Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
(ರಾಜ್ಯ ) ಜಿಲ್ಲೆ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಲ್ಲೆಲ್ಲೂ ಭಕ್ತಿ ಭಾವರಸಗಳ ಪರಿಮಳ | ಪಲ್ಲಕ್ಕಿಗಳ ಕಲರವ | ಕೃಷ್ಣೆಯ ಜಲ ಸಿಂಚನದಲ್ಲಿ ದೈವ ಪಲ್ಲಕ್ಕಿಗಳ ಪುಣ್ಯಸ್ನಾನ

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಬುಧವಾರ ಬೆಳ್ಳಂಬೆಳಿಗ್ಗೆ ನೂರಾರು ದೇವ, ದೇವತೆಗಳ ಪಲ್ಲಕ್ಕಿಗಳ ಮಹಾಪೂರವೇ ಹರಿದು ಬಂದವು. ಕೃಷ್ಣಾ ನದಿ ತೀರದತ್ತ ಲಗ್ಗೆಯಿರಿಸಿ ಭಕ್ತಿ ಭಾವ ರಸಗಳ ಪರಿಮಳ ಬೀರಿದವು.
ಎಲ್ಲೆಲ್ಲೂ ಪಲ್ಲಕ್ಕಿಗಳ ಕಲರವ. ಕೃಷ್ಣೆಯ ಪವಿತ್ರ ಜಲ ಸಿಂಚನದಲ್ಲಿ ದೈವ ಪಲ್ಲಕ್ಕಿಗಳ ಪುಣ್ಯಸ್ನಾನ ನೋಡುವುದೇ ಒಂದು ಸುಂದರ ಅನುಭವದಂತಿತ್ತು. ಡೊಳ್ಳಿನ ನಿನಾದ. ಸಹಸ್ರಾರು ಜನರು ಪಲ್ಲಕ್ಕಿಯಲ್ಲಿ ದೇವರ ಮೂರ್ತಿ ತರುತ್ತಿರುವ ದೃಶ್ಯ, ಪಲ್ಲಕ್ಕಿಗಳ ಸ್ನಾನ, ಗುಂಪಾಗಿ ಅಡುಗೆ ಮಾಡಿ, ನೈವೇದ್ಯ ಸಮರ್ಪಿಸುವ ದೃಶ್ಯ ಕಂಡುಬಂದಿತು. ಭಾರತೀಯ ಪರಂಪರೆಯ ಪ್ರಕಾರ ಯುಗಾದಿಯಿಂದ ಹೊಸ ವರ್ಷ ಆರಂಭ. ಯುಗಾದಿಯು ವರ್ಷದ ಮೊದಲ ಹಬ್ಬ. ಧಾರ್ಮಿಕ ಚೌಕಟ್ಟಿನಲ್ಲಿ ವಿಶೇಷ ಮಹತ್ವ ಹೊಂದಿರುವ ಈ ದಿನ ಹೊಸ ವರ್ಷಕ್ಕೆ ಮುನ್ನುಡಿ ಬರೆದಿದೆ. ಹಾಗಾಗಿ ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಲ್ಲಿ ದೇವರ ಉತ್ಸವ ಮೂರ್ತಿಗಳಿಗೆ ಸ್ನಾನ ಮಾಡಿಸುವುದು ಉತ್ತರ ಕರ್ನಾಟಕದ ಸಂಪ್ರದಾಯ. ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವಿವಿ ಗ್ರಾಮಗಳ ದೇವರ ಉತ್ಸವ ಮೂರ್ತಿಗಳನ್ನು, ಪಲ್ಲಕ್ಕಿಗಳನ್ನು ಊರಿನ ಜನರು ಸೇರಿ ಡೊಳ್ಳು ಬಾರಿಸುತ್ತ ಆಲಮಟ್ಟಿ ಅಣೆಕಟ್ಟೆಗೆ ಆಗಮಿಸಿದ್ದರು. ನದಿಯ ಎರಡು ದಂಡೆಯ ಮೇಲೆ ಛತ್ರಿ, ಚಾಮರ, ಪಲ್ಲಕ್ಕಿಗಳ ಸಂಭ್ರಮ ಮನೆ ಮಾಡಿತ್ತು. ಕಳಶಗಳ ಮೆರವಣಿಗೆ, ಡೊಳ್ಳು ಕುಣಿತ, ಹಲಗೆ ವಾದನ,ಕೊಂಬು ಊದುವುದು ಸೇರಿದಂತೆ ನಾನಾ ಬಗೆಯ ಸದ್ದುಗಳು ಮಾರ್ಧನಿಸಿದವು. ಭಕ್ತಿಯ ಭಾವುಕತೆಯಲ್ಲಿ ತೇಲಿಸಿದವು. ಅಮಾವಾಸ್ಯೆ ಮುನ್ನಾ ದಿನ ರಾತ್ರಿ ಒಂದು ದಿನ ವಸತಿ ಇದ್ದು, ಕೃಷ್ಣೆಯಲ್ಲಿ ಯುಗಾದಿ ಅಮಾವಾಸ್ಯೆ ಇಲ್ಲವೇ ಯುಗಾದಿ ಪಾಡ್ಯ ದಿನದಂದು ಮೂರ್ತಿಗಳಿಗೆ ಸ್ನಾನ ಮಾಡಿಸಿ, ತಾವೂ ಸ್ನಾನ ಮಾಡಿ ಮರಳಿ ಹೋಗುತ್ತಾರೆ ಭಕ್ತರು. ಈ ಸಂಪ್ರದಾಯಕ್ಕೆ ಸುಮಾರು ಆರು ದಶಕಗಳ ಇತಿಹಾಸವಿದೆ.ಇಂಡಿ, ಜಮಖಂಡಿ, ಸಿಂದಗಿ, ಬಾಗೇವಾಡಿ, ಮುದ್ದೇಬಿಹಾಳ, ಬಾಗಲಕೋಟೆ, ಬೀಳಗಿ ಸೇರಿ ಅನೇಕ ಗ್ರಾಮಗಳ ದೇವರು ಆಲಮಟ್ಟಿಗೆ ಬರುವುದು ಹಿಂದಿನಿಂದ ಬಂದ ವಾಡಿಕೆ. ಅಮಾವಾಸ್ಯೆ ದಿನ ಪಲ್ಲಕ್ಕಿಗಳನ್ನು ಕೃಷ್ಣೆಯ ಪವಿತ್ರ ಜಲದಿಂದ ಪಾವನಗೊಳಿಸಿ ಪೂಜಿಸಲಾಯಿತು. ಜಾತಿ ಭೇದವಿಲ್ಲದೇ ಎಲ್ಲ ಜಾತಿಯ ದೇವರು ಇಲ್ಲಿ ಆಗಮಿಸಿದ್ದು ವಿಶೇಷ. ಬಂದ ಯುವಕ, ಯುವತಿಯರು, ಹಿರಿಯರೆಲ್ಲರೂ ಕಷ್ಣೆಯಲ್ಲಿ ಸ್ನಾನ ಮಾಡಿ, ಮಡಿಯಲ್ಲಿಯೇ ದೇವರ ಮೂರ್ತಿಶುಚಿಗೊಳಿಸಿ ನಂತರ ಪಲ್ಲಕ್ಕಿಗಳನ್ನು ಹೂವಿನಿಂದ ಅಲಂಕರಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ

ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೦೭ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ಎಸ್‌ಎಸ್‌ಎಲ್‌ಸಿಪರೀಕ್ಷಾ ಕೇಂದ್ರಗಳಿಗೆ ಡಿಸಿ ಡಾ.ಆನಂದ ಕೆ. ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.