ ವೃಂದ, ಶಿಕ್ಷಕ ಸಂಘದ ಪದಾಧಿಕಾರಿಗಳು, ಕನಮಡಿಯ ಬಿರಾದಾರ ಪಾಟೀಲ ಕುಟುಂಬ ವರ್ಗ ಮತ್ತು ಸೇನಾ ನಗರದ ಹಿರಿಯರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯ ಬಜೆಟ್: ರಾಷ್ಟ್ರೀಯ ಮೀನುಗಾರರ ಸಂಘ’ ಸ್ವಾಗತ

ಎತ್ತರ ನಿಯಂತ್ರಣ ಕಂಬ ಕುಸಿತ: ತಪ್ಪಿದ ಭಾರಿ ಅನಾಹುತ

ಅಭಿವೃದ್ಧಿಗೆ ಡಬಲ್ ಗ್ಯಾರಂಟಿ ಬಜೆಟ್ :ಡಾ.ಹಾದಿಮನಿ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪಾಲಕರ ಪಾತ್ರವೂ ಮುಖ್ಯ :ಗುಂದಗಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯ ಬಜೆಟ್: ರಾಷ್ಟ್ರೀಯ ಮೀನುಗಾರರ ಸಂಘ’ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಎತ್ತರ ನಿಯಂತ್ರಣ ಕಂಬ ಕುಸಿತ: ತಪ್ಪಿದ ಭಾರಿ ಅನಾಹುತ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಗೆ ಡಬಲ್ ಗ್ಯಾರಂಟಿ ಬಜೆಟ್ :ಡಾ.ಹಾದಿಮನಿ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪಾಲಕರ ಪಾತ್ರವೂ ಮುಖ್ಯ :ಗುಂದಗಿ
    In (ರಾಜ್ಯ ) ಜಿಲ್ಲೆ
  • ಕೇಂದ್ರದಿಂದ ಅಸಹಕಾರವಿದ್ದರೂ ವಿತ್ತೀಯ ಶಿಸ್ತು ಪಾಲನೆ :ಸಿಎಂ
    In (ರಾಜ್ಯ ) ಜಿಲ್ಲೆ
  • ವಿಕಲಚೇತನ ಹಾಗೂ ಗರ್ಭಿಣಿಯರಿಗೆ ಜನಗಣತಿಯಿಂದ ವಿನಾಯಿತಿ ನೀಡಿ
    In (ರಾಜ್ಯ ) ಜಿಲ್ಲೆ
  • ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು
    In ವಿಶೇಷ ಲೇಖನ
  • ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ
    In (ರಾಜ್ಯ ) ಜಿಲ್ಲೆ
  • ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.