Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಶನಿವಾರ ಮುಸ್ಲಿಂ ಬಾಂಧವರು ಈದ್‌ಉಲ್ ಫಿತ್ರ ಹಬ್ಬವನ್ನು(ರಂಜಾನ್) ಸಡಗರ, ಸಂಭ್ರಮದಿಂದ ಆಚರಿಸಿದರು. ಮಕ್ಕಳು, ಯುವಕರು, ಹಿರಿಯರು ಸೇರಿದಂತೆ ಎಲ್ಲರೂ ಹೊಸ ಬಟ್ಟೆ ತೊಟ್ಟು ಬೆಳಗ್ಗೆ ಆಯಾ ಗ್ರಾಮಗಳಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಪಟ್ಟಣದ ಮಸಬಿನಾಳ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ನಂತರ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಈದುಲ್ ಫಿತರ್ ಮೂವತ್ತು ದಿನದ ಉಪವಾಸ ಮಾಡಿ ಅಲ್ಲಾಹನ ನಾಮದಿಂದ ಜಕಾತ್ ಫೀತರಾ ನೀಡಿ ಜಗತ್ತಿನಲ್ಲಿ ಸುಖ ಶಾಂತಿ ನೆಮ್ಮದಿ ನೀಡಲಿ ಎಂದು ಅಲ್ಲಾಹನಿಗೆ ಪ್ರಾರ್ಥನೆಯನ್ನು ಮಾಡಲಾಯಿತು.
ಈದ್ಗಾ ಮೈದಾನದಲ್ಲಿ ಜರುಗಿದ ಸಾಮೂಹಿಕ ಪ್ರಾರ್ಥನೆಯಲ್ಲಿ ಹಾಫೀಜ್ ಅಬ್ದುಲ್ ರೆಹಮಾನ್ ಶಿವಣಗಿ ಮಾತನಾಡಿ, ಒಂದು ತಿಂಗಳ ಕಾಲ ಮುಸ್ಲಿಂ ಬಾಂಧವರು ರಂಜಾನ ಹಬ್ಬದಂಗವಾಗಿ ಉಪವಾಸ ವೃತ್ತ ಇದ್ದು. ಜಕಾತ್ ಚಿತ್ರಾ ನೀಡಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಈ ಹಬ್ಬವು ಜಗತ್ತಿನಲ್ಲಿ ಶಾಂತಿ, ನೆಮ್ಮದಿ, ಸುಖ ನೀಡುವಂತಾಗಲೆಂದು ಅಲ್ಲಾಹನಲ್ಲಿ ಪ್ರಾರ್ಥಿಸುವುದಾಗಿ ಹೇಳಿದ ಅವರು, ರಂಜಾನ ತಿಂಗಳಲ್ಲಿ ಉಪವಾಸವಿರುವದು ಆತ್ಮವನ್ನು ಶುದ್ಧಿ ಮಾಡಿಕೊಂಡಂತೆ. ಉಳಿದ ಅವಧಿಯಲ್ಲಿ ಎಲ್ಲ ಬಾಂಧವರು ಉತ್ತಮ ಜೀವನ ನಡೆಸುವಂತಾಗಬೇಕು. ರಂಜಾನ್ ಹಬ್ಬದ ಸಂದೇಶ ಅರಿತು ಎಲ್ಲರೂ ಸಂತಸ ಜೀವನ ತಮ್ಮದಾಗಿಸಿಕೊಳ್ಳಬೇಕು. ರಂಜಾನ ಹಬ್ಬವು ಈ ವರ್ಷ ಉತ್ತಮ ಮಳೆ-ಬೆಳೆ ತರುವಂತಾಗಲೆಂದರು.
ಸಾಮೂಹಿಕ ಪ್ರಾರ್ಥನೆಯಲ್ಲಿ ಧರ್ಮಗುರು ಹಾಫೀಜ ಮೊಹಮ್ಮದ್ ಅಲಿ ಮಿಲಿ, ಜಾಮಿಯಾ ಮಸ್ಜಿದ ಕಮಿಟಿ ಅಧ್ಯಕ್ಷ ಶಬ್ಬೀರ್ ಅಹ್ಮದ್ ನದಾಫ, ಇಬ್ರಾಹಿಂಸಾಬ ಬೊಮ್ಮನಹಳ್ಳಿ, ಅಂಜುಮನ ಕಮಿಟಿ ಅಧ್ಯಕ್ಷ ಚಾಂದಪಾಶಾ ಕೊರಬು, ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಮಹಿಬೂಬ ನಾಯ್ಕೋಡಿ, ಮದೀನಾ ಮಸ್ಜಿದ ಕಮಿಟಿ ಅಧ್ಯಕ್ಷ ಮಹೆಬೂಬಸಾಬ ಗಣಿ, ಒಮ್ಮೆ ಕುಲ್ಸುಮ್ ಮಜೀದ್ ಕಮಿಟಿ ಅಧ್ಯಕ್ಷ ಅಬ್ದುಲ್ ರಜಾಕ ಕೊರಬು ಸೇರಿದಂತೆ ಅಪಾರ ಸಂಖ್ಯೆಯ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.
ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದಂತೆ ಡಿ.ವೈ.ಎಸ್ಪಿ ಬಲ್ಲಪ್ಪ ನಂದಗಾಂವಿ, ಪಿಐ ಗುರುಶಾಂತ ದಾಶ್ಯಾಳ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸದ್ದಿಲ್ಲದೆ ಜಲಯೋಗದ ಸಾಧನೆ ಗೈದ ಪತ್ರಕರ್ತ ಸುನೀಲ ಗೋಡೆನ್ನವರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗ ದೂರ
    In ವಿಶೇಷ ಲೇಖನ
  • ನೆನಪಿನ ಗೂಡಲಿ ಒಲವಿನ ಬೆಳಕು
    In ವಿಶೇಷ ಲೇಖನ
  • ಅಪ್ಪನೆಂದರೆ ಆಲದ ಮರ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026
    In ದಿನಪತ್ರಿಕೆ
  • ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.