ಉದಯರಶ್ಮಿ ದಿನಪತ್ರಿಕೆ ಜಮಖಂಡಿ : ಶಾಲಾ ಜೀವನವು ವ್ಯಕ್ತಿತ್ವ ರೂಪಿಸಿಕೊಳ್ಳುವ ಸುಂದರ ಘಟ್ಟ. ಕೇವಲ ಅಂಕ ಗಳಿಕೆ ಶಿಕ್ಷಣವಲ್ಲ, ನೈತಿಕ ಮೌಲ್ಯಗಳೊಂದಿಗೆ ಸಂಸ್ಕಾರವಂತರಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಹಸಿಲ್ದಾರ್ ಅನೀಲ್ ಬಡಿಗೇರ್ ಹೇಳಿದರು ಹೇಳಿದರು.ಜಮಖಂಡಿ ತಾಲೂಕಿನ ತುಬಚಿ ಗ್ರಾಮದ ರಾಣಿ ಚೆನ್ನಮ್ಮ ಹಿರಿಯ ಪ್ರಾಥಮಿಕ ಶಾಲೆಯ 21ನೇ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಎನ್ನುವುದು ನಿಂತ ನೀರಲ್ಲ, ಅದು ನಿರಂತರ ಪ್ರಕ್ರಿಯೆ. ಶಿಕ್ಷಕರು ಮತ್ತು ಪೋಷಕರು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಡಿಜಿಟಲ್ ಯುಗದಲ್ಲಿ ಮಕ್ಕಳು ತಂತ್ರಜ್ಞಾನದ ಸದ್ಬಳಕೆ ಮಾಡಿಕೊಂಡು ಜ್ಞಾನವಂತರಾಗಬೇಕು,” ಎಂದು ಹೇಳಿದರು.ಮಾಜಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬಿ.ಎಸ್. ಸಿಂಧೂರ ಮಾತನಾಡಿ,”ಗ್ರಾಮೀಣ ಭಾಗದ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಶಾಲಾ ವಾರ್ಷಿಕೋತ್ಸವಗಳ ಮುಖ್ಯ ಉದ್ದೇಶ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಈ ಶಾಲೆಯ ಅಭಿವೃದ್ಧಿಗೆ ನನ್ನ ಸಂಪೂರ್ಣ ಸಹಕಾರವಿದೆ.” ಎಂದರು.ಡಾ. ಸದಾಶಿವ ಬಾಲಪ್ಪನವರ ಮಾತನಾಡಿ ”ವಿದ್ಯಾರ್ಥಿಗಳು ಗುರಿ ದೊಡ್ಡದಾಗಿಟ್ಟುಕೊಂಡು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು. ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು..
ಸಾನಿಧ್ಯ ವಹಿಸಿ ತುಬಚಿ ಹಾಗೂ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಆಶೀರ್ವಚನ ನೀಡಿದರು .
ಸಭಾ ಕಾರ್ಯಕ್ರಮದ ನಂತರ ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನಂತರ, ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗುರುರಾಜ ಕುಲಕರ್ಣಿ, ಮಲ್ಲಿಕಾರ್ಜುನ ಪಾಟೀಲ,ಬಸವರಾಜ ತೇಲಿ, ಶಿವಲಿಂಗಪ್ಪ ಕಿತ್ತೂರು, ಜಿನಗೌಡ ಪಾಟೀಲ, ವಸಂತರಾವ ಕುಲಕರ್ಣಿ, ನಾರಾಯಣ ಅದ್ಯಾಪಕ, ರಮೇಶ್ ಕಣಬೂರ ಅನೇಕರು ಉಪಸ್ಥಿತರಿದ್ದರು ಆನಂದ ದೂಪದಾಳ ಸ್ವಾಗತಿಸಿದರು, ಅಕ್ಷತಾ ಬಿರಾದಾರ ನಿರೂಪಿಸಿದರು.

