ಉದಯರಶ್ಮಿ ದಿನಪತ್ರಿಕೆ
ಜಮಖಂಡಿ : ತಾಲೂಕಿನ ಚಿಕ್ಕಪಡಸಲಗಿ ಪುನರ್ವಸತಿ ಕೇಂದ್ರದಲ್ಲಿ ಹೊಸದಾಗಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾರಂಭಿಸಲು ಕೆಪಿಸಿಸಿ ಉಪಾಧ್ಯಕ್ಷ, ಜಮಖಂಡಿ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರಿಗೆ ಮನವಿ ಸಲ್ಲಿಸಿದರು. ಕ್ಷೇತ್ರದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಚಿಕ್ಕಪಡಸಲಗಿ ಪುನರ್ವಸತಿ ಕೇಂದ್ರದಲ್ಲಿ ಸರ್ಕಾರದಿಂದ ನಿರ್ಮಾಣಗೊಂಡಿರುವ ಸುಮಾರು 12 ರೂಮಗಳ ಸುಸಜ್ಜಿತವಾದ ನೂತನ ಕಟ್ಟಡದ ಜೊತೆಗೆ 3 ಎಕರೆ ಆಟದ ಮೈದಾನ ಹೊಂದಿದೆ. ಜಿಲ್ಲೆಯ ಉಪ ನಿರ್ದೇಶಕರು ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ಖುದ್ದಾಗಿ ವೀಕ್ಷಣೆ ಮಾಡಿ, ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪ.ಪೂ) ಬೆಂಗಳೂರು ಇವರಿಗೆ ವರದಿಯನ್ನು ಸಲ್ಲಿಸಿರುತ್ತಾರೆ, ಕಾರಣ ತಾವುಗಳು ಚಿಕ್ಕಪಡಸಲಗಿ ಪುನರ್ ವಸತಿ ಕೇಂದ್ರದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಾಪಿಸಲು ಅತ್ಯವಶ್ಯವಾಗಿರುವುದರಿಂದ ತಾವುಗಳು ಅನುಮತಿ ಕೊಡಬೇಕೆಂದು ಮನವಿ ಮಾಡಿದರು. ಜೋತೆಗೆ ಚಿಕ್ಕಪಡಸಲಗಿ ಗ್ರಾಮಸ್ಥರಾದ ಪರಮಗೊಂಡ ದಾನಗೌಡˌ ಗಿರಮಲ್ಲ ನಂದಗಾಂವˌ ಮಲ್ಲು ಪಟ್ಟಣಶೆಟ್ಟಿˌ ಸದಾಶಿವ ದಾನಗೌಡˌ ಮಲ್ಕಯ್ಯ ಮಠಪತಿˌ ಸೇರಿದಂತೆ ಇತರರಿದ್ದರು.

