ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೈಗಾರಿಕಾಭಿವೃದ್ಧಿ ಆಯುಕ್ತರು, ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆಯ ನಿರ್ದೇಶಕರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀಮತಿ ಗುಂಜನ್ ಕೃಷ್ಣ ಅವರು ಮಾ.೨೦ರಂದು ಜಿಲ್ಲೆಗೆ ಆಗಮಿಸಿ,ಅಂದು ಮಧ್ಯಾಹ್ನ ೧೨ ಗಂಟೆಗೆ ಜಿಲ್ಲೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆ ನಡೆಸುವರು.ಕ್ಷೇತ್ರ ಪರಿಶೀಲನೆ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಅವರು, ಅದೇ ದಿನ ಮಧ್ಯಾಹ್ನ ೩ ಗಂಟೆಗೆ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
