ಜೆಡಿಎಸ್ ತಾಲೂಕು ಮಾಜಿ ಅಧ್ಯಕ್ಷ ಸಿ. ವಿ. ನಾಗರಾಜ್ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ಹೆಚ್.ಡಿ.ಕೋಟೆ: ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನಿಖಿಲ್ ಕುಮಾರಸ್ವಾಮಿ ಟೊಂಕಕಟ್ಟಿ ನಿಂತಿದ್ದಾರೆ. ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೆಡಿಎಸ್ ತಾಲೂಕು ಮಾಜಿ ಅಧ್ಯಕ್ಷ ಸಿ. ವಿ. ನಾಗರಾಜ್ ಭವಿಷ್ಯ ನುಡಿದರು.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ 37ನೇ ಹುಟ್ಟು ಹಬ್ಬದ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ನಿಖಿಲ್ ಕುಮಾರಸ್ವಾಮಿ ಅವರು ಚುನಾವಣೆಯಲ್ಲಿ ಮೂರು ಬಾರಿ ಸೋತರೂ ಕುಗ್ಗದೆ ಪಕ್ಷಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಾಮಾಣಿಕವಾದ ಹೋರಾಟವನ್ನು ಮಾಡುತ್ತಿರುವ ವ್ಯಕ್ತಿ. ಪಕ್ಷದಲ್ಲಿ ಇರುವ ಸ್ಥಾನ ಮಾನಗಳನ್ನು ಬಳಕೆ ಮಾಡಿಕೊಂಡು ಇಡೀ ರಾಜ್ಯವನ್ನು ಸುತ್ತಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಛಲವನ್ನು ಇಟ್ಟುಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರಿಗೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗಲಿ ಎಂದು ತಿಳಿಸಿದರು.
ಹಿರಿಯ ಜೆಡಿಎಸ್ ಮುಖಂಡ ನರಸಿಂಹೇಗೌಡ ಮಾತನಾಡಿ ಚುನಾವಣೆ ಸೋಲಿನಿಂದ ಮನಸ್ಸಿಗೆ ನೋವಾಗಿದ್ದರು ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು ಎಂದು ಪಕ್ಷ ಸಂಘಟನೆಯನ್ನು ಮಾಡುತ್ತಿರುವ ನಿಖಿಲ್ ಕುಮಾರಸ್ವಾಮಿಯವರಿಗೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.
ಹೆಚ್ ಡಿ ಕೋಟೆ ತಾಲೂಕು ಜೆಡಿಎಸ್ ಅಧ್ಯಕ್ಷ ಎಂ. ರಾಜೇಂದ್ರ, ಸರಗೂರು ತಾಲೂಕು ಜೆಡಿಎಸ್ ಅಧ್ಯಕ್ಷ ಎಂ. ಗೋಪಾಲಸ್ವಾಮಿ, ಹಿರಿಯ ಮುಖಂಡ ಎಂ.ಡಿ. ಮಂಚಯ್ಯ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ನಿಖಿಲ್ ಕುಮಾರಸ್ವಾಮಿ ಅಭಿಮಾನಿ ಬಳಗದ ಕಾರ್ಯದರ್ಶಿ ನಂಜಪ್ಪ, ಸಂಘಟನಾ ಕಾರ್ಯದರ್ಶಿ ಯೋಗೇಶ್, ಚಕ್ಕಳ್ಳಿ ಕಾಲೋನಿ ಬೈರೇಗೌಡ, ನಿಖಿಲ್ ಕುಮಾರಸ್ವಾಮಿ ಅಭಿಮಾನಿ ಬಳಗದ ಖಜಾಂಜಿ ಯೋಗೇಶ್ ಬೆಳಗನಹಳ್ಳಿ, ತಮ್ಮೇಗೌಡ, ಎಡತೊರೆ ವೆಂಕಟೇಶ್, ಕೃಷ್ಣಾಪುರ ಶಿವಯ್ಯ, ಸಿ.ಕಾಳಪ್ಪಾಜಿ ಭೋಗೇಶ್ವರ ಕಾಲೋನಿ, ಜವರೇಗೌಡ, ಪ್ರಕಾಶ್, ಸತ್ಯನಾರಾಯಣ, ಮಂಜು ದೇವಲಾಪುರ, ದೇವರಾಜು, ಕುಮಾರಸ್ವಾಮಿ ಅಭಿಮಾನಿ ಬಳಗದ ಸಂಘಟನಾ ಕಾರ್ಯದರ್ಶಿ ಜಗದೀಶ್ ಸಿ. ಆರ್, ಬೈರೇಗೌಡ, ಮಾದೇಗೌಡ, ತೇಜು ಸೇರಿದಂತೆ ಪಕ್ಷದ ಮುಖಂಡರು ಅಭಿಮಾನಿಗಳು ಹಾಜರಿದ್ದರು.

