Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
What's Hot

ಆಪರೇಶನ್ ಸಿಂಧೂರ: ಬಸವಸೈನ್ಯದಿಂದ ವಿಜಯೋತ್ಸವ

ಸಾಮರಸ್ಯದಿಂದ ಜೀವನ ಸಾಗಿಸಿ :ಶಿವಪ್ರಕಾಶ ಶ್ರೀ

ಗುಗಿಹಾಳ ಗ್ರಾಮವಿನ್ನು ಕಂದಾಯ ಗ್ರಾಮ : ಶಾಸಕ ಮನಗೂಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏಳು ಸ್ಥಳಗಳಲ್ಲಿ ಐಟಿ ದಾಳಿ :ರೂ.42 ಕೋಟಿ ವಶ
(ರಾಜ್ಯ ) ಜಿಲ್ಲೆ

ಏಳು ಸ್ಥಳಗಳಲ್ಲಿ ಐಟಿ ದಾಳಿ :ರೂ.42 ಕೋಟಿ ವಶ

By Updated:No Comments2 Mins Read
Facebook Twitter Pinterest LinkedIn Telegram WhatsApp
IMG 20231014 WA0000
Share
Facebook Twitter LinkedIn Email Telegram WhatsApp

ಕಾಂಗ್ರೆಸ್‌ನ ಹಣ ಎಂದ ಬಿಜೆಪಿ-ಜೆಡಿಎಸ್‌ | ಪಂಚ ರಾಜ್ಯಗಳ ಚುನಾವಣೆಗೆ ಹಣ ಸಂಗ್ರಹದ ಆರೋಪ

ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳು ಗುತ್ತಿಗೆದಾರರು ಆಭರಣ ಮಳಿಗೆ ಮಾಲೀಕರು, ಮಾಜಿ ಕಾರ್ಪೋರೇಟರ್‌ಗಳಿಗೆ ಸೇರಿದ ಹಲವು ಕಡೆ ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.  ಏಳು ಸ್ಥಳಗಳಲ್ಲಿ ದಾಳಿ ನಡೆಸುತ್ತಿದ್ದು, ಇದುವರೆಗೆ 42 ಕೋಟಿ ರೂ. ವಶಪಡಿಸಿಕೊಂಡಿದ್ದಾರೆ.
ಈ ಹಣ ಕಾಂಗ್ರೆಸ್‌ಗೆ ಸೇರಿದ್ದು, ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಬಳಸಲು ಕರ್ನಾಟಕದಲ್ಲಿ ಹಣ ಸಂಗ್ರಹಿಸುತ್ತಿದ್ದಾರೆ ಎಂದು ಬಿಜೆಪಿ, ಜೆಡಿಎಸ್‌ ಆರೋಪಿಸಿವೆ.
ಐದು ರಾಜ್ಯಗಳಾದ ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಮಿಜೋರಾಂ ಮತ್ತು ಛತ್ತೀಸ್‌ಗಢ ಚುನಾವಣೆಗೆ ಹಣ ನೀಡಲು ಕಾಂಗ್ರೆಸ್ ಗುತ್ತಿಗೆದಾರರಿಂದ ಕಮಿಷನ್ ಪಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
5 ರಾಜ್ಯಗಳ ಚುನಾವಣೆ ಘೋಷಣೆಯಾದ ತಕ್ಷಣ ಕಾಟನ್ ಬಾಕ್ಸ್ ಗಳಲ್ಲಿ ಕೋಟ್ಯಂತರ ರೂಪಾಯಿ ಗುತ್ತಿಗೆದಾರರ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರಿಂದ ಸಂಗ್ರಹಿಸಲಾಗಿದೆ? ಇದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಬೇಕು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಇದೇ ವೇಳೆ ಬಿಜೆಪಿಯ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಟಿಎಂ ಆಗುತ್ತೆ ಎಂದು ಈ ಹಿಂದೆ ಅಮಿತ್ ಶಾ ಹೇಳಿದ್ದರು. ಇದೀಗ ಸಾಕ್ಷಿ ಸಮೇತ ಕಳ್ಳರು ಸಿಕ್ಕಿಬಿದ್ದಿದ್ದಾರೆ. ಯಾವ ಕಮಿಷನ್ ಮೂಲಕ ಹಣ ಸಂಗ್ರಹಿಸಿದ್ದಾರೆ ಅಂತಾ ತನಿಖೆ ಆಗಲಿ. ಸಿಎಂ, ಡಿಸಿಎಂ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪಾತ್ರ ಏನು ಅಂತಾ ತನಿಖೆ ಆಗಬೇಕು. ಕೆಂಪಣ್ಣ ಕಾಂಗ್ರೆಸ್ ಪಕ್ಷದ​ ಏಜೆಂಟ್​ ಅನ್ನೋದು ಪ್ರೂವ್​ ಆಗುತ್ತಿದೆ. ಪತ್ತೆಯಾಗಿರುವ ದುಡ್ಡು ಪಂಚರಾಜ್ಯಗಳಿಗೆ ಎಲ್ಲೆಲ್ಲಿ ಹೋಗುತ್ತಿತ್ತೋ, ಈ ಬಗ್ಗೆ ತನಿಖೆಯಾದರೆ ಎಲ್ಲರೂ ಸಿಕ್ಕಿಹಾಕಿಕೊಳ್ಳುತ್ತಾರೆ ಎಂದರು.
ಬಿಜೆಪಿ ಶಾಸಕ ಡಾ.ಅಶ್ವತ್ಥ ನಾರಾಯಣ, ಎಟಿಎಂ ಸರ್ಕಾರ ಅನ್ನೋದು ಈಗ ಸಾಕ್ಷಿ ಸಮೇತ ಗೊತ್ತಾಗಿದೆ. ಕೇವಲ ಸಣ್ಣ ಮೊತ್ತವಷ್ಟೇ ಸಿಕ್ಕಿದೆ, ಇನ್ನೂ ಬಹಳಷ್ಟು ಕಡೆ‌ ಇರುತ್ತದೆ. ಕಿರುಕುಳ ನೀಡಿ ಹೆದರಿಸಿ ಕಲೆಕ್ಷನ್ ಮಾಡಿರುವ ಈ ದುಡ್ಡು ಯಾರಿಗೆ ಸೇರಿದ್ದು ಅಂತಾ ಗುತ್ತಿಗೆದಾರರು ಹೇಳಬೇಕು. ಹಿಂಸೆ ಕೊಟ್ಟು ವಸೂಲಿ ಮಾಡಿದ್ದಾರೆಂದು ಗುತ್ತಿಗೆದಾರರು ಹೇಳಬೇಕು. ನಮ್ಮ ಸರ್ಕಾರದ ಮೇಲೆ ಆಧಾರವಿಲ್ಲದೆ ಆರೋಪ ಮಾಡಿದ್ದರು. ಅಂದು ಆಪಾದನೆ ಮಾಡಿದವರಲ್ಲಿ ಅಂಬಿಕಾಪತಿ ಒಬ್ಬ. ಯಾವುದಾದರೂ ಗುತ್ತಿಗೆದಾರರ ಹತ್ತಿರ ಕ್ಯಾಶ್ ಹೇಗೆ ಬರುತ್ತದೆ? ಇದು ಕಿಕ್ ಬ್ಯಾಕ್ ದುಡ್ಡು, ವಸೂಲಿ ದುಡ್ಡು, ಕಮಿಷನ್ ದುಡ್ಡು ಎಂದು ವಾಗ್ದಾಳಿ ನಡೆಸಿದರು.

*ಬಿಜೆಪಿ ಆರೋಪಗಳು ಆಧಾರ ರಹಿತ :ಸಿಎಂ*

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ ದಾಳಿ ಬಗ್ಗೆ ನಮಗ್ಯಾಕೆ ಕೇಳುತ್ತೀರಾ ಎಂದು ಪ್ರಶ್ನಿಸಿದರು.
ಯಾವ ರಾಜ್ಯಗಳಿಗೂ ನಾವು ಹಣ ಕೊಡಲ್ಲ, ಅವರು ಕೇಳುವುದಿಲ್ಲ. ಹಣ ಹೋಗಿರುವುದು ಬಿಜೆಪಿ ಅವರು ನೋಡಿದ್ದಾರಾ? ಬಿಜೆಪಿಯವರ ಮಾಡಿದ ಎಲ್ಲಾ ಆರೋಪಗಳು ಆಧಾರ ರಹಿತ ಎಂದರು.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ರಾಜಕೀಯ ಇಲ್ಲದೆ ಐಟಿ ಅಧಿಕಾರಿಗಳು ಬರುವುದಿಲ್ಲ. ರಾಜಕೀಯ ನಡೆಯುತ್ತಾ ಇರುವುದು ನಮಗೆ ಗೊತ್ತಿದೆ. ಬಿಜೆಪಿ ಅಧಿಕಾರದಲ್ಲಿ ಇರುವ ಕಡೆ ಐಟಿ ದಾಳಿ ನಡೆಯುವುದಿಲ್ಲ ಎಂದರು.
ಐದು ರಾಜ್ಯ ಚುನಾವಣೆಗೆ ಕರ್ನಾಟಕ ಕಲೆಕ್ಷನ್ ಸೆಂಟರ್ ಎಂಬ ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ ಅವರ ಆರೋಪಕ್ಕೆ ತಿರುಗೇಟು ನೀಡಿದ ಅವರು, ಅವನ್ಯಾರೋ ರಸ್ತೆ ಬೀದಿಯಲ್ಲಿ ಮಾತಾಡೋವರಿಗೆ ನಾನು ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದರು.

IMG 20231014 WA0001 1
BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಪರೇಶನ್ ಸಿಂಧೂರ: ಬಸವಸೈನ್ಯದಿಂದ ವಿಜಯೋತ್ಸವ

ಸಾಮರಸ್ಯದಿಂದ ಜೀವನ ಸಾಗಿಸಿ :ಶಿವಪ್ರಕಾಶ ಶ್ರೀ

ಗುಗಿಹಾಳ ಗ್ರಾಮವಿನ್ನು ಕಂದಾಯ ಗ್ರಾಮ : ಶಾಸಕ ಮನಗೂಳಿ

ಧರ್ಮ ಮತ್ತು ದೇವರು ಈ ದೇಶದ ತಾಯಿ ಬೇರುಗಳಿದ್ದಂತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • IMG 20250508 WA0000ಆಪರೇಶನ್ ಸಿಂಧೂರ: ಬಸವಸೈನ್ಯದಿಂದ ವಿಜಯೋತ್ಸವ
    In (ರಾಜ್ಯ ) ಜಿಲ್ಲೆ
  • IMG 20250507 WA0035ಸಾಮರಸ್ಯದಿಂದ ಜೀವನ ಸಾಗಿಸಿ :ಶಿವಪ್ರಕಾಶ ಶ್ರೀ
    In (ರಾಜ್ಯ ) ಜಿಲ್ಲೆ
  • IMG 20250507 WA0034ಗುಗಿಹಾಳ ಗ್ರಾಮವಿನ್ನು ಕಂದಾಯ ಗ್ರಾಮ : ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • IMG 20250507 WA0033ಧರ್ಮ ಮತ್ತು ದೇವರು ಈ ದೇಶದ ತಾಯಿ ಬೇರುಗಳಿದ್ದಂತೆ
    In (ರಾಜ್ಯ ) ಜಿಲ್ಲೆ
  • IMG 20250507 WA0032ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ ೧ ಕೋಟಿ ರೂ. ಅನುದಾನ
    In (ರಾಜ್ಯ ) ಜಿಲ್ಲೆ
  • IMG 20250507 WA0030ಸಾಧನೆ ಮಾಡಲು ಬಡತನ ಅಡ್ಡಿಯಾಗದು :ಡಾ.ಮಹೇಶ
    In (ರಾಜ್ಯ ) ಜಿಲ್ಲೆ
  • ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • IMG 20250507 WA0029“ಆಪರೇಷನ್ ಸಿಂಧೂರ”: ಭಾರತ ಸರ್ಕಾರದ ದಿಟ್ಟ ನಿರ್ಧಾರ
    In (ರಾಜ್ಯ ) ಜಿಲ್ಲೆ
  • IMG 20250507 WA0027ಆರೋಗ್ಯ ದಾಸೋಹದೊಂದಿಗೆ ಶರಣರ ದಾರಿಯಲ್ಲಿ ಡಾ.ಗೌತಮ್ ಚೌಧರಿ
    In (ರಾಜ್ಯ ) ಜಿಲ್ಲೆ
  • ಪುರಸಭೆ ಸದಸ್ಯ ಶಿವಪ್ಪ ಆರೋಪಗಳು ಸುಳ್ಳು :ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.