ಮುದ್ದೇಬಿಹಾಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಉಪನಿರ್ದೇಶಕರ ಕಚೇರಿಯ ವತಿಯಿಂದ ವಿಜಯಪುರದಲ್ಲಿ ನಡೆದ ಜಿಲ್ಲಾಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ ತಾಲೂಕಿನ ಬಿದರಕುಂದಿ ಗ್ರಾಮದ ಆದರ್ಶ ವಿದ್ಯಾಲಯದ ೯ನೇ ತರಗತಿಯ ವಿದ್ಯಾರ್ಥಿ ಸಾಗರ ಚಿಮ್ಮಲಗಿ ಗುಂಡು ಎಸೆತ ಮತ್ತು ಬಲ್ಲೆ ಎಸೆತ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಶಾಲೆಯ ಮುಖ್ಯ ಗುರುಮಾತೆ ನೀಲಮ್ಮ ತೆಗ್ಗಿನಮಠ, ದೈಹಿಕ ಶಿಕ್ಷಕ ಬಿ.ಕೆ.ನಾಯಕ ಸೇರಿದಂತೆ ಎಲ್ಲ ಶಿಕ್ಷಕರು, ಸಿಬ್ಬಂದಿ ಹಾಗೂ ಪೋಷಕರು ರಾಜ್ಯದಲ್ಲಿಯೂ ಸಾಗರ ಮಿಂಚುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
Related Posts
Add A Comment