Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
(ರಾಜ್ಯ ) ಜಿಲ್ಲೆ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾರತ ಕಲೆ ಮತ್ತು ಸಂಸ್ಕೃತಿಯ ತವರೂರು. ಅನೇಕತೆಯಲ್ಲಿ ಏಕತೆ ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟ ರಾಷ್ಟ್ರ ನಮ್ಮದು. ಹಲವು ಸಂಸ್ಕೃತಿ, ಭಾಷೆ, ಧರ್ಮ, ವೇಷ-ಭೂಷಣ ಮತ್ತು ಜಾನಪದ ಶೈಲಿ, ಜೀವನ-ಕಸುಬು ಹೀಗೆ ವೈವಿಧ್ಯಮಯ ಮತ್ತು ವೈಶಿಷ್ಟ್ಯಪೂರ್ಣವಾದ ಪವಿತ್ರ ಭೂಮಿ ನಮ್ಮದು. ಅದರಲ್ಲಿ ವಿಶೇಷವಾಗಿ ಭವ್ಯ ಪರಂಪರೆ, ಇತಿಹಾಸ ಹಾಗೂ ಸಾಂಸ್ಕೃತಿಕ ನೆಲೆಗಟ್ಟಿನ ಹಿನ್ನೆಲೆ ಹೊಂದಿದ ನಮ್ಮ ಕರ್ನಾಟಕ ರಾಜ್ಯದಲ್ಲಿ ಸೋಬಾನ ಪದ, ಲಾಲಿ ಹಾಡು, ಬೀಸುವ ಕಲ್ಲಿನ ಪದ, ಹಂತಿ ಪದ, ಗೀಗಿ ಪದ, ತೊಟ್ಟೀಲು ಕಾರ್ಯಕ್ರಮದಲ್ಲಿ ಹಾಡುವ ಅನೇಕ ಗರತಿಯ ಹಾಡುಗಳು ವಿಶಿಷ್ಟ ಹಾಗೂ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಾಧ್ಯಾಪಕ ಗುರುಬಸಯ್ಯ ಹಿರೇಮಠ ಅವರು ಅಭಿಪ್ರಾಯಪಟ್ಟರು.
ಅವರು ನಗರದ ಅಥಣಿ ರಸ್ತೆಯಲ್ಲಿರುವ ಅಲ್-ಅಮೀನ್ ಆಸ್ಪತ್ರೆಯ ಎದುರಿಗೆ ಇರುವ ಹವಾಲ್ದಾರ ಕಾಲನಿಯ ಲಕ್ಷ್ಮಿ ದೇವಸ್ಥಾನದ ೩ ನೇಯ ವರ್ಷದ ಜಾತ್ರಾ ಮಹೋತ್ಸವದ “ಜನಪದ ಸಾಹಿತ್ಯಕ್ಕೆ ಸ್ತ್ರೀ ಕೊಡುಗೆಗಳು” ವಿಷಯ ಕುರಿತು ಉಪನ್ಯಾಸ ನೀಡಿ ಮಾತನಾಡುತ್ತಿದ್ದರು.
ತಾಯಿಯಾದವಳು ಮದುವೆಯಾಗಿ ಗಂಡನ ಮನೆ ಸೇರುತ್ತಿರುವ ತಮ್ಮ ಮಗಳಿಗೆ ಗಂಡನ ಮನೆಯಲ್ಲಿ ಹೇಗೆ ಇರಬೇಕು, ಗಂಡನ ಮನೆ ಮತ್ತು ತವರು ಮನೆಯ ಗೌರವ ಮತ್ತು ಮನೆಯಲ್ಲಿ ಎಲ್ಲರ ಪ್ರೀತಿಗೆ ಪಾತ್ರರಾಗಿ ಇದ್ದು ತಂದೆ-ತಾಯಿಯರ ಹೆಸರು ತರಬೇಕೆಂಬ ಕಿವಿಮಾತು ಹೇಳುತ್ತಿದ್ದಳು. ಗರತಿಯ ಹಾಡುಗಳು ನಮ್ಮ ನಾಡಿನ ಸ್ತ್ರೀ ಜೀವನದ ಒಳಗನ್ನಡಿ. ಅದು ನಮ್ಮ ಹೆಣ್ಣು ಮಕ್ಕಳ ಹೃದಯದ ಪಡಿಗನ್ನಡಿ ಇದ್ದಂತೆ. ಅದರಲ್ಲಿ ತಾಯಿ-ಮಗಳ, ಅಣ್ಣ-ತಮ್ಮಂದಿರ ನಡುವಿನ ಮಮತೆಯ ಮಾಧುರ್ಯ, ಗಂಡ-ಹೆಂಡಿರ ಸರಸ-ವಿರಸ ಮತ್ತು ಪ್ರೇಮ ಸತ್ವವು ಹಾಗೂ ಹೆಣ್ಣಿನ ತ್ಯಾಗ-ಬುದ್ಧಿಯು ತುಂಬಿ ತುಳುಕುತ್ತಿರುತ್ತದೆ. ಗರತಿಯ ಹಾಡುಗಳು ಹೆಣ್ಣಿನ ಜೀವನ ಜೀವಾಳವಾಗಿದ್ದು, ತ್ರಿಪದಿ ಸಾಹಿತ್ಯವು ಜನಪದ ಸಾಹಿತ್ಯಕ್ಕೆ ತಾಯಿ ಬೇರು ಆಗಿದೆ ಎಂದರು.
ಇನ್ನೊರ್ವ ಅತಿಥಿ ರಾಜಶೇಖರ ಉಮರಾಣಿ ಅವರು ಮಾತನಾಡಿ, ಇಂದಿನ ಪಾಶ್ಚಾತ್ಯ ಸಂಸ್ಕೃತಿ, ಸಮೂಹ ಮಾಧ್ಯಮಗಳು, ಟಿವ್ಹಿ. ಮೋಬೈಲ್, ಫೇಸ್ ಬುಕ್ ನಂತಹ ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ನಮ್ಮ ಹಿರಿಯರ ಮತ್ತು ಮಹಿಳೆಯರ ಅನುಭವದಿಂದ ರಚಿತವಾದ ಗರತಿ ಹಾಡುಗಳು ಮಾಯವಾಗುತ್ತಿರುವುದು ತೀರ ಕಳವಳಕಾರಿ ಸಂಗತಿ. ಆದ್ದರಿಂದ ನಮ್ಮ ಸಂಸ್ಕಾರ-ಸಂಸ್ಕೃತಿ, ಮೌಲ್ಯಗಳು, ಗ್ರಾಮೀಣ ಸೊಗಡು, ಪರಂಪರೆ, ಸಂಪ್ರದಾಯ ಮತ್ತು ಆಚರಣೆಗಳ ಬಗ್ಗೆ ಅರಿವು ಮೂಡಿಸುವ ಗರತಿಯ ಹಾಡುಗಳು ನಮ್ಮ ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವಂತಾಗಬೇಕು. ಪ್ರತಿ ಮನೆಯಲ್ಲಿ ದೈನಂದಿನವಾಗಿ ಗರತಿ ಹಾಡುಗಳನ್ನು ಹಾಡುತ್ತ, ಸುಸಂಸ್ಕೃತ ಸಮಾಜ ನಿರ್ಮಾಣಕ್ಕಾಗಿ ನಾವೆಲ್ಲರೂ ಕಂಕಣಬದ್ಧರಾಗಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ರಾವಸಾಬ ಮೆಣಸಂಗಿ, ಶಿವಾನಂದ ಹಡಪದ, ಅಶೋಕ ಕಟಗಿಣ್ಣಿ, ಗುರುಬಸಯ್ಯ ಹಿರೇಮಠ ದಂಪತಿ, ವೈಶಾಲಿ ಕಾಮಗಳ, ಲಕ್ಷಿö್ಮÃ ಹಡಪದ ಮತ್ತು ದೇವಸ್ಥಾನದ ಅಧ್ಯಕ್ಷೆ ಶೋಭಾ ಚವ್ಹಾಣ, ಮತ್ತು ದೇಣಿಗೆ ನೀಡಿದ ದಾನಿಗಳನ್ನು ಮತ್ತು ದೇವಸ್ಥಾನದ ಯಶಸ್ಸಿಗೆ ಕಾರಣೀಕರ್ತರಾದ ಯುವ ಸದ್ಭಕ್ತರನ್ನು ಸನ್ಮಾನಿಸಲಾಯಿತು.
ಶ್ರೀ ಬಸವರಾಜ ಕುಂಬಾರ, ಡಾ, ರಾಜಕುಮಾರ ಜೊಳ್ಳಿ, ಸರೋಜಾ ಬಾಗಲಕೋಟ, ಶಶಿಕಲಾ ಸಿದರೆಡ್ಡಿ, ಆಶಾ ಬಾಸೂತಕರ, ಶ್ರೀದೇವಿ ಖೊದ್ನಾಪೂರ, ದಾನಮ್ಮ ಶೇಗಾವಿ, ಶಾಂತಾ ಹೆರಕಲ್, ಶಾಂತಾ ಕಪಾಳಿ, ಅಂಬಿಕಾ ರಜಪೂತ, ಶಾಂತಾಬಾಯಿ ದೊಡಮನಿ, ಲಲಿತಾ ಕಟ್ಟಿಮನಿ, ಪ್ರೇಮಾ ಕ್ಷತ್ರಿ, ಸುನಂದಾ ಕುಂಬಾರ, ಸಾವಿತ್ರಿ ಹಿರೇಮಠ ಇನ್ನಿತರರು ವೇದಿಕೆಯ ಮೇಲಿದ್ದರು.
ಇದೇ ಸಂದರ್ಭದಲ್ಲಿ ಮಕ್ಕಳು ಮತ್ತು ಮಹಿಳೆಯರಿಗಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ರಮ್ಯಾ ಜಗತಾಪ ನೇತೃತ್ವದಲ್ಲಿ ಭಾರತೀಯ ಸಂಸ್ಕೃತಿಯ ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಸರೋಜಾ ಬಾಗಲಕೋಟ ಪ್ರಾರ್ಥನಾ ಗೀತೆ ಪ್ರಚುರಪಡಿಸಿದರು. ಶಿಕ್ಷಕಿ ಸಾವಿತ್ರಿ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ಹಿರೇಮಠ ಸ್ವಾಗತಿಸಿದರು. ಹೇಮಾ ಅಂಗಡಿ ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.