ಉದಯರಶ್ಮಿ ದಿನಪತ್ರಿಕೆ
ಜಮಖಂಡಿ 02-01 : ‘ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಮಕ್ಕಳಿಗೆ ಪಾಲಕರು ಕಲಿಸಬೇಕು, ಗುರುಗಳಿಗೆ, ಹಿರಿಯರಿಗೆ ಗೌರವ ನೀಡಬೇಕು’ ಎಂದು ಶಾಲಾ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಡಾ ಎˌ ಜೆˌ ನ್ಯಾಮಗೌಡ ಹೇಳಿದರು.
ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದ ಗದುಗಿನ ಜಗದ್ಗುರು ತೊಂಟದಾರ್ಯ ವಿದ್ಯಾಪೀಠದ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ 1999-2002ನೇ ಸಾಲಿನಲ್ಲಿ ಕಲಿತ 8 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಗುರುವಂದನೆ ಹಾಗೂ ಸ್ನೇಹ ಸಂಗಮ-ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾತೃ ದೇವೋ ಭವ, ಪಿತೃ ದೇವೋ ಭವ, ಆಚಾರ್ಯ ದೇವೋ ಭವ, ಅತಿಥಿ ದೇವೋ ಭವ ಎನ್ನುತ್ತದೆ. ನಮ್ಮ ಸಂಸ್ಕೃತಿ ತಾಯಿ ತಂದೆ ನಂತರ ಗುರುವೇ ಮುಖ್ಯ ಎಂಬ ಶ್ರದ್ದಾಪೂರ್ವಕ ನಂಬಿಕೆಯ ಕಾರ್ಯಕ್ರಮ ಇದಾಗಿದೆ ಎಂದರು.
ಗುರು – ಶಿಷ್ಯರ ಸಂಬಂಧ ಹೇಗೆಲ್ಲ ಇರಬಹುದು ಎಂಬುದನ್ನು ಈ ಕಾರ್ಯಕ್ರಮದ ಮೂಲಕ ಹಳೆ ವಿದ್ಯಾರ್ಥಿಗಳು ತೋರಿಸಿಕೊಟ್ಟರು, ಸುಮಾರು 4 ಗಂಟೆಗಳಿಗೂ ಹೆಚ್ಚು ಸಮಯ ನಡೆದ ಗುರುವಂದನಾ ಕಾರ್ಯಕ್ರಮ ತಮಗೆ ಪಾಠ ಕಲಿಸಿದ ಗುರುಗಳನ್ನು ವೇದಿಕೆಗೆ ಕರೆತಂದು ಸನ್ಮಾನಿಸಿ ಗುರುವಂದನೆ ಸಲ್ಲಿಸುವ ಮೂಲಕ ಈ ಕಾರ್ಯಕ್ರಮ ಹಳೇ ವಿದ್ಯಾರ್ಥಿಗಳ ಸಮಾಗಮಕ್ಕೂ ಸಾಕ್ಷಿಯಾಗಿತ್ತು, ಈ ಕಾರ್ಯಕ್ರಮ.
ದಿವ್ಯ ಸಾನಿಧ್ಯ ಪ.ಪೂ. ಮಾತೋಶ್ರೀ ಅಕ್ಕಮಹಾದೇವಿ ಅಮ್ಮನವರು ಕಮರಿಮಠ ಚಿಕ್ಕಪಡಸಲಗಿ ಡಾˌ ಎ. ಜೆ. ನ್ಯಾಮಗೌಡ ಅಧ್ಯಕ್ಷರು ಶಿವಶರಣ ಹರಳಯ್ಯ ಸ್ಮಾರಕ ಪ್ರೌಢ ಶಾಲೆ ಚಿಕ್ಕಪಡಸಲಗಿ,
ಉದ್ಘಾಟಕರಾದ ಪರಮಗೊಂಡ ದಾನಗೌಡ ಉಪಾಧ್ಯಕ್ಷರು ಸ್ಥಾನಿಕ ಆಡಳಿತ ಮಂಡಳಿ ಶಿ,ಹ, ಸ್ಮಾ, ಪ್ರೌಢ ಶಾಲೆ ಚಿಕ್ಕಪಡಸಲಗಿ, ಮುಖ್ಯ ಅತಿಥಿಗಳಾದ ಪಿ. ಎಮ್. ಪಾಟೀಲ ನಿವೃತ್ತ ಮುಖ್ಯ ಪಾಧ್ಯಾಯರು, ಬಿ. ಎಲ್. ಜಾಲೋಜಿ ಪ್ರಭಾರ ಮುಖ್ಯ ಪಾಧ್ಯಾಯರು, ಶಿಕ್ಷಕರಾದ ಈ ಕಾರ್ಯಕ್ರಮ ಭಾಗವಹಿಸಿದ್ದರು. ಇದೆ ಸಂಧರ್ಭದಲ್ಲಿ ಗ್ರಾಮಸ್ಥರುˌ ಸಾರ್ವಜನಿಕರುˌ ಶಾಲೆಯಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳು ಸೇರಿದಂತೆ ಇತರರಿದ್ದರು.
ಪೋಟೊ ವಿವರ : ಗದುಗಿನ ಜಗದ್ಗುರು ತೊಂಟದಾರ್ಯ ವಿದ್ಯಾಪೀಠದ
ಶಿವಶರಣ ಹರಳಯ್ಯ ಸ್ಮಾರಕ ಪ್ರೌಢ ಶಾಲೆ ಚಿಕ್ಕಪಡಸಲಗಿಯಲ್ಲಿ 1999-2002 ನೇ ಸಾಲಿನ ಎಸ್, ಎಸ್, ಎಲ್, ಸಿ ವಿದ್ಯಾರ್ಥಿಗಳು ಹಮ್ಮಿಕೊಂಡ ಗುರುವಂದನಾ ಹಾಗೂ ಸ್ನೇಹ ಸಂಗಮ ಕಾರ್ಯಕ್ರಮ ಉದ್ಘಾಟಿಸಿದರು.

