Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ

ಜ.೧೯ರಿಂದ ಪುಣ್ಯಸ್ಮರಣೋತ್ಸವ ವಿವಿಧ ಕಾರ್ಯಕ್ರಮಗಳು

ಸಪ್ತ ಶಕ್ತಿಸಂಗಮ ಮಹಿಳೆಯರನ್ನು ಜಾಗ್ರತಗೊಳಿಸುವ ಪ್ರಯತ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವಕ್ಕೆ ಮೂಡಿದ್ದ ಗೊಂದಲಕ್ಕೆ ತೆರೆ
(ರಾಜ್ಯ ) ಜಿಲ್ಲೆ

ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವಕ್ಕೆ ಮೂಡಿದ್ದ ಗೊಂದಲಕ್ಕೆ ತೆರೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ | ಜ.18 ರಿಂದ ಜ.22 ರವರೆಗೆ ಜಾನುವಾರ ಜಾತ್ರೆ | ಒಮ್ಮತದ ನಿರ್ಣಯದಿಂದ ಆತಂಕ ದೂರ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಎಪಿಎಮ್‌ಸಿ, ಪಟ್ಟಣ ಪಂಚಾಯತ್ ಹಾಗೂ ಶ್ರೀ ಸಂಗಮೇಶ್ವರ ಸಂಸ್ಥೆಯ ದೇವರ ಜಾತ್ರಾ ಸಮಿತಿಯವರ ನಡೆದ ಸಭೆ ಪಟ್ಟಣದ ಆರಾಧ್ಯ ದೈವ ಶ್ರೀ ಸಂಗಮೇಶ್ವರ ದೇವರ ಜಾತ್ರಾ ಮಹೋತ್ಸವದ ಆಯೋಜನೆ ಕುರಿತು ಕಳೆದ ಕೆಲವು ದಿನಗಳಿಂದ ವಿವಿಧ ವಲಯಗಳಲ್ಲಿ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿ ಗೊಂದಲ ಉಂಟಾಗಿತ್ತು. ಇದರಿಂದ ಭಕ್ತರು ಹಾಗೂ ಸಾರ್ವಜನಿಕರಲ್ಲಿ ಆತಂಕವೂ ಕಾಣಿಸಿಕೊಂಡಿತ್ತು.
ಈ ಹಿನ್ನೆಲೆ ಶ್ರೀ ಸಂಗಮೇಶ್ವರ ಸಂಸ್ಥೆಯ ದೇವರ ಜಾತ್ರಾ ಸಮಿತಿಯ ಆಡಳಿತ ಮಂಡಳಿ, ಪಟ್ಟಣ ಪಂಚಾಯತ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ), ಹಾಗೂ ಗ್ರಾಮದ ಗಣ್ಯರೊಂದಿಗೆ ಸಭೆ ನಡೆಯಿತು. ಸಭೆಗಳಲ್ಲಿ ಎಲ್ಲರ ಅಭಿಪ್ರಾಯಗಳನ್ನು ಆಲಿಸಿ, ಸಂಪ್ರದಾಯ, ಸಾರ್ವಜನಿಕ ಹಿತ ಮತ್ತು ವ್ಯವಸ್ಥೆಯ ಸುಗಮತೆಗೆ ಆದ್ಯತೆ ನೀಡುವ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.
ಚರ್ಚೆಗಳ ಫಲವಾಗಿ, ಜಾತ್ರಾ ಮಹೋತ್ಸವವನ್ನು ಸಂಪ್ರದಾಯಬದ್ಧವಾಗಿ, ಶಾಂತಿ–ಸೌಹಾರ್ದದೊಂದಿಗೆ ಹಾಗೂ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ನಡೆಸಲು ಒಮ್ಮತದ ಸಹಮತ ಅಭಿಪ್ರಾಯಕ್ಕೆ ಬರಲಾಯಿತು. ನಿಗದಿತ ವೇಳಾಪಟ್ಟಿಯಂತೆ ಅವರಾತ್ರಿ ಅಮವಾಸ್ಯೆಯದಿನದಿಂದ ಜ.18 ರಿಂದ ಜ.22 ರವರೆಗೆ ಜಾತ್ರೆಯ ಎಲ್ಲಾ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತರ ಸುರಕ್ಷತೆ, ಸ್ವಚ್ಛತೆ, ಸಂಚಾರ ವ್ಯವಸ್ಥೆ ಹಾಗೂ ಜಾನುವಾರು ಮೇಳದ ವ್ಯವಸ್ಥೆಗಾಗಿ ನೀರಿನ ಹಾಗೂ ವಿದ್ಯುತ್ ಬೆಳಕಿನ ವ್ಯವಸ್ಥೆ, ರೈತರ ಹಾಗೂ ಜಾನುವಾರು ಚಿಕಿತ್ಸಾಲಯ ಸೇರಿದಂತೆ ವಿಶೇಷ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಜಾತ್ರಾ ಚಡಚಣ ಉಪ ಮಾರುಕಟ್ಟೆ ಹಾಗೂ ಇಂಡಿ ಎಪಿಎಮ್‌ಸಿ ಕಾರ್ಯದರ್ಶಿ ಐ.ಎಸ್.ಔರಂಗಾಬಾದ ಮಾತನಾಡಿ, ನಾವೆಲ್ಲರು ಒಗ್ಗಟ್ಟಿನ ನಿರ್ಣಯಕ್ಕೆ ಬಂದಿದ್ದೇವೆ ಎಂದರು.
ಚಡಚಣ ಪ.ಪಂ.ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ ಮಾತನಾಡಿ “ಭಿನ್ನಾಭಿಪ್ರಾಯಗಳು ಸಹಜವಾದರೂ, ಅಂತಿಮವಾಗಿ ದೇವರ ಜಾತ್ರೆ ಹಾಗೂ ಮೂಕ ಪ್ರಾಣಿಗಳ ಜಾನುವಾರ ಜಾತ್ರೆ ಇದು ಎಲ್ಲರ ಹಬ್ಬ ಎಂಬ ಮನೋಭಾವದಿಂದ ಒಗ್ಗಟ್ಟಿನ ನಿರ್ಣಯಕ್ಕೆ ಬಂದಿದ್ದೇವೆ. ಎಲ್ಲರೂ ಸಹಕಾರ ನೀಡಿದರೆ ಜಾತ್ರೆ ಯಶಸ್ವಿಯಾಗಿ ನೆರವೇರುತ್ತದೆ” ಎಂದು ಹೇಳಿದರು.
ಪಟ್ಟಣದ ಗಣ್ಯರು ಹಾಗೂ ಭಕ್ತರು, ಗೊಂದಲಕ್ಕೆ ತೆರೆ ಎಳೆದ ಒಮ್ಮತದ ನಿರ್ಣಯವನ್ನು ಸ್ವಾಗತಿಸಿ, ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವವನ್ನು ಶಾಂತಿ, ಶಿಸ್ತು ಮತ್ತು ಭಕ್ತಿಭಾವದಿಂದ ಆಚರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಚಡಚಣ ತಹಶೀಲದಾರ ಸಂಜಯ ಇಂಗಳೆ, ಪ.ಪಂ.ಸಿಓ. ಬಿ.ಕೆ.ತಾವಸೆ, ಪ.ಪಂ. ಉಪಾಧ್ಯಕ್ಷ ಇಲಾಹಿ ನದಾಫ, ಎಂ.ಆರ್.ಪಾಟೀಲ.ಬಾಬುಗೌಡ ಪಾಟೀಲ, ಗಂಗಾಧರ ಪಾವಲೆ, ಪ.ಪಂ.ಸದಸ್ಯರಾದ ರಾಜು ಕೋಳಿ, ಪ್ರಕಾಶಗೌಡ ಪಾಟೀಲ, ಚೇತನ ನಿರಾಳೆ, ಶ್ರೀಕಾಂತ ಗಂಟಗಲಿ, ಇಬ್ರಾಹಿಂ ಸೌದಾಗರ, ವಾಸಿಮ್ ಮುಲ್ಲಾ, ಸಂಗಪ್ಪ ಭಂಡರಕವಠೆ, ಸೇರಿದಂತೆ ಪ.ಪಂ.ಎಲ್ಲ ಸದಸ್ಯರು ಹಾಗೂ ಶ್ರೀ ಸಂಗಮೇಶ್ವರ ಸಂಸ್ಥೆಯ ದೇವರ ಜಾತ್ರಾ ಸಮಿತಿಯ ಸದಸ್ಯರು, ಗಣ್ಯರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ

ಜ.೧೯ರಿಂದ ಪುಣ್ಯಸ್ಮರಣೋತ್ಸವ ವಿವಿಧ ಕಾರ್ಯಕ್ರಮಗಳು

ಸಪ್ತ ಶಕ್ತಿಸಂಗಮ ಮಹಿಳೆಯರನ್ನು ಜಾಗ್ರತಗೊಳಿಸುವ ಪ್ರಯತ್ನ

ಚಿನ್ನದಂಗಡಿ ವರ್ತಕನ ಮೇಲೆ ಪೊಲೀಸರಿಂದ ವಿನಾಕಾರಣ ಹಲ್ಲೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ
    In (ರಾಜ್ಯ ) ಜಿಲ್ಲೆ
  • ಜ.೧೯ರಿಂದ ಪುಣ್ಯಸ್ಮರಣೋತ್ಸವ ವಿವಿಧ ಕಾರ್ಯಕ್ರಮಗಳು
    In (ರಾಜ್ಯ ) ಜಿಲ್ಲೆ
  • ಸಪ್ತ ಶಕ್ತಿಸಂಗಮ ಮಹಿಳೆಯರನ್ನು ಜಾಗ್ರತಗೊಳಿಸುವ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ಚಿನ್ನದಂಗಡಿ ವರ್ತಕನ ಮೇಲೆ ಪೊಲೀಸರಿಂದ ವಿನಾಕಾರಣ ಹಲ್ಲೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಾಂಪ್ರದಾಯಿಕ ರೀತಿಯಲ್ಲಿ ಸಂಕ್ರಾಂತಿ ಹಬ್ಬ ಆಚರಣೆ
    In (ರಾಜ್ಯ ) ಜಿಲ್ಲೆ
  • ಶರಣ ವಚನ ಸಾಹಿತ್ಯ ಮನುಕುಲಕ್ಕೆ ದಾರಿದೀಪ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಮಾದರಿಯ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು :ಶಾಂತಾ
    In (ರಾಜ್ಯ ) ಜಿಲ್ಲೆ
  • ರಾಜಕೀಯ ಜಾಗೃತಿ ಮೂಡಿಸಲು ‘ಬಸವ ಶಕ್ತಿ’ ಸಮಾವೇಶ
    In (ರಾಜ್ಯ ) ಜಿಲ್ಲೆ
  • ರೈತರ ಪಂಪ್ ಸೆಟ್ಟುಗಳಿಗೆ ಅಕ್ರಮ-ಸಕ್ರಮ ಯೋಜನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.