ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಗ್ರಾಮದ ವಿರಕ್ತಮಠದಿಂದ ಅಕ್ಕಮಹಾದೇವಿ ಜಯಂತಿ ಅಂಗವಾಗಿ ಪ್ರತಿ ವರ್ಷ ನೀಡಲಾಗುವ ರಾಜ್ಯ ಮಟ್ಟದ ‘ಅಕ್ಕ ಪ್ರಶಸ್ತಿ’ಗೆ ಕೇಂದ್ರ ಮಾಜಿ ಸಚಿವ ದಿ.ಅನಂತಕುಮಾರ ಪತ್ನಿ ಡಾ.ತೇಜಸ್ವಿನಿ ಅನಂತಕುಮಾರ ಭಾಜನರಾಗಿದ್ದಾರೆ.
ವಿಜ್ಞಾನ ಕ್ಷೇತ್ರ ಹಾಗೂ ಅದಮ್ಯಚೇತನ ಫೌಂಡೆಷನ್ ಮೂಲಕ ಸಾಹಿತ್ಯ, ಶೈಕ್ಷಣಿಕ, ಸಾಮಾಜಿಕವಾಗಿ ಮಾಡಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಏ.೦೨ ರಂದು ಶ್ರೀಮಠದಲ್ಲಿ ನಡೆಯುವ ಲಿಂ. ವಿರಕ್ತ ಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವ ಹಾಗೂ ಅಕ್ಕ ಮಹಾದೇವಿ ಜಯಂತಿ ಉಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ತಿಳಿಸಿದ್ದಾರೆ.

