ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಬಲೇಶ್ವರ ತಾಲೂಕಿನಲ್ಲಿ ಬರುವ ವಿದ್ಯುತ್ ಉಪ ಕೇಂದ್ರಗಳಿಂದ ವಿತರಣೆಯಾಗುವ ಎಲ್ಲಾ ೧೧ ಕೆ.ವ್ಹಿ ಮಾರ್ಗಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಮಾರ್ಚ್ ೧೫ರ ಬೆಳಿಗ್ಗೆ ೯ ರಿಂದ ಸಂಜೆ ೬ ಗಂಟೆ ವರೆಗೆ ಬಬಲೇಶ್ವರ ತಾಲೂಕಿನ ೧೧ ಕೆ.ವ್ಹಿ ಪಂಪಸೆಟ್ ಮಾರ್ಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಬಬಲೇಶ್ವರ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
