ಉದಯರಶ್ಮಿ ದಿನಪತ್ರಿಕೆ
ವಿಜಯಪುರ:ಸಾರ್ವಜನಿಕರಲ್ಲಿ ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇದೇ ಫೆಬ್ರವರಿ 9 ರಿಂದ 13 ರವರೆಗೆ ಜಿಲ್ಲೆಯಲ್ಲಿ ಐದು ದಿನಗಳವರೆಗೆ ಆರ್ಥಿಕ ಸಾಕ್ಷರತಾ ಸಪ್ತಾಹ ಹಮ್ಮಿಕೊಳ್ಳಲಾಗಿದೆ.
ಹಣಕಾಸು ಸೇವೆಗಳ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ ) ನಿರ್ದೇಶನದಂತೆ ಜಿಲ್ಲಾ ಮಾರ್ಗದರ್ಶಿ (ಲೀಡ್ ಬ್ಯಾಂಕ್) ಕೆನರಾ ಬ್ಯಾಂಕ್ ಈ ಕಾರ್ಯಕ್ರಮ ಆಯೋಜಿಸಿದ್ದು ಇದೇ ಫೆಬ್ರವರಿ 9 ರಂದು ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ನಿರ್ವಹಣಾಧಿಕಾರಿಗಳಾದ ಶ ರಿಷಿ ಆನಂದ ಅವರು ಸಪ್ತಾಹದ ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ಅಧಿಕೃತ ಚಾಲನೆ ನೀಡಲಿದ್ದಾರೆ.
ಜಿಲ್ಲೆಯಾದ್ಯಂತ ಇರುವ 337 ಬ್ಯಾಂಕುಗಳ ಶಾಖೆಗಳಲ್ಲಿಯೂ ಆರ್ಥಿಕ ಸಾಕ್ಷರತಾ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
ಕೆವೈಸಿ( ನಿಮ್ಮ ಗ್ರಾಹಕರನ್ನು ತಿಳಿಯಿರಿ ) ಎನ್ನುವದು ಆರ್ಥಿಕ ಸಾಪ್ತಹದ ವಿಷಯವಾಗಿರುವದು. ಕೆವೈಸಿ ಪ್ರಾಮುಖ್ಯತೆ, ಅಧಿಕೃತ ದಾಖಲೆಗಳ ಬಗ್ಗೆ ವಿವರ, ಕೆವೈಸಿ ಸಿಕೆವೈಸಿ, ಈಕೆವೈಸಿ ಬಗ್ಗೆ ತಿಳಿಸಿಕೊಡಲಾಗುವುದು ಎಂದು ಜಿಲ್ಲಾ ಅಗ್ರಣಿ ಬ್ಯಾಂಕ್ ಮುಖ್ಯ ಪ್ರಬಂಧಕರಾದ ಬಿ ಸಿದ್ದಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
