Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ

ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ

ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ
(ರಾಜ್ಯ ) ಜಿಲ್ಲೆ

ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯಾವ ಧರ್ಮವೂ ಧ್ವೇಷ ಬೋಧಿಸಲ್ಲ | ಸಮಾಜದ ಬಡವರು ಮತ್ತು ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ | ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ

ಮೈಸೂರು: ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಂಬುವವನು ನಾನು. ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ, ಬದಲಾಗಿ ಪ್ರೀತಿಯನ್ನೇ ಕಲಿಸುತ್ತದೆ. ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ ಹಾಗೂ ಸಮಾಜದ ಬಡವರು ಮತ್ತು ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಮಿಕವಾಗಿ ನುಡಿದರು.
ಮೈಸೂರು ತಾಲ್ಲೂಕಿನ ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಆದಿಶಕ್ತತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಕುಂಭಕಳಶದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಅಧ್ಯಾತ್ಮ, ಸಾಮಾಜಿಕ ನ್ಯಾಯ ಮತ್ತು ತಮ್ಮ ರಾಜಕೀಯ ಜೀವನದ ಏರಿಳಿತಗಳ ಕುರಿತು ಮನಬಿಚ್ಚಿ ಮಾತನಾಡಿದರು. ಬಾಲ್ಯದ ನೆನಪುಗಳನ್ನು ಮೆಲುಕು ಹಾಕುತ್ತಾ, ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನತೆ ನೀಡಿದ ಬೆಂಬಲವೇ ತಮ್ಮನ್ನು ಇಂದು ಈ ಉನ್ನತ ಸ್ಥಾನಕ್ಕೆ ತಂದು ನಿಲ್ಲಿಸಿದೆ ಎಂದು ಕೃತಜ್ಞತೆ ಸಲ್ಲಿಸಿದರು.
ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ, ದೇವರು ದೇಗುಲಗಳಲ್ಲಿ ಇರುತ್ತಾರೆಂಬುದು ನಮ್ಮ ನಂಬಿಕೆ. ದೇವರ ಆರಾಧನೆಯಿಂದ ಒಳಿತಾಗುತ್ತದೆ ಎಂಬ ನಂಬಿಕೆಯನ್ನು ನಾನು ವಿರೋಧಿಸುವುದಿಲ್ಲ. ಆದರೆ ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಾನು ನಂಬುವವನು ಮತ್ತು ಆಚರಿಸುವವನು. 1978 ರಲ್ಲಿ ತಾಲ್ಲೂಕು ಅಭಿವೃದ್ಧಿ ಮಂಡಳಿಯ ಪ್ರಥಮ ಬಾರಿಗೆ ಚುನಾವಣೆಯಲ್ಲಿ ಸ್ಪರ್ದಿಸಿದಾಗ ಇಲ್ಲಿನ ಜನರ ಆಶೀರ್ವಾದ ನನಗೆ ದೊರೆತಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಜನರ ಸಹಕಾರ ದೊರೆಯಿತು. ಮೈಸೂರು ತಾಲ್ಲೂಕಿನ ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರ ಆಶೀರ್ವಾದದಿಂದ ಈವರೆಗೆ 8 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಪಿಲ್ಲಹಳ್ಳಿ ಜನರ ಪ್ರೀತಿಯಿಂದಾಗಿ ಇಲ್ಲಿನ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ್ದೇನೆ. 1978 ರಿಂದ ಇಂದಿನವರೆಗೂ ಹಾಗೂ ಮುಂದೆಯೂ ಈ ಭಾಗದ ಜನರ ಸಹಕಾರ ದೊರೆಯುವ ವಿಶ್ವಾಸವಿದೆ ಎಂದರು.

ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ

ಶ್ರೀ ದಂಡಿಮಾರಮ್ಮ ದೇವಸ್ಥಾನಕ್ಕೆ ಬಾಲ್ಯದಿಂದಲೂ ಭೇಟಿ ನೀಡುತ್ತಿದ್ದ ನೆನಪನ್ನು ಮೆಲುಕು ಹಾಕಿದ ಮುಖ್ಯಮಂತ್ರಿಗಳು, ದೇವರನ್ನು ಕಷ್ಟ ಬಂದಾಗ ನೆನಪಿಸಿಕೊಳ್ಳದೇ, ಎಲ್ಲ ಸಂದರ್ಭದಲ್ಲಿಯೂ ಸ್ಮರಿಸಬೇಕು ಎಂದರು. ‘ದೇವನೊಬ್ಬ ನಾಮ ಹಲವು’ ಎಂದು ನಂಬಿ, ದೇವರು ನಮ್ಮೊಳಗೂ ಸೇರಿದಂತೆ ಎಲ್ಲ ಕಡೆಯೂ ಇದ್ದಾನೆ. ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ. ಯಾವೊಂದು ಧರ್ಮ ಜಾತಿಗಳು ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷಿಸುವುದನ್ನು ಬೋಧಿಸುವುದಿಲ್ಲ ಎಂದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ

ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ

ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ

ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅನನ್ಯ :ರೇಣುಕಾ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ
    In (ರಾಜ್ಯ ) ಜಿಲ್ಲೆ
  • ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅನನ್ಯ :ರೇಣುಕಾ
    In (ರಾಜ್ಯ ) ಜಿಲ್ಲೆ
  • ಎಲ್ಲ ಕ್ಷೇತ್ರದಲ್ಲಿಯೂ ಸಾಧನೆಯ ನಗೆ ಬೀರಿದ ಮಹಿಳೆ :ಹಟ್ಟಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮಗಾಯನ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಆದ್ಯತೆ ಮೇರೆಗೆ ಮನರೇಗಾ ಯೋಜನೆ ಕಾಮಗಾರಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾ.೧೧ ರಿಂದ ವೈದ್ಯರ ಮುಷ್ಕರ :ಶಾಸಕರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಪಪಂ ಸಾಮಾನ್ಯ ಸಭೆಯಲ್ಲಿ ಅಯವ್ಯಯ ಕುರಿತು ಚರ್ಚೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.