ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ/ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದು, ಅವುಗಳ ಈಡೇರಿಕೆಗಾಗಿ ಮಾ.೧೧ ರಿಂದ ೧೫ರವರೆಗೆ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳುವ ನಿರ್ಧಾರವನ್ನು ಕೈಗೊಂಡಿದ್ದು, ಶಾಸಕ ಅಶೋಕ ಮನಗೂಳಿ ಹಾಗೂ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದು ನೌಕರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ ತಿಳಿಸಿದರು.
ಈ ಸಂದರ್ಭದಲ್ಲಿ ಆಲಮೇಲ ತಾಲೂಕ ಅಧ್ಯಕ್ಷ ರವಿ ಬಿರಾದಾರ, ದೇವರ ಹಿಪ್ಪರಗಿ ತಾಲೂಕ ನೌಕರರ ಸಂಘದ ಅಧ್ಯಕ್ಷ ಸಿ.ಬಿ.ಗಡಿಗಿ ಸಿಂದಗಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ದೇಶಮುಖ, ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ.ಮಹಾಂತೇಶ ಹಿರೇಮಠ ಪದಾಧಿಕಾರಿಗಳಾದ ಪಿ.ವಾಯ್.ಚೌಡಕಿ, ಸಿದ್ದು ಕಡಬಗಾವ, ಸಂತೋಷ್ ಕಾಳಶೆಟ್ಟಿ, ಭಾಷಾಸಾಬ್ ನದಾಫ್, ಪಂಡಿತ್ ವಾಷಿನ್, ಜಗದೀಶ ಡೋಣೂರ ರಾಜಶೇಖರ ನರಗೋದಿ, ಚಂದಕವಾಟೆ ವೈದ್ಯಾಧಿಕಾರಿ ಡಾ.ಗುಣಕಿ, ಡಾ.ವಿದ್ಯಾ ಹಿರೇಪೇಟ, ಸುರೇಶ ಬಬಲೇಶ್ವರ, ಅಶೋಕ ಕಡ್ಲಗೊಂಡ, ಲವ ಗಾಣಿಗೇರ, ಪ್ರಕಾಶ ನಾಯಕ ಸೇರಿದಂತೆ ಅನೇಕರು ಇದ್ದರು.
“ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ವೃಂದಗಳಲ್ಲಿ ಒಟ್ಟು ೩೬,೩೯೭ ಅಧಿಕಾರಿ/ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದ ೬ಕೋಟಿ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ. ಪ್ರಸ್ತುತ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ನೌಕರರ ಸಂಖ್ಯೆ, ವಯೋನಿವೃತ್ತಿ ಮತ್ತು ಇತರೆ ಕಾರಣಗಳಿಂದಾಗಿ ಕಡಿಮೆಯಾಗುತ್ತಿದ್ದು, ಖಾಲಿ ಹುದ್ದೆಗಳ ಭರ್ತಿಯಾಗದೇ ಇರುವುದರಿಂದ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ-ನೌಕರರ ಮೇಲೆ ಹೆಚ್ಚಿನ ಕಾರ್ಯ ಒತ್ತಡ ಉಂಟಾಗುತ್ತಿದ್ದರೂ ಸರಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿಲ್ಲ.”
– ಅಶೋಕ ತೆಲ್ಲೂರ
ನೌಕರರ ಸಂಘದ ತಾಲೂಕಾಧ್ಯಕ್ಷರು

