Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೨ರಂದು ಉದ್ಯೋಗ ಮೇಳ :ನೋಂದಣಿಗೆ ಕ್ರಮವಹಿಸಿ

ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಕಾರ್ಖಾನೆಗಳು ಪ್ರಾರಂಭವಾಗಲಿ

ಮುದ್ದೇಬಿಹಾಳದಲ್ಲಿ ನಾರಾಯಣಸ್ವಾಮಿ ಜಿ. ಪ್ರಚಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಿ. ಎಂ.ಸಿ.ಮನಗೂಳಿ ಓರ್ವ ಧೀಮಂತ ವ್ಯಕ್ತಿ :ಸುಣಗಾರ
(ರಾಜ್ಯ ) ಜಿಲ್ಲೆ

ದಿ. ಎಂ.ಸಿ.ಮನಗೂಳಿ ಓರ್ವ ಧೀಮಂತ ವ್ಯಕ್ತಿ :ಸುಣಗಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದಿ. ಎಂ.ಸಿ.ಮನಗೂಳಿ ಅವರ ೫ನೇ ಪುಣ್ಯಸ್ಮರಣೆ ನಿಮಿತ್ತ ಹೊನಲು ಬೆಳಕಿನ ವಾಲಿಬಾಲ್ “ಭಗೀರಥ ಕಪ್” ಕಾರ್ಯಕ್ರಮಕ್ಕೆ ಚಾಲನೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ದಿ. ಎಂ.ಸಿ.ಮನಗೂಳಿ ಅವರು ಕಡು ಬಡುತನದಲ್ಲಿ ಹುಟ್ಟಿದರು ಜನಸೇವೆ ಮಾಡಬೇಕೆಂಬ ಬಯಕೆ ಅವರಲ್ಲಿ ಬಹಳಷ್ಟಿತ್ತು. ಅದರ ಫಲವಾಗಿ ಅವರು ಸಚಿವರಾಗಿ ಆಯ್ಕೆಯಾಗಿ ಜಿಲ್ಲೆಗೆ ಅನೇಕ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಒಬ್ಬ ದೀಮಂತ ವ್ಯಕ್ತಿಯಾಗಿದ್ದರು ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.
ಸಿಂದಗಿ ಪಟ್ಟಣದ ಎಚ್.ಜಿ.ಕಾಲೇಜಿನ ಮೈದಾನದಲ್ಲಿ ಕರ್ನಾಟಕ ವಾಲಿಬಾಲ್ ಸಂಸ್ಥೆ ಹಾಗೂ ಎಂ.ಸಿ.ಮನಗೂಳಿ ಪ್ರತಿಷ್ಠಾನದ ವತಿಯಿಂದ ಎಂ.ಸಿ.ಮನಗೂಳಿ ಅವರ ೫ನೇ ಪುಣ್ಯಸ್ಮರಣೆ ನಿಮಿತ್ತ ಹಮ್ಮಿಕೊಂಡ ಹೊನಲು ಬೆಳಕಿನ ವಾಲಿಬಾಲ್ ಭಗೀರಥ ಕಪ್ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಹಿರಿಯರ ಮಾರ್ಗದರ್ಶನ ಮುಖೇನ ನಾವೆಲ್ಲ ಕಾರ್ಯನಿರ್ವಹಿಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುದಕ್ಕೆ ದಿ.ಎಂ.ಸಿ.ಮನಗೂಳಿ ಅವರ ಸುಪುತ್ರ ಶಾಸಕ ಅಶೋಕ ಮನಗೂಳಿ ಅವರೇ ನೀದರ್ಶನ. ಅಶೋಕ ಮನಗೂಳಿ ಶಾಸಕರಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ತಂದೆಗೆ ತಕ್ಕ ಮಗ ಎಂದೆನಿಸಿಕೊಳ್ಳುತ್ತಿದ್ದಾರೆ. ಅವರ ಕಾರ್ಯ ಹೀಗೆ ಸಾಗಲಿ ಎಂದು ಶುಭ ಹಾರೈಸಿದರು.
ಕರ್ನಾಟಕ ವಾಲಿಬಾಲ್ ಸಂಸ್ಥೆಯ ಪ್ರ.ಕಾರ್ಯದರ್ಶಿ ಲಕ್ಷ್ಮೀನಾರಾಯಣ ಮಾತನಾಡಿ, ಸಿಂದಗಿ ಶಾಸಕ ಮನಗೂಳಿ ಅವರು ಒಬ್ಬ ಕ್ರೀಡಾಭಿಮಾನಿ ಎನ್ನುವುದಕ್ಕೆ ಈ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯೇ ಉದಾಹರಣೆ. ಮುಂಬರುವ ದಿನಮಾನಗಳಲ್ಲಿ ಯಾವುದೇ ಪಂದ್ಯಾವಳಿ ಹಮ್ಮಿಕೊಂಡರು ನಮ್ಮ ಸಂಸ್ಥೆಯ ಸಹಕಾರ ಸದಾ ಇರುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಶೋಕ ಮನಗೂಳಿ ವಹಿಸಿದ್ದರು. ಜಿಪಂ ಮಾಜಿ ಉಪಾಧ್ಯಕ್ಷ ಮಲ್ಲಣ್ಣ ಸಾಲಿ ವಾಲಿಬಾಲ್ ಮೈದಾನದ ಪೂಜೆಯನ್ನು ನೆರವೇರಿಸಿ ಮಾತನಾಡಿದರು.
ಅಶೋಕ ವಾರದ ಮಾತನಾಡಿದರು. ಕಾರ್ಯಕ್ರಮದ ಸಾನಿಧ್ಯವನ್ನು ಸಾರಂಗಮಠದ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ರಾಂಪೂರ ಪಿಎ ಗ್ರಾಮದ ಆರೂಢಮಠದ ನಿತ್ಯಾನಂದ ಮಹಾರಾಜರು ವಹಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಜಾನಪದ ಕಲಾವಿದ ಬಾಳು ಬೆಳಗುಂದಿ, ಬಾಲಾಜಿ ಪ್ರಭು, ರವಿಕುಮಾರ, ನಾಗೇಶ್ವರಾವ್, ಛಲಪತಿ, ಮಂಜುನಾಥ, ನಿವೃತ್ತ ದೈಹಿಕ ಉಪನ್ಯಾಸಕ ಕೆ.ಎಚ್.ಸೋಮಾಪುರ, ಎಚ್.ಎಂ.ಉತ್ನಾಳ, ಶಿವಪ್ಪಗೌಡ ಬಿರಾದಾರ, ಅಶೋಕ ವಾರದ, ಡಾ.ರವಿ ಗೋಲಾ, ಡಾ.ಅರವಿಂದ ಮನಗೂಳಿ, ಉಮೇಶ ಜೋಗುರ, ಪಂಡಿತ ಕುಲಕರ್ಣಿ, ಗುರಣ್ಣಗೌಡ ಪಾಟೀಲ, ಎಂ.ಎ.ಖತೀಬ, ಅಶೋಕ ಕೊಳಾರಿ, ಸೋಮನಗೌಡ ಬಿರಾದಾರ, ಕಲ್ಲಪ್ಪ ನಾಯ್ಕೋಡಿ, ಸಿದ್ದರಾಮ ಕಲ್ಲೂರ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಕ್ರೀಡಾಭಿಮಾನಿಗಳು ಹಾಗೂ ಮನಗೂಳಿ ಅವರ ಅಭಿಮಾನಿಗಳು ಇದ್ದರು.
ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಸ್ವಾಗತಿಸಿದರು. ಉಪನ್ಯಾಸಕ ಸಿದ್ದಲಿಂದ ಕಿಣಗಿ ನಿರೂಪಿಸಿ, ವಂದಿಸಿದರು.
ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕದ ೬ ತಂಡಗಳಾದ ಕರ್ನಾಟಕ ರಾಜ್ಯ ಪೊಲೀಸ್, ಬೆಂಗಳೂರಿನ ಎ.ಎಸ್.ಸಿ ಕರ್ನಾಟಕ ಪೋಸ್ಟಲ್, ಸ್ಪೋರ್ಟ್ ಹಾಸ್ಟೆಲ್, ಎಸ್‌ಡಿಎಂ ಉಜಿರೆ, ಹುಬ್ಬಳ್ಳಿಯ ಸೌತ್ ಸೆಂಟ್ರಲ್ ರೈಲ್ವೆ ಭಾಗವಹಿಸಿವೆ.

” ಮನಗೂಳಿ ಅವರನ್ನು ಸ್ಮರಣೆ ಮಾಡಿಕೊಳ್ಳುವ ಒಂದು ಅವರೂಪದ ಕಾರ್ಯಕ್ರಮವಿದು. ಸಮನಾಗಿ ನೋಡುವ ಭಾವ ಯಾರಲ್ಲಿರುತ್ತದೆಯೋ ಅವರು ಜೀವನದಲ್ಲಿ ಸಾಧನೆ ಮಾಡುತ್ತಾರೆ. ಮನಗೂಳಿ ಅವರು ಈ ನಾಡು ಕಂಡಂತಹ ಒಬ್ಬ ಶ್ರೇಷ್ಠ ರಾಜಕಾರಣಿ ಮತ್ತು ಸಮಾಜ ಚಿಂತಕ.”

– ಡಾ.ಪ್ರಭುಸಾರಂಗದೇವ ಶಿವಾಚಾರ್ಯರು
ಸಾರಂಗಮಠ-ಗಚ್ಚಿನಮಠ ಸಿಂದಗಿ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೨ರಂದು ಉದ್ಯೋಗ ಮೇಳ :ನೋಂದಣಿಗೆ ಕ್ರಮವಹಿಸಿ

ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಕಾರ್ಖಾನೆಗಳು ಪ್ರಾರಂಭವಾಗಲಿ

ಮುದ್ದೇಬಿಹಾಳದಲ್ಲಿ ನಾರಾಯಣಸ್ವಾಮಿ ಜಿ. ಪ್ರಚಾರ

ನೊಂದು ಬರುವ ಮಹಿಳೆಯರಿಗೆೆ ಮಹಿಳಾ ಸಾಂತ್ವನ ಪೂರಕ :ಸಿಂತಿಯಾ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೨ರಂದು ಉದ್ಯೋಗ ಮೇಳ :ನೋಂದಣಿಗೆ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಕಾರ್ಖಾನೆಗಳು ಪ್ರಾರಂಭವಾಗಲಿ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ನಾರಾಯಣಸ್ವಾಮಿ ಜಿ. ಪ್ರಚಾರ
    In (ರಾಜ್ಯ ) ಜಿಲ್ಲೆ
  • ನೊಂದು ಬರುವ ಮಹಿಳೆಯರಿಗೆೆ ಮಹಿಳಾ ಸಾಂತ್ವನ ಪೂರಕ :ಸಿಂತಿಯಾ
    In (ರಾಜ್ಯ ) ಜಿಲ್ಲೆ
  • ಸಿಂದಗಿ ಮತಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ!
    In (ರಾಜ್ಯ ) ಜಿಲ್ಲೆ
  • ಕಾನೂನು ಘಟಕಕ್ಕೆ ಸೀತಿಮನಿ ನೇಮಕ
    In (ರಾಜ್ಯ ) ಜಿಲ್ಲೆ
  • ದಿ. ಎಂ.ಸಿ.ಮನಗೂಳಿ ಓರ್ವ ಧೀಮಂತ ವ್ಯಕ್ತಿ :ಸುಣಗಾರ
    In (ರಾಜ್ಯ ) ಜಿಲ್ಲೆ
  • ಆಲಮೇಲದಲ್ಲಿ ಮನೆಗೊಂದು ಗ್ರಂಥಾಲಯ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಶಾಖೆಗೆ ಪದಾಧಿಕಾರಿಗಳ ಆಯ್ಕೆ
    In (ರಾಜ್ಯ ) ಜಿಲ್ಲೆ
  • ವಿವೇಕಾನಂದ ಶಾಲೆಗೆ ಪ್ರಥಮ ಬಹುಮಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.