ವಿಜಯಪುರ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಕಿವಿಮಾತು
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಸೋಮವಾರ ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಆರಂಭದಲ್ಲಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಸಿಬ್ಬಂದಿಗಳಿಗೆ ಕರ ವಸೂಲಾತಿ, ಮನರೇಗಾ ಕೂಲಿಕಾರರ ಇಕೆವೈಸಿ ಸೇರಿದಂತೆ ಇತರೆ ವಿಷಯಗಳಲ್ಲಿ ಗ್ರಾಮ ಪಂಚಾಯತಿಯ ಎಲ್ಲಾ ಸಿಬ್ಬಂದಿಗಳಿಗೆ ಕೆಲಸ ಹಂಚಿಕೆ ಮಾಡಿ ಶೀಘ್ರಗತಿಯಲ್ಲಿ ಪ್ರಗತಿ ಸಾಧಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶಿಷ್ಟ ಜಾತಿಯ ಜನರಿಗಾಗಿ ಮೀಸಲಿಟ್ಟ ಸ್ಮಶಾನ ಜಾಗದ ಒತ್ತುವರಿ ತೆರವುಗೊಳಿಸಿ ಗ್ರಾಮ ಪಂಚಾಯತಿಯಿಂದ ತಂತಿ ಬೇಲಿ ಅಳವಡಿಸಿರುವದನ್ನು ಪರಿಶೀಲನೆ ಮಾಡಿದರು.
ರಸ್ತೆ ಅಗಲೀಕರಣದಲ್ಲಿ ಮನೆ ಕಳೆದುಕೊಂಡ ಜನರಿಗಾಗಿ ಕಾಯ್ದಿರಿಸಿದ ನಿವೇಶನ ಸ್ಥಳಕ್ಕೆ ಭೇಟಿ ಸದರಿ ಸ್ಥಳದಲ್ಲಿ ಯಾವದೇ ರೀತಿಯ ಒತ್ತುವರಿಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
ನಂತರ ಗ್ರಾಮದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ, ಗ್ರಾಮದ ಜನರು ಯಾವದೇ ಕಾರಣಕ್ಕೂ ಮೂಲಭೂತ ಸೌಕರ್ಯಗಳಿಂದ ವಂಚಿರಾಗಬಾರದು ಎಂದು ಸಲಹೆ ನೀಡಿದರು.
ಇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಆಡಳಿತಾಧಿಕಾರಿ ಚೇತನ ರಾಠೋಡ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಶ್ರೀ ತುಂಗಳ, ಗ್ರಾಮದ ಮುಖಂಡರುಗಳಾದ ಸುರೇಶ ಬಿರಾದಾರ, ಲಾಲಪ್ಪ ಗುಡಮನಿ, ಮಂಜು ನಡಗಡ್ಡಿ, ತಾಲೂಕು ಮಾಹಿತಿ, ಶಿಕ್ಷಣ & ಸಂವಹನ ಸಂಯೋಜಕ ಕಲ್ಲಪ್ಪ ನಂದರಗಿ, ಗ್ರಾಮ ಪಂಚಾಯತಿಯ ಸಚೀನ ಕಾಂಬಳೆ, ಲಕ್ಷ್ಮೀ ಮಹಲ. ಮಲ್ಲಪ್ಪ ಸಾಲಗಲ್ಲ ಸೇರಿದಂತೆ ಇತರರಿದ್ದರು.

