Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿಂದೂ ಸಮ್ಮೇಳನ ನಿಮಿತ್ಯ ಬ್ರಹತ್ ಶೋಬಾಯಾತ್ರೆ‌

ಭೀಮಾಶಂಕರ ಕಾರ್ಖಾನೆಗೆಕಬ್ಬು ಪರಿಶೀಲನಾ ಸಮಿತಿ ಭೇಟಿ

ಆದರ್ಶ ವಿದ್ಯಾಲಯ :ಪ್ರವೇಶ ಪರೀಕ್ಷೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಗೀತ-ಮನಸ್ಸು ಪುಳಕಿತಗೊಳಿಸುವ ಸಾಧನ :ಸುಮಾ
(ರಾಜ್ಯ ) ಜಿಲ್ಲೆ

ಸಂಗೀತ-ಮನಸ್ಸು ಪುಳಕಿತಗೊಳಿಸುವ ಸಾಧನ :ಸುಮಾ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಂದು ಮಾನವ ಜೀವನದಲ್ಲಿ ಏನೆಲ್ಲವನ್ನು ಗಳಿಸಬಲ್ಲ, ಸಂಪಾದಿಸಬಲ್ಲ. ಆದರೆ ಆತನ ಜೀವನದಲ್ಲಿ ಒಂದಿಷ್ಟು ಸುಖ-ಶಾಂತಿ, ನೆಮ್ಮದಿ ಇಲ್ಲದಂತಾಗಿದೆ. ನಗು ಸರ್ವರ ರೋಗಗಳಿಗೆ ಮದ್ದು. ಮನುಷ್ಯನ ಮೊಗದಲ್ಲಿ ಕೊಂಚ ನಗು, ಸಂತೋಷ ಮತ್ತು ಮನಸ್ಸನ್ನು ಪುಳಕಿತಗೊಳಿಸಲು ಹಾಸ್ಯ ಮತ್ತು ಸಂಗೀತ ಆಲಿಸುವುದು ಅವಶ್ಯಕ. ದೇವಸ್ಥಾನಗಳಲ್ಲಿ ಸಂಗೀತ ಸಭಾ ನಡೆಸುವುದರ ಮೂಲಕ ಧಾರ್ಮಿಕ-ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವದು ಸಂತೋಷದ ಸಂಗತಿ ಎಂದು ಮುಖ್ಯ ಅತಿಥಿ ಬಿಗ್ ಬಾಸ್ ಖ್ಯಾತಿಯ ಮೈಸೂರಿನ ಕಲಾವಿದೆ ಸುಮಾ ರಾಜಕುಮಾರ ಅವರು ಅಭಿಪ್ರಾಯಪಟ್ಟರು.
ಅವರು ನಗರದ ಅಥಣಿ ರಸ್ತೆಯಲ್ಲಿರುವ ಅಲ್-ಅಮೀನ್ ಆಸ್ಪತ್ರೆ ಎದುರಿಗೆ ಇರುವ ಆಂಜನೇಯ ದೇವಸ್ಥಾನದಲ್ಲಿ ೬ ನೆಯ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಜರುಗಿದ ಸಂಗೀತ ರಸಮಂಜರಿ, ಹಾಸ್ಯಮಯ ಜಾದೂ ಹಾಗೂ ಮಾತನಾಡುವ ಗೊಂಬೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಸಂಗೀತ ಮನುಷ್ಯನ ಮನೋರೋಗಗಳನ್ನು ದೂರ ಮಾಡುತ್ತದೆ. ಮನಸ್ಸಿಗೆ ಆಹ್ಲಾದ ಮತ್ತು ರಂಜನೀಯವಾದ ಕಲೆಯಾಗಿ ಮಾನಸಿಕ ನೆಮ್ಮದಿ ನೀಡುವ ಸಾಧನವಾಗಿದೆ. ಸಂಗೀತ ಕಲಿಕೆಗೆ ಯಾವುದೇ ವಯಸ್ಸಿನ ಮಿತಿಯಿಲ್ಲ. ಕಲಿಯುವ ಹಂಬಲ, ಸಾಧಿಸುವ ಛಲವೊಂದಿದ್ದರೆ ಎಂತಹ ಸಾಧನೆಯನ್ನು ಮಾಡಬಹುದು ಇದಕ್ಕೆ ಭೀಮಸೇನ್ ಜೋಶಿ ಅವರೇ ನಮಗೆಲ್ಲ ನಿದರ್ಶನವೆಂದು ಹೇಳಿದರು. ಮಾಜಿ ಸೈನಿಕರಾದ ಚಂದ್ರಶೇಖರ ಇಂಗಳೇಶ್ವರ ಅವರು ಮಾತನಾಡುತ್ತಾ, ಪ್ರತಿಯೊಬ್ಬರೂ ಜೀವನದಲ್ಲಿ “ಬದುಕು ಅಥವಾ ಸಂಸಾರ” ಎಂಬ ಜಂಜಾಟದಲ್ಲಿ ಎದುರಾಗುವ ಎಲ್ಲ ಕಷ್ಟ-ನಷ್ಟ, ಸುಖ-ದುಃಖ ಮತ್ತು ಸಮಸ್ಯೆಗಳೆಲ್ಲವನ್ನು ಸಮನಾಗಿ ಸ್ವೀಕರಿಸುತ್ತಾ, ಪ್ರತಿ ಕ್ಷಣವು ಸುಖ-ಶಾಂತಿ-ನೆಮ್ಮದಿ ಮತ್ತು ಸಮಾಧಾನದೊಂದಿಗೆ ನಮ್ಮ ಬದುಕನ್ನು ಸಾಗಿಸಬೇಕು. ಈ ದೇವಸ್ಥಾನವು ಜಾತ್ರಾ ಮಹೋತ್ಸವವನ್ನು ವಿಶೇಷವಾಗಿ ಆಚರಿಸುತ್ತಾ, ನಗರದ ಮಾದರಿ ಬಡಾವಣೆಯಾಗಿದೆ ಎಂದರು.
ಸಮಾರಂಭದಲ್ಲಿ ದತ್ತಾ ಗೋಲಂಡೆ, ಕಸ್ತೂರಿ ಸಾವಳಗಿ, ಶಕುಂತಲಾ ಅಂಕಲಗಿ, ಶಾಂತಾ ಕಪಾಳಿ, ಕಲ್ಪನಾ ರಜಪೂತ, ಸಿದ್ದಮ್ಮ ಪಾಟೀಲ, ಕಮಲಾ ತೆನಿಹಳ್ಳಿ ಇನ್ನಿತರು ವೇದಿಕೆಯ ಮೇಲಿದ್ದರು.
ನ್ಯಾಯವಾದಿ ರಾಜು ಶಿವಗೊಂಡ, ಶ್ರೀಶೈಲ ಮಾಳಿ, ಗೊಲ್ಲಾಳ ಎಚ್ಚಿ, ಎಸ್.ಬಿ.ಬಶೆಟ್ಟಿ, ಪ್ರಕಾಸ ನಾಗನೂರ, ಪ್ರೊ. ಎಂ.ಎಸ್.ಖೊದ್ನಾಪೂರ, ಎ.ಬಿ.ಬಿರಾದಾರ, ಮಹಾದೇವ ಕಪಾಳಿ, ಮಹಾದೇವ ಪಾಟೀಲ, ಚೇತನ ದೇವನಾಯಕ, ಎಸ್.ಎಂ.ಬಂಗಾರಿ, ಪ್ರೊ. ಮಾರುತಿ ಜೋಶಿ, ರಾಘವೇಂದ್ರ ಪಾಟೀಲ, ಸ್ವಪ್ನಾ ಶಿವಗೊಂಡ, ಸರೋಜಾ ಬಾಗಲಕೋಟ, ಸ್ವಪ್ನಾ ಚಾಬೂಕಸವಾರ, ದೀಪಾ ಮಠಪತಿ, ಸುಜಾತಾ ನಾಗನೂರ ಇನ್ನಿತರು ಸಹ ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಿಂದೂ ಸಮ್ಮೇಳನ ನಿಮಿತ್ಯ ಬ್ರಹತ್ ಶೋಬಾಯಾತ್ರೆ‌

ಭೀಮಾಶಂಕರ ಕಾರ್ಖಾನೆಗೆಕಬ್ಬು ಪರಿಶೀಲನಾ ಸಮಿತಿ ಭೇಟಿ

ಆದರ್ಶ ವಿದ್ಯಾಲಯ :ಪ್ರವೇಶ ಪರೀಕ್ಷೆ

ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿಂದೂ ಸಮ್ಮೇಳನ ನಿಮಿತ್ಯ ಬ್ರಹತ್ ಶೋಬಾಯಾತ್ರೆ‌
    In (ರಾಜ್ಯ ) ಜಿಲ್ಲೆ
  • ಭೀಮಾಶಂಕರ ಕಾರ್ಖಾನೆಗೆಕಬ್ಬು ಪರಿಶೀಲನಾ ಸಮಿತಿ ಭೇಟಿ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ :ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಫೆ.೧ ಕ್ಕೆ ನೂತನ ಶಿಲಾಮಠ ಭೂಮಿ ಪೂಜಾ ಸಮಾರಂಭ
    In (ರಾಜ್ಯ ) ಜಿಲ್ಲೆ
  • ಸಂಗೀತ-ಮನಸ್ಸು ಪುಳಕಿತಗೊಳಿಸುವ ಸಾಧನ :ಸುಮಾ
    In (ರಾಜ್ಯ ) ಜಿಲ್ಲೆ
  • ಕಣಿಯನಹುಂಡಿಯಲ್ಲಿ ಚಿರತೆಯ ಬಿಂದಾಸ್ ಓಡಾಟ
    In (ರಾಜ್ಯ ) ಜಿಲ್ಲೆ
  • ವಾಲಿಬಾಲ್: ಕರ್ನಾಟಕ ರಾಜ್ಯ ಪೊಲೀಸ್ ತಂಡಕ್ಕೆ ಭಗೀರಥ ಕಪ್
    In (ರಾಜ್ಯ ) ಜಿಲ್ಲೆ
  • ಆಕಸ್ಮಿಕ ಬೆಂಕಿಗೆ ರಸಗೊಬ್ಬರ ಗೋದಾಮು ಭಸ್ಮ :ಅಪಾರ ನಷ್ಟ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸುವ ಅಂಚೆ ಇಲಾಖೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.