Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಲುವೆ ಕೊನೆವರೆಗೆ ನೀರು ಹರಿಸಲು ಅಡ್ಡಿಪಡಿಸುವವರ ವಿರುದ್ಧ ಕಾನೂನು ಕ್ರಮ
(ರಾಜ್ಯ ) ಜಿಲ್ಲೆ

ಕಾಲುವೆ ಕೊನೆವರೆಗೆ ನೀರು ಹರಿಸಲು ಅಡ್ಡಿಪಡಿಸುವವರ ವಿರುದ್ಧ ಕಾನೂನು ಕ್ರಮ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪೊಲೀಸ್ ಮತ್ತು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಖಡಕ್ ಸೂಚನೆ

ವಿಜಯಪುರ: ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಪೂರ್ವ ಕಾಲುವೆಯ ಟೇಲ್ ಎಂಡ್(ಕೊನೆಯ ಭಾಗದ) ವರೆಗೆ ನೀರು ಹರಿಸಲು ಅಡ್ಡಿಪಡಿಸುವವರ ವಿರುದ್ಧ ಕಟ್ಟುನಿಟ್ಟಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಪೊಲೀಸ್ ಮತ್ತು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಂದು ಸೋಮವಾರ ಗೃಹ ಕಚೇರಿಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು, ಕರ್ನಾಟಕ ನೀರಾವರಿ ಇಲಾಖೆಯ ಅಧಿಕಾರಿಗಳು, ಯತ್ನಾಳ, ಜಾಲಗೇರಿ, ಇಟ್ಟಂಗಿಹಾಳ, ಲೋಹಗಾಂವ, ಸೋಮದೇವರಹಟ್ಟಿ ಮುಂತಾದ ಗ್ರಾಮಸ್ಥರೊಂದಿಗೆ ಸುದೀರ್ಘ ಸಭೆ ನಡೆಸಿದ ಸಚಿವರು ಈ ಸೂಚನೆ ನೀಡಿದ್ದಾರೆ.
ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಪೂರ್ವ ಕಾಲುವೆಗೆ ನೀರು ಹರಿಸಿದರೂ ಕಾಲುವೆಯ ಕೊನೆಯ ಭಾಗ ಟೇಲ್ ಎಂಡ್ ವರೆಗೂ ನೀರು ಸಿಗದ ಕಾರಣ ಯತ್ನಾಳ ಮತ್ತು ಇಟ್ಟಂಗಿಹಾಳ ಮುಂತಾದ ಗ್ರಾಮಗಳಿಗೆ ನೀರು ಬರುತ್ತಿಲ್ಲ. ಹಲವು ಕಡೆಗಳಲ್ಲಿ ಕೆಲವರು ನೀರು ಹರಿಸಲು ಅಡ್ಡಿ ಪಡಿಸಿದ್ದಾರೆ. ಕಾಲುವೆಗಳಿಗೂ ಹಾನಿ ಮಾಡುತ್ತಿದ್ದಾರೆ. ಬಂದ್ ಮಾಡಿರುವ ಗೇಟುಗಳನ್ನು ಕಿತ್ತಿಹಾಕಿ ನೀರು ಪಡೆಯುತ್ತಿದ್ದಾರೆ ಎಂದು ರೈತರು ಅಳಲು ತೋಡಿಕೊಂಡರು.
ಆಗ ಕೂಡಲೇ ಸ್ಪಂದಿಸಿದ ಸಚಿವರು, ಬರದ ಹಿನ್ನೆಲೆಯಲ್ಲಿ ಎಲ್ಲ ಕಡೆ ನೀರಿನ ತೊಂದರೆ ಇದೆ. ಕೇಂದ್ರ ಸರಕಾರದ ಅಸಮಂಜಸ ಮಾರ್ಗಸೂಚಿಯ ಕಾರಣ ತಿಕೋಟಾ ಬರಪೀಡಿತ ತಾಲೂಕು ಪಟ್ಟಿಗೆ ಸೇರ್ಪಡೆಯಾಗಿಲ್ಲ. ಇಂಥ ಸಂದರ್ಭದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಪ್ರತಿಯೊಬ್ಬರಿಗೂ ನ್ಯಾಯಯುತವಾಗಿ ನೀರು ಸಿಗಬೇಕಿದೆ. ಕಾಲುವೆಯ ಕೊನೆಯ ಭಾಗದವರೆಗೆ ನೀರು ಹರಿಯುವುದಕ್ಕೆ ಅಡ್ಡಿ ಮಾಡುವವರ ವಿರುದ್ಧ ಪೊಲೀಸರು ಮತ್ತು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಎಲ್ಲರಿಗೂ ನ್ಯಾಯ ಸಿಗುವಂತಾಗಬೇಕು. ಅಲ್ಲದೇ, ಕೂಡಲೇ ಪೊಲೀಸ್ ಮತ್ತು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಹಾಗೂ ರೈತ ಮುಖಡರು ಸಮಸ್ಯೆ ಉಂಟಾಗಿರುವ ಸ್ಥಳಕ್ಕೆ ತೆರಳಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಈ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ನಿಗಮದ ಅಧಿಕಾರಿಗಳು ಹಾಗೂ ರೈತ ಮುಖಂಡರು ಕಾಲುವೆಗಳ ಪರಿಶೀಲನೆಗೆ ತೆರಳಿದರು.
ಈ ಸಂದರ್ಭದಲ್ಲಿ ವಿಜಯಪುರ ಗ್ರಾಮೀಣ ಡಿವೈಎಸ್ಪಿ ಗಿರಿಮಲ್ಲ ಎಚ್.ತಳಕಟ್ಟಿ, ಸಿಪಿಐ ರಾಯಗೊಂಡ ಎನ್. ಜಾನರ, ಕರ್ನಾಟಕ ನೀರಾವರಿ ನಿಗಮದ ಸೂಪರಿಂಟೆಂಡೆಂಟ್ ಎಂಜಿನಿಯರ್ ಬಿ. ಆರ್. ರಾಠೋಡ, ಎಕ್ಸಿಕ್ಯೂಟಿವ್ ಎಂಜಿನಿಯರ್ ಎಸ್. ಜೆ. ಶ್ರೀನಾಥ, ಅಸಿಸ್ಟಂಟ ಎಕ್ಸಿಕ್ಯೂಟಿವ್ ಎಂಜಿನಿಯರ್ ಪ್ರವೀಣ ಹುಣಸಿಕಟ್ಟಿ, ರಾಜೇಂದ್ರ ರೂಢಗಿ, ಸಿದ್ದು ಲಾಂಡಗೆ, ರೈತ ಮುಖಂಡರು ಉಪಸ್ಥಿತರಿದ್ದರು.
ಇದೇ ವೇಳೆ ಸಚಿವ ಎಂ. ಬಿ. ಪಾಟೀಲ ಅವರನ್ನು ಭೇಟಿ ಮಾಡಿದ ಭಾರತೀಯ ಕಿಸಾನ್ ಸಂಘದ ರಾಜ್ಯ ಉಪಾಧ್ಯಕ್ಷ ಗುರುನಾಥ ಬಗಲಿ, ಜಿಲ್ಲಾಧ್ಯಕ್ಷ ಮಲ್ಲನಗೌಡ ಪಾಟೀಲ ಮುಂತಾದ ಮುಖಂಡರು ಇಂಡಿ ತಾಲೂಕಿನ ತಡವಲಗಾ ಕಾಲುವೆಗೆ ನೀರು ಹರಿಸಬೇಕು. ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಮನವಿ ಮಾಡಿದರು.
ರೈತರ ಮನವಿಗೆ ಸ್ಪಂದಿಸಿದ ಸಚಿವರು ಈಗಾಗಲೇ ಜಿಲ್ಲಾದ್ಯಂತ ಟೇಲ್ ಎಂಡ್ ವರೆಗೆ ಕಾಲುವೆಗಳಿಗೆ ನೀರು ಹರಿಸಲು ಸೂಚನೆ ನೀಡಿರುವುದಾಗಿ ತಿಳಿಸಿದರು.
ಇದೇ ವೇಳೆ, ವಿಜಯಪುರ ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ್ದ ರೈತರ ಸಮಸ್ಯೆ ಆಲಿಸಿದ ಸಚಿವ ಎಂ. ಬಿ. ಪಾಟೀಲ ಅವರು, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಪರಿಹಾರ ಒದಗಿಸಿದರು.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು
    In (ರಾಜ್ಯ ) ಜಿಲ್ಲೆ
  • ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು
    In ವಿಶೇಷ ಲೇಖನ
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.