Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
(ರಾಜ್ಯ ) ಜಿಲ್ಲೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮನೆಯೇ ಮೊದಲ ಪಾಠಶಾಲೆ, ತಾಯಿ ಮೊದಲ ಗುರು ಎನ್ನುವಂತೆ, ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರಗಳ ಮೌಲ್ಯಧಾರಣೆ ಮಾಡುವಲ್ಲಿ ತಾಯಿ ಪಾತ್ರ ಅಮೂಲ್ಯವಾದುದು. ಪ್ರತಿ ಕುಟುಂಬ, ಸಮಾಜ ಮತ್ತು ರಾಷ್ಟ್ರ ಅಭಿವೃದ್ಧಿ ಸಾಧಿಸಬೇಕಾದರೆ, ಮಹಿಳೆಯರ ಪಾತ್ರ ಪ್ರಮುಖವಾಗಿದೆ. ನಮಗೆಲ್ಲ ಕಿತ್ತೂರು ಚೆನ್ನಮ್ಮ, ಓನಕೆ ಒಬ್ಬವ್ವ, ಝಾನ್ಸಿ ರಾಣಿ ಲಕ್ಷ್ಮಿ, ಜೀಮಾ ಮಾತಾ ಇವರಲ್ಲರ ರಾಷ್ಟ್ರಭಕ್ತಿ-ದೇಶಪ್ರೇಮ ನಮಗೆಲ್ಲ ಆದರ್ಶವಾಗಬೇಕು ಎಂದು ಎಕ್ಸಲಂಟ್ ಕಾಲೇಜಿನ ಪ್ರಾಚಾರ್ಯ ಶ್ರೀ ಮಂಜುನಾಥ ಜುನಗೊಂಡ ಅವರು ಅಭಿಪ್ರಾಯಪಟ್ಟರು.
ಅವರು ನಗರದ ಅಥಣಿ ರಸ್ತೆಯ ಅಲ್-ಅಮೀನ ಆಸ್ಪತ್ರೆಯ ಎದುರಿಗೆ ಇರುವ ಲಕ್ಷ್ಮಿ ದೇವಸ್ಥಾನದ ೩ ನೇಯ ವರ್ಷದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ “ಆಧುನಿಕ ಜಗತ್ತಿನಲ್ಲಿ ಸಂಸ್ಕೃತಿ-ಸAಸ್ಕಾರ ಉಳಿಸುವಲ್ಲಿ ಮಹಿಳೆಯರ ಪಾತ್ರ” ವಿಷಯ ಕುರಿತು ಉಪನ್ಯಾಸ ನೀಡಿ ಮಾತನಾಡುತ್ತಿದ್ದರು.
ಅವರು ಮಾತನಾಡುತ್ತಾ, ನಮ್ಮ ಜನಪದ ಸಂಸ್ಕೃತಿ ಶ್ರೀಮಂತವಾಗಿದ್ದು, ಜಾನಪದ, ಒಗಟು, ಕಲೆ, ಸಂಸ್ಕೃತಿ, ಹಾಸ್ಯ, ಬೀಸುವ ಕಲ್ಲಿನ ಪದ ಮತ್ತು ಗರತಿ ಹಾಡುಗಳ ನಮ್ಮ ಭವ್ಯ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿವೆ. ಇಂದಿನ ನಾಗರಿಕ ಅಕ್ಷರ ಜಗತ್ತಿನಲ್ಲಿಯೂ ಕೂಡಾ ಜನಪದ ಹಾಡುಗಳು ಉಳಿದಿವೆ ಎಂದರೆ ಅವಳ ಶ್ರೇಷ್ಠತೆಯೇ ಕಾರಣ ಎಂದು ಹೇಳಿದರು. ಇಂದಿನ ಆಧುನಿಕ ಯುಗದಲ್ಲಿ ಯುವ ಜನತೆ ಮೋಬೈಲ್ ಎಂಬ ಫೋಬಿಯಾದಲ್ಲಿ ಅಮೂಲ್ಯವಾದ ಸಮಯವನ್ನು ವೃಥಾ ಕಾಲಹರಣ ಮಾಡುತ್ತಿರುವದು ಆತಂಕಕಾರಿ ಸಂಗತಿ. ಯುವಜನತೆ ಬದುಕಿನ ಮೂಲ ಬೇರು ಎಂದೇ ಕರೆಸಿಕೊಳ್ಳುವ ಜನಪದ ಸಂಸ್ಕೃತಿಯನ್ನು ತಿಳಿದುಕೊಂಡು ಸಾಹಿತ್ಯಾಭಿಮಾನವನ್ನು ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ತಾಯಂದಿರು ಮಕ್ಕಳಲ್ಲಿ ಭಗತಸಿಂಗ್, ಸುಭಾಸಚಂದ್ರ ಭೋಸ ಮತ್ತು ಸ್ವಾಮಿ ವಿವೇಕಾನಂದರ ರಾಷ್ಟçಭಕ್ತಿ ಮತ್ತು ದೇಶಕ್ಕಗಿ ಸಮರ್ಪಣಾ ಭಾವದಂತಹ ಗುಣಗಳನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಣೆ ಮಾಡಬೇಕಾಗಿದೆ. ನಮ್ಮಂತೆ ಸಾಮಾನ್ಯರಾಗಿದ್ದ ಮಹಾ ಪುರುಷರ ತತ್ವ-ಸಿದ್ದಾಂತ, ಜೀವನ-ಮೌಲ್ಯ ಮತ್ತು ರಾಷ್ಟ್ರಕ್ಕೆ ನೀಡಿದ ಕೊಡುಗೆಗಳನ್ನು ನಾವೆಲ್ಲರೂ ಆದರ್ಶವನ್ನಾಗಿಟ್ಟುಕೊಳ್ಳಬೇಕೆಂದು ಹೇಳಿದರು. ಕಾರ್ಯಕ್ರಮದಲ್ಲಿ ಶ್ರೀ ಎ.ಬಿ.ಬಿರಾದಾರ, ತುಳಜಪ್ಪ ಕಟ್ಟಿಮನಿ, ಬಸವರಾಜ ಅಂಕಲಗಿ, ವಿಠ್ಠಲ ಅಥರ್ಗಾ, ಹಾಗೂ ಪ್ರಫುಲ ನಿಂಬಾಳಕರ ಇನ್ನಿತರರು ಸಹ ವೇದಿಕೆಯ ಮೇಲಿದ್ದರು.
ಈ ಕಾರ್ಯಕ್ರಮದಲ್ಲಿ ಹಿರಿಯರಾದ ಬಸವರಾಜ ಕುಂಬಾರ, ರಾಜಶೇಖರ ಉಮರಾಣಿ, ಪ್ರೊ. ಎಂ.ಎಸ್.ಖೊದ್ನಾಪೂರ, ಡಾ. ರಾಜಕುಮಾರ ಜೊಳ್ಳಿ, ಕಲಾವತಿ ಬಿದರಿ, ವಿಜಯಲಕ್ಷ್ಮಿ ಪಾಟೀಲ, ಶಾಲಿನಿ ಹೂಗಾರ, ಅಂಬಿಕಾ ರಜಪೂತ, ಸರೋಜಾ ಬಾಗಲಕೋಟ, ಲಕ್ಷ್ಮಿ ಕುಂಬಾರ, ಕೀರ್ತಿ ಮಠಪತಿ, ಭವಾನಿ ಜಾಧವ ಇನ್ನಿತರರು ಸಹ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ನವರಸಪುರದ ವಿವಿಧ ಬಡಾವಣೆಗಳ ಮಕ್ಕಳು, ಮಹಿಳೆಯರು, ಯುವಕರು ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.